ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬರೆದ ಲೇಖನವೊಂದನ್ನು ಉಲ್ಲೇಖಿಸಿ ರಾಜನ್ ಅವರು, ‘ಲೇಖನವು ಜನಧನ್ ಯೋಜನೆಯ ಯಶಸ್ಸಿನ ಬಗ್ಗೆ ಮಾತನಾಡುತ್ತದೆ. ಆದರೆ, ಕೆಲವು ಅರ್ಥಶಾಸ್ತ್ರಜ್ಞರು ಇದರ ವಿಚಾರದಲ್ಲಿ ಭಿನ್ನ ಅಭಿಪ್ರಾಯ ಹೊಂದಿದ್ದಾರೆ’ ಎಂದು ಹೇಳಿದ್ದಾರೆ. ‘ಜನಧನ್ ಯೋಜನೆಯು ಹೇಳಿಕೊಂಡ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ’ ಎಂದೂ ರಾಜನ್ ಹೇಳಿದ್ದಾರೆ.