ನವದೆಹಲಿ: ‘ಪ್ರಸಕ್ತ ಹಣಕಾಸು ವರ್ಷಕ್ಕೆ ವಿತ್ತೀಯ ಕೊರತೆ ಗುರಿ (ಶೇ 3.3) ಪರಿಷ್ಕರಣೆ ಮಾಡುವ ಆಲೋಚನೆ ಇಲ್ಲ’ ಎಂದುಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರುಸ್ಪಷ್ಟಪಡಿಸಿದ್ದಾರೆ.
ಕಾರ್ಪೊರೇಟ್ ತೆರಿಗೆ ದರ ಕಡಿತದಿಂದ ವಿತ್ತೀಯ ಕೊರತೆ ಹಿಗ್ಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಅವರು ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ.
‘ವಿತ್ತೀಯ ಕೊರತೆ, ಸಾಲ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಘೋಷಿಸಿರುವ ಗುರಿಯಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ. ವಾರ್ಷಿಕ ಬಜೆಟ್ಗೂ ಮುನ್ನವೇ ನಿರ್ಧಾರಕ್ಕೆ ಬರಲಾಗುವುದು’ ಎಂದು ಅವರು ಹೇಳಿದ್ದಾರೆ..
ಹೂಡಿಕೆ ಆಕರ್ಷಣೆ: ‘ಕಾರ್ಪೊರೇಟ್ ತೆರಿಗೆ ದರ ಇಳಿಕೆಯಿಂದ ಆ್ಯಪಲ್ನಂತಹ ದೈತ್ಯ ಕಂಪನಿಗಳು ಭಾರತದಲ್ಲಿ ತಯಾರಿಕಾ ಘಟಕ ಸ್ಥಾಪನೆಗೆ ಸೂಕ್ತ ಅವಕಾಶ ಒದಗಿ ಬಂದಿದೆ ಎಂದು ಅವರು ತಿಳಿಸಿದ್ದಾರೆ.