ಜೆಡಿಎಸ್ ಮುಖಂಡರ ವಿರುದ್ಧ ಮುನಿಸು: ಕಳೆದ ಒಂದು ವರ್ಷದಿಂದ ನಾಣಯ್ಯ ಅವರು ಜೆಡಿಎಸ್ನಲ್ಲಿ ಸಕ್ರಿಯವಾಗಿರಲಿಲ್ಲ. ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂಬ ಅಸಮಾಧಾನ ಅವರಲ್ಲಿತ್ತು. ಜೆಡಿಎಸ್ನಿಂದ ಮಡಿಕೇರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಮಾಜಿ ಸಚಿವ ಬಿ.ಎ. ಜೀವಿಜಯ ಹಾಗೂ ಇವರ ನಡುವೆ ವೈಮನಸ್ಸು ಉಂಟಾಗಿತ್ತು.