<p class="title"><strong>ನವದೆಹಲಿ: </strong>ಹೆಚ್ಚುವರಿ ದಾಸ್ತಾನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಈರುಳ್ಳಿ ಬೆಲೆಯಲ್ಲಿ ಸ್ಥಿರತೆ ತರಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಟೊಮೆಟೊ ಮತ್ತು ಆಲೂಗಡ್ಡೆ ಬೆಲೆಯನ್ನು ತಗ್ಗಿಸಲು ಕೂಡ ಪ್ರಯತ್ನ ನಡೆದಿದೆ ಎಂದು ತಿಳಿಸಿದೆ.</p>.<p class="title">ಈರುಳ್ಳಿ ದಾಸ್ತಾನನ್ನು ಆಗಸ್ಟ್ ಕೊನೆಯ ವಾರದಿಂದಲೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಕೇಂದ್ರ ತಿಳಿಸಿದೆ. ಇದರ ಪರಿಣಾಮವಾಗಿ ದೇಶದ ಮಹಾನಗರಗಳಲ್ಲಿ ಈರುಳ್ಳಿ ಬೆಲೆಯು ಅಕ್ಟೋಬರ್ 14ರ ವೇಳೆಗೆ ಕೆ.ಜಿ.ಗೆ ಸರಾಸರಿ ₹ 42ರಿಂದ ₹ 57ರ ಮಟ್ಟಕ್ಕೆ ಬಂದಿದೆ.</p>.<p class="title">ಅಖಿಲ ಭಾರತ ಸರಾಸರಿ ಮಟ್ಟಕ್ಕಿಂತ ಈರುಳ್ಳಿ ಬೆಲೆ ಜಾಸ್ತಿ ಆಗಿರುವ ರಾಜ್ಯಗಳಲ್ಲಿ, ಹಿಂದಿನ ತಿಂಗಳ ಬೆಲೆಯ ಮಟ್ಟಕ್ಕಿಂತ ಹೆಚ್ಚಾಗಿರುವ ಕಡೆಗಳಲ್ಲಿ ಈರುಳ್ಳಿ ದಾಸ್ತಾನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ವ್ಯವಹಾರಗಳ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p class="title">ಅಕ್ಟೋಬರ್ 12ರವರೆಗೆ ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಒಟ್ಟು 67,357 ಟನ್ ಈರುಳ್ಳಿಯನ್ನು ಬಿಡುಗಡೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಹೆಚ್ಚುವರಿ ದಾಸ್ತಾನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಈರುಳ್ಳಿ ಬೆಲೆಯಲ್ಲಿ ಸ್ಥಿರತೆ ತರಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಟೊಮೆಟೊ ಮತ್ತು ಆಲೂಗಡ್ಡೆ ಬೆಲೆಯನ್ನು ತಗ್ಗಿಸಲು ಕೂಡ ಪ್ರಯತ್ನ ನಡೆದಿದೆ ಎಂದು ತಿಳಿಸಿದೆ.</p>.<p class="title">ಈರುಳ್ಳಿ ದಾಸ್ತಾನನ್ನು ಆಗಸ್ಟ್ ಕೊನೆಯ ವಾರದಿಂದಲೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಕೇಂದ್ರ ತಿಳಿಸಿದೆ. ಇದರ ಪರಿಣಾಮವಾಗಿ ದೇಶದ ಮಹಾನಗರಗಳಲ್ಲಿ ಈರುಳ್ಳಿ ಬೆಲೆಯು ಅಕ್ಟೋಬರ್ 14ರ ವೇಳೆಗೆ ಕೆ.ಜಿ.ಗೆ ಸರಾಸರಿ ₹ 42ರಿಂದ ₹ 57ರ ಮಟ್ಟಕ್ಕೆ ಬಂದಿದೆ.</p>.<p class="title">ಅಖಿಲ ಭಾರತ ಸರಾಸರಿ ಮಟ್ಟಕ್ಕಿಂತ ಈರುಳ್ಳಿ ಬೆಲೆ ಜಾಸ್ತಿ ಆಗಿರುವ ರಾಜ್ಯಗಳಲ್ಲಿ, ಹಿಂದಿನ ತಿಂಗಳ ಬೆಲೆಯ ಮಟ್ಟಕ್ಕಿಂತ ಹೆಚ್ಚಾಗಿರುವ ಕಡೆಗಳಲ್ಲಿ ಈರುಳ್ಳಿ ದಾಸ್ತಾನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ವ್ಯವಹಾರಗಳ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p class="title">ಅಕ್ಟೋಬರ್ 12ರವರೆಗೆ ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಒಟ್ಟು 67,357 ಟನ್ ಈರುಳ್ಳಿಯನ್ನು ಬಿಡುಗಡೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>