<p><strong>ನವದೆಹಲಿ:</strong> ‘ಬ್ಯಾಂಕಿಂಗ್ ಉದ್ಯಮದ ವಸೂಲಾಗದ ಸಾಲದ (ಎನ್ಪಿಎ) ಪ್ರಮಾಣವು ಹಣಕಾಸು ವರ್ಷದ ಅಂತ್ಯಕ್ಕೆ ಸುಧಾರಿಸಲಿದೆ’ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ನ (ಎಸ್ಬಿಐ) ಅಧ್ಯಕ್ಷ ರಜನೀಶ್ ಕುಮಾರ್ ತಿಳಿಸಿದ್ದಾರೆ.</p>.<p>‘2020ರ ಮಾರ್ಚ್ 31ರ ವೇಳೆಗೆ ಬಹುತೇಕ ಎಲ್ಲಾ ಬ್ಯಾಂಕ್ಗಳ ಸ್ಥಿತಿಯೂ ಸುಧಾರಿಸಲಿದೆ’ ಎಂದು ಹೇಳಿದ್ದಾರೆ.</p>.<p>‘ಮೂಲಸೌಕರ್ಯ ಮತ್ತು ಗ್ರಾಹಕರ ಸಾಲ ನೀಡಿಕೆಗೆ ಹೆಚ್ಚಿನ ಅವಕಾಶಗಳಿವೆ. ಹೇಳಿಕೊಳ್ಳುವಂತಹ ಮಟ್ಟದಲ್ಲಿ ಗ್ರಾಹಕ ಬೇಡಿಕೆ ಕುಸಿತ ಕಂಡಿಲ್ಲ’ ಎಂದುಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) 92ನೇ ವಾರ್ಷಿಕ ಸಮಾವೇಶದಲ್ಲಿ ಅವರು ಹೇಳಿದ್ದಾರೆ.</p>.<p>ವ್ಯವಸ್ಥೆಯಲ್ಲಿ ಬಂಡವಾಳದ ಕೊರತೆ ಇಲ್ಲ ಎಂದಿರುವ ಅವರು, ‘ಕಾರ್ಪೊರೇಟ್ ವಲಯವು ಸಾಕಷ್ಟು ಪ್ರಮಾಣದಲ್ಲಿ ಸಾಲ ಪಡೆಯುತ್ತಿಲ್ಲ. ತಮ್ಮ ಸಾಮರ್ಥ್ಯವನ್ನೂ ಸರಿಯಾಗಿ ಸದ್ಬಳಕೆ ಮಾಡಿಕೊಳ್ಳುತ್ತಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>‘ದೂರಸಂಪರ್ಕ ವಲಯಕ್ಕೆ ಸಾಲ ನೀಡುವುದು ಸುರಕ್ಷಿತವಲ್ಲ. ಸರ್ಕಾರವೇ ಸ್ಪೆಕ್ಟ್ರಂ ಹರಾಜು ಹಾಕುವುದರಿಂದ ಸುರಕ್ಷಿತ ಎಂದು ಪತ್ರದಲ್ಲಿ ಇರಲಿದೆ. ಆದರೆ, ವಾಸ್ತವದಲ್ಲಿ ಸಂಪೂರ್ಣವಾಗಿ ಅಸುರಕ್ಷಿತವಾಗಿದೆ. ಹೀಗಾಗಿ ಸಾಲ ನೀಡುವುದಕ್ಕೂ ಮುನ್ನ ಮರುಪಾವತಿ ಆಗುವುದೇ ಎನ್ನುವುದನ್ನೂ ಗಮನದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ’ ಎಂದು ಅವರು ಹೇಳಿದ್ದಾರೆ.</p>.<p class="Subhead"><strong>ಬಡ್ಡಿದರ ಕಡಿತ: </strong>ರೆಪೊ ದರ ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುವ ಕುರಿತು ಮಾತನಾಡಿದ ಅವರು, ‘ಠೇವಣಿಗಳ ಮೇಲಿನ ಬಡ್ಡಿದರದಲ್ಲಿ ಇಳಿಕೆ ಮಾಡದೇ ಸಾಲದ ಬಡ್ಡಿದರಗಳಲ್ಲಿ ಇಳಿಕೆ ಮಾಡಲು ಆಗುವುದಿಲ್ಲ. ಆದರೆ,ಒಂದು ನಿರ್ದಿಷ್ಟ ಮಿತಿಯಾಚೆಗೆ ಠೇವಣಿಗಳ ಮೇಲಿನ ಬಡ್ಡಿದರಗಳಲ್ಲಿ ಕಡಿಮೆ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ.</p>.<p>ಉಳಿತಾಯ ಖಾತೆಗಳಲ್ಲಿನ ಠೇವಣಿಗೆ ಸದ್ಯ ಶೇ3 ರಿಂದ ಶೇ 4 ರವರೆಗೆ ಬಡ್ಡಿದರ ಇದೆ. ಸಾಲಗಳ ಮೇಲಿನ ಬಡ್ಡಿದರವು ಶೇ 8 ಮತ್ತು ಅದಕ್ಕಿಂತಲೂ ಅಧಿಕ ಪ್ರಮಾಣದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬ್ಯಾಂಕಿಂಗ್ ಉದ್ಯಮದ ವಸೂಲಾಗದ ಸಾಲದ (ಎನ್ಪಿಎ) ಪ್ರಮಾಣವು ಹಣಕಾಸು ವರ್ಷದ ಅಂತ್ಯಕ್ಕೆ ಸುಧಾರಿಸಲಿದೆ’ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ನ (ಎಸ್ಬಿಐ) ಅಧ್ಯಕ್ಷ ರಜನೀಶ್ ಕುಮಾರ್ ತಿಳಿಸಿದ್ದಾರೆ.</p>.<p>‘2020ರ ಮಾರ್ಚ್ 31ರ ವೇಳೆಗೆ ಬಹುತೇಕ ಎಲ್ಲಾ ಬ್ಯಾಂಕ್ಗಳ ಸ್ಥಿತಿಯೂ ಸುಧಾರಿಸಲಿದೆ’ ಎಂದು ಹೇಳಿದ್ದಾರೆ.</p>.<p>‘ಮೂಲಸೌಕರ್ಯ ಮತ್ತು ಗ್ರಾಹಕರ ಸಾಲ ನೀಡಿಕೆಗೆ ಹೆಚ್ಚಿನ ಅವಕಾಶಗಳಿವೆ. ಹೇಳಿಕೊಳ್ಳುವಂತಹ ಮಟ್ಟದಲ್ಲಿ ಗ್ರಾಹಕ ಬೇಡಿಕೆ ಕುಸಿತ ಕಂಡಿಲ್ಲ’ ಎಂದುಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) 92ನೇ ವಾರ್ಷಿಕ ಸಮಾವೇಶದಲ್ಲಿ ಅವರು ಹೇಳಿದ್ದಾರೆ.</p>.<p>ವ್ಯವಸ್ಥೆಯಲ್ಲಿ ಬಂಡವಾಳದ ಕೊರತೆ ಇಲ್ಲ ಎಂದಿರುವ ಅವರು, ‘ಕಾರ್ಪೊರೇಟ್ ವಲಯವು ಸಾಕಷ್ಟು ಪ್ರಮಾಣದಲ್ಲಿ ಸಾಲ ಪಡೆಯುತ್ತಿಲ್ಲ. ತಮ್ಮ ಸಾಮರ್ಥ್ಯವನ್ನೂ ಸರಿಯಾಗಿ ಸದ್ಬಳಕೆ ಮಾಡಿಕೊಳ್ಳುತ್ತಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>‘ದೂರಸಂಪರ್ಕ ವಲಯಕ್ಕೆ ಸಾಲ ನೀಡುವುದು ಸುರಕ್ಷಿತವಲ್ಲ. ಸರ್ಕಾರವೇ ಸ್ಪೆಕ್ಟ್ರಂ ಹರಾಜು ಹಾಕುವುದರಿಂದ ಸುರಕ್ಷಿತ ಎಂದು ಪತ್ರದಲ್ಲಿ ಇರಲಿದೆ. ಆದರೆ, ವಾಸ್ತವದಲ್ಲಿ ಸಂಪೂರ್ಣವಾಗಿ ಅಸುರಕ್ಷಿತವಾಗಿದೆ. ಹೀಗಾಗಿ ಸಾಲ ನೀಡುವುದಕ್ಕೂ ಮುನ್ನ ಮರುಪಾವತಿ ಆಗುವುದೇ ಎನ್ನುವುದನ್ನೂ ಗಮನದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ’ ಎಂದು ಅವರು ಹೇಳಿದ್ದಾರೆ.</p>.<p class="Subhead"><strong>ಬಡ್ಡಿದರ ಕಡಿತ: </strong>ರೆಪೊ ದರ ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುವ ಕುರಿತು ಮಾತನಾಡಿದ ಅವರು, ‘ಠೇವಣಿಗಳ ಮೇಲಿನ ಬಡ್ಡಿದರದಲ್ಲಿ ಇಳಿಕೆ ಮಾಡದೇ ಸಾಲದ ಬಡ್ಡಿದರಗಳಲ್ಲಿ ಇಳಿಕೆ ಮಾಡಲು ಆಗುವುದಿಲ್ಲ. ಆದರೆ,ಒಂದು ನಿರ್ದಿಷ್ಟ ಮಿತಿಯಾಚೆಗೆ ಠೇವಣಿಗಳ ಮೇಲಿನ ಬಡ್ಡಿದರಗಳಲ್ಲಿ ಕಡಿಮೆ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ.</p>.<p>ಉಳಿತಾಯ ಖಾತೆಗಳಲ್ಲಿನ ಠೇವಣಿಗೆ ಸದ್ಯ ಶೇ3 ರಿಂದ ಶೇ 4 ರವರೆಗೆ ಬಡ್ಡಿದರ ಇದೆ. ಸಾಲಗಳ ಮೇಲಿನ ಬಡ್ಡಿದರವು ಶೇ 8 ಮತ್ತು ಅದಕ್ಕಿಂತಲೂ ಅಧಿಕ ಪ್ರಮಾಣದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>