ಲೋಕಸಭೆಗೆ ಚುನಾವಣೆ ಸಮೀಪಿಸುತ್ತಿದೆ. ಹಾಗಾಗಿ, ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಮಹಾರಾಷ್ಟ್ರದಲ್ಲಿ ರಾಬಿ ಅವಧಿಯಲ್ಲಿ ಕಡಿಮೆ ಬಿತ್ತನೆಯಾಗಿದ್ದು, ಉತ್ಪಾದನೆಯೂ ಕಡಿಮೆಯಾಗುವ ನಿರೀಕ್ಷೆಯಿದೆ. ಹಾಗಾಗಿ, ಮಾರ್ಚ್ 31ರ ನಂತರವೂ ರಫ್ತು ನಿರ್ಬಂಧವನ್ನು ಸಡಿಲಿಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.