ಕೋಲ್ಕತ್ತ: ಕರ್ನಾಟಕ ತಂಡ 72ನೇ ಸಂತೋಷ್ ಟ್ರೋಫಿಗಾಗಿ ಇಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್ಷಿಪ್ ಸೆಮಿಫೈನಲ್ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್ ಬೆಂಗಾಲ್ ಎದುರು ಆಡಲಿದೆ.
ಬುಧವಾರ ನಡೆದ ಪಂದ್ಯದಲ್ಲಿ ಕರ್ನಾಟಕ ತಂಡ 1–0 ಗೋಲುಗಳಿಂದ ಮಿಜೋರಾಂಗೆ ಸೋಲುಣಿಸಿ ನಾಲ್ಕರ ಘಟ್ಟಕ್ಕೆ ಪ್ರವೇಶಿಸಿದೆ. ಈಗಾಗಲೇ ಸೆಮಿಫೈನಲ್ ಪ್ರವೇಶಿಸಿರುವ ಮಿಜೋರಾಂ ತಂಡವು ಮಾರ್ಚ್ 30ರಂದು ನಡೆಯುವ ಮೊದಲ ಪಂದ್ಯದಲ್ಲಿ ‘ಎ’ ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ಕೇರಳ ತಂಡದ ಎದುರು ಆಡಲಿದೆ.