<p><strong>ಪುಣೆ / ನಾಸಿಕ್ (ಪಿಟಿಐ):</strong> ಈರುಳ್ಳಿ ಬೆಲೆ ಕುಸಿತದ ಕಾರಣದಿಂದ ಪ್ರತಿ ಕೆ.ಜಿಗೆ ₹12.35ರಂತೆ (ಕ್ವಿಂಟಲ್ಗೆ ₹1,235) ರೈತರಿಂದ ಈರುಳ್ಳಿ ಖರೀದಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.</p>.<p>ಮಹಾರಾಷ್ಟ್ರದ ಸತಾರಾದಲ್ಲಿ ಮಾತನಾಡಿದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಪಶ್ಚಿಮ ಏಷ್ಯಾದ ಸಂಘರ್ಷದಿಂದ ಈರುಳ್ಳಿ ರಫ್ತಿಗೆ ತೊಂದರೆ ಉಂಟಾಗಿದ್ದು, ಬೆಲೆ ಕುಸಿದಿದೆ. ಹೀಗಾಗಿ, ಶುಕ್ರವಾರದಿಂದಲೇ ಖರೀದಿಸಲಾಗುವುದು ಎಂದು ಹೇಳಿದ್ದಾರೆ.</p>.<p>ಈರುಳ್ಳಿ ದರದ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಜೊತೆ ಚೌಹಾಣ್ ಮಾತುಕತೆ ನಡೆಸಿದ ಬಳಿಕ ಈ ಘೋಷಣೆ ಮಾಡಿದ್ದಾರೆ.</p>.<p>ವಿರೋಧ: ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಲ್ ಈರುಳ್ಳಿಯನ್ನು ₹1,235ರಂತೆ ಖರೀದಿಸುವ ನಿರ್ಧಾರವನ್ನು ಮಹಾರಾಷ್ಟ್ರದ ಈರುಳ್ಳಿ ಬೆಳೆಗಾರರ ಸಂಘ ವಿರೋಧಿಸಿದ್ದು, ಕ್ವಿಂಟಲ್ಗೆ ಕನಿಷ್ಠ ₹3 ಸಾವಿರ ನೀಡಬೇಕು ಎಂದು ಒತ್ತಾಯಿಸಿದೆ.</p>.<p>2023ರಲ್ಲಿ ದೇವೇಂದ್ರ ಫಡಣವೀಸ್ ಅವರು ಉಪ ಮುಖ್ಯಮಂತ್ರಿ ಆಗಿದ್ದರು. ಅಂದು ಕ್ವಿಂಟಲ್ಗೆ ₹2,410ರಂತೆ ಈರುಳ್ಳಿ ಖರೀದಿಸಲಾಗಿತ್ತು. ಆದರೆ, ಇಂದು ₹1,235ರಂತೆ ಖರೀದಿಸ ಲಾಗುತ್ತಿದೆ. ಇದು ಉತ್ಪಾದನಾ ವೆಚ್ಚಕ್ಕೂ ಸಾಕಾಗುವುದಿಲ್ಲ ಎಂದು ಹೇಳಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-51-1045786713</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ / ನಾಸಿಕ್ (ಪಿಟಿಐ):</strong> ಈರುಳ್ಳಿ ಬೆಲೆ ಕುಸಿತದ ಕಾರಣದಿಂದ ಪ್ರತಿ ಕೆ.ಜಿಗೆ ₹12.35ರಂತೆ (ಕ್ವಿಂಟಲ್ಗೆ ₹1,235) ರೈತರಿಂದ ಈರುಳ್ಳಿ ಖರೀದಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.</p>.<p>ಮಹಾರಾಷ್ಟ್ರದ ಸತಾರಾದಲ್ಲಿ ಮಾತನಾಡಿದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಪಶ್ಚಿಮ ಏಷ್ಯಾದ ಸಂಘರ್ಷದಿಂದ ಈರುಳ್ಳಿ ರಫ್ತಿಗೆ ತೊಂದರೆ ಉಂಟಾಗಿದ್ದು, ಬೆಲೆ ಕುಸಿದಿದೆ. ಹೀಗಾಗಿ, ಶುಕ್ರವಾರದಿಂದಲೇ ಖರೀದಿಸಲಾಗುವುದು ಎಂದು ಹೇಳಿದ್ದಾರೆ.</p>.<p>ಈರುಳ್ಳಿ ದರದ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಜೊತೆ ಚೌಹಾಣ್ ಮಾತುಕತೆ ನಡೆಸಿದ ಬಳಿಕ ಈ ಘೋಷಣೆ ಮಾಡಿದ್ದಾರೆ.</p>.<p>ವಿರೋಧ: ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಲ್ ಈರುಳ್ಳಿಯನ್ನು ₹1,235ರಂತೆ ಖರೀದಿಸುವ ನಿರ್ಧಾರವನ್ನು ಮಹಾರಾಷ್ಟ್ರದ ಈರುಳ್ಳಿ ಬೆಳೆಗಾರರ ಸಂಘ ವಿರೋಧಿಸಿದ್ದು, ಕ್ವಿಂಟಲ್ಗೆ ಕನಿಷ್ಠ ₹3 ಸಾವಿರ ನೀಡಬೇಕು ಎಂದು ಒತ್ತಾಯಿಸಿದೆ.</p>.<p>2023ರಲ್ಲಿ ದೇವೇಂದ್ರ ಫಡಣವೀಸ್ ಅವರು ಉಪ ಮುಖ್ಯಮಂತ್ರಿ ಆಗಿದ್ದರು. ಅಂದು ಕ್ವಿಂಟಲ್ಗೆ ₹2,410ರಂತೆ ಈರುಳ್ಳಿ ಖರೀದಿಸಲಾಗಿತ್ತು. ಆದರೆ, ಇಂದು ₹1,235ರಂತೆ ಖರೀದಿಸ ಲಾಗುತ್ತಿದೆ. ಇದು ಉತ್ಪಾದನಾ ವೆಚ್ಚಕ್ಕೂ ಸಾಕಾಗುವುದಿಲ್ಲ ಎಂದು ಹೇಳಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-51-1045786713</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>