<p><strong>ಬೆಂಗಳೂರು:</strong> ರಾಜ್ಯದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕೂಡಗಿಯಲ್ಲಿರುವ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮವು (ಎನ್ಟಿಪಿಸಿ) ಅತ್ಯಾಧುನಿಕ ಕಾರ್ಬನ್ ಡೈ ಆಕ್ಸೈಡ್ ಬ್ಯಾಟರಿಯನ್ನು ಬಿಡುಗಡೆ ಮಾಡಿದೆ.</p>.<p>ಎನ್ಟಿಪಿಸಿಯ ಎನರ್ಜಿ ಟೆಕ್ನಾಲಜಿ ರಿಸರ್ಚ್ ಅಲೆಯನ್ಸ್ನಿಂದ ಇದನ್ನು ಅಭಿವೃದ್ಧಿಪಡಿಸಲಾಗಿದೆ. ತ್ರಿವೇಣಿ ಟರ್ಬೈನ್ ಲಿಮಿಟೆಡ್ ಮತ್ತು ಇಟಲಿಯ ಎನರ್ಜಿ ಡೋಮ್ ಸಹಯೋಗದಡಿ ಕಾರ್ಯಗತಗೊಳಿಸಲಾಗುತ್ತದೆ ಎಂದು ಕಂಪನಿ ತಿಳಿಸಿದೆ.</p>.<p>ಪ್ರತಿ ಗಂಟೆಗೆ 160 ಮೆಗಾವಾಟ್ ಸಾಮರ್ಥ್ಯ ಹೊಂದಿರುವ ಈ ಬ್ಯಾಟರಿಯನ್ನು ಕೂಡಗಿಯಲ್ಲಿ ಸ್ಥಾಪಿಸಲಾಗುವುದು. ಈ ಯೋಜನೆಯು ಇಂಧನ ವಲಯದ ವೈವಿಧ್ಯಕ್ಕೆ ಸಹಕಾರಿಯಾಗಲಿದೆ. ಜೊತೆಗೆ, ಕಂಪನಿಯ ನವೀಕರಿಸಬಹುದಾದ ಇಂಧನ ಉತ್ಪಾದನೆ ಹೆಚ್ಚಳಕ್ಕೆ ನೆರವಾಗಲಿದೆ. ಇದು ‘ಮೇಕ್ ಇನ್ ಇಂಡಿಯಾ’ ಮತ್ತು ‘ಆತ್ಮನಿರ್ಭರ ಭಾರತ’ ನಿರ್ಮಾಣದ ಗುರಿ ಸಾಧನೆಯ ಬದ್ಧತೆಗೆ ಕನ್ನಡಿ ಹಿಡಿದಿದೆ ಎಂದು ತಿಳಿಸಿದೆ.</p>.<p>‘ದೀರ್ಘಾವಧಿಯ ಶಕ್ತಿ ಸಂಗ್ರಹಣೆ ಕ್ಷೇತ್ರದಲ್ಲಿ ಇದು ಹೆಗ್ಗುರುತಾಗಿದೆ. ಕೂಡಗಿ ಸ್ಥಾವರದಲ್ಲಿ ಕಾರ್ಬನ್ ಡೈ ಆಕ್ಸೈಡ್ ಬ್ಯಾಟರಿ ಶಕ್ತಿ ಸಂಗ್ರಹ ತಂತ್ರಜ್ಞಾನ ಅನುಷ್ಠಾನಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಎನ್ಟಿಪಿಸಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗುರುದೀಪ್ ಸಿಂಗ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕೂಡಗಿಯಲ್ಲಿರುವ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮವು (ಎನ್ಟಿಪಿಸಿ) ಅತ್ಯಾಧುನಿಕ ಕಾರ್ಬನ್ ಡೈ ಆಕ್ಸೈಡ್ ಬ್ಯಾಟರಿಯನ್ನು ಬಿಡುಗಡೆ ಮಾಡಿದೆ.</p>.<p>ಎನ್ಟಿಪಿಸಿಯ ಎನರ್ಜಿ ಟೆಕ್ನಾಲಜಿ ರಿಸರ್ಚ್ ಅಲೆಯನ್ಸ್ನಿಂದ ಇದನ್ನು ಅಭಿವೃದ್ಧಿಪಡಿಸಲಾಗಿದೆ. ತ್ರಿವೇಣಿ ಟರ್ಬೈನ್ ಲಿಮಿಟೆಡ್ ಮತ್ತು ಇಟಲಿಯ ಎನರ್ಜಿ ಡೋಮ್ ಸಹಯೋಗದಡಿ ಕಾರ್ಯಗತಗೊಳಿಸಲಾಗುತ್ತದೆ ಎಂದು ಕಂಪನಿ ತಿಳಿಸಿದೆ.</p>.<p>ಪ್ರತಿ ಗಂಟೆಗೆ 160 ಮೆಗಾವಾಟ್ ಸಾಮರ್ಥ್ಯ ಹೊಂದಿರುವ ಈ ಬ್ಯಾಟರಿಯನ್ನು ಕೂಡಗಿಯಲ್ಲಿ ಸ್ಥಾಪಿಸಲಾಗುವುದು. ಈ ಯೋಜನೆಯು ಇಂಧನ ವಲಯದ ವೈವಿಧ್ಯಕ್ಕೆ ಸಹಕಾರಿಯಾಗಲಿದೆ. ಜೊತೆಗೆ, ಕಂಪನಿಯ ನವೀಕರಿಸಬಹುದಾದ ಇಂಧನ ಉತ್ಪಾದನೆ ಹೆಚ್ಚಳಕ್ಕೆ ನೆರವಾಗಲಿದೆ. ಇದು ‘ಮೇಕ್ ಇನ್ ಇಂಡಿಯಾ’ ಮತ್ತು ‘ಆತ್ಮನಿರ್ಭರ ಭಾರತ’ ನಿರ್ಮಾಣದ ಗುರಿ ಸಾಧನೆಯ ಬದ್ಧತೆಗೆ ಕನ್ನಡಿ ಹಿಡಿದಿದೆ ಎಂದು ತಿಳಿಸಿದೆ.</p>.<p>‘ದೀರ್ಘಾವಧಿಯ ಶಕ್ತಿ ಸಂಗ್ರಹಣೆ ಕ್ಷೇತ್ರದಲ್ಲಿ ಇದು ಹೆಗ್ಗುರುತಾಗಿದೆ. ಕೂಡಗಿ ಸ್ಥಾವರದಲ್ಲಿ ಕಾರ್ಬನ್ ಡೈ ಆಕ್ಸೈಡ್ ಬ್ಯಾಟರಿ ಶಕ್ತಿ ಸಂಗ್ರಹ ತಂತ್ರಜ್ಞಾನ ಅನುಷ್ಠಾನಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಎನ್ಟಿಪಿಸಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗುರುದೀಪ್ ಸಿಂಗ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>