<p><strong>ಬೆಂಗಳೂರು:</strong> ಬೆಂಗಳೂರು ಸೇರಿದಂತೆ ದೇಶದ ಪ್ರಮುಖ 15 ನಗರಗಳಲ್ಲಿ ಫೆಬ್ರುವರಿ 25ರಂದು ಅತಿ ವಿರಳ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಆರ್ಗನೈಸೇಷನ್ ಫಾರ್ ರೇರ್ ಡಿಸೀಸಸ್ ಇಂಡಿಯಾದಿಂದ (ಓಆರ್ಡಿಐ) 7 ಕಿ.ಮೀ ದೂರದಷ್ಟು ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಕುಮಾರ್ ಶಿರೋಲ್ ಹೇಳಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಅಶೋಕ ನಗರದ ಸೇಂಟ್ ಜೋಸೆಫ್ಸ್ ಇಂಡಿಯನ್ ಹೈಸ್ಕೂಲ್ ಮೈದಾನದಿಂದ ಆರಂಭವಾಗಲಿರುವ ಮ್ಯಾರಥಾನ್ಗೆ (ರೇಸ್ಫಾರ್ 7) ನಟ ರಮೇಶ್ ಅರವಿಂದ್ ಅವರು ಬೆಳಿಗ್ಗೆ 7 ಗಂಟೆಗೆ ಚಾಲನೆ ನೀಡಲಿದ್ದಾರೆ. ಈ ಜಾಗೃತಿ ಓಟದಲ್ಲಿ ಭಾಗವಹಿಸುವವರು ರೇಸ್ಫಾರ್ 7 ವೆಬ್ಸೈಟ್ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದರು.</p>.<p>ದೇಶದಲ್ಲಿರುವ ಅತಿ ವಿರಳವಾದ ಕಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಈ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಚಿಕಿತ್ಸಾ ಸೌಲಭ್ಯ ಲಭ್ಯವಾಗುವಂತೆ ಮಾಡುವುದು ಈ ಕಾರ್ಯಕ್ರಮ ಉದ್ದೇಶವಾಗಿದೆ ಎಂದು ಹೇಳಿದರು.</p>.<p>2016ರಲ್ಲಿ ಸಂಸ್ಥೆಯನ್ನು ಸ್ಥಾಪಿಸಲಾಯಿತು. ಅಲ್ಲಿಂದ ಇಲ್ಲಿಯವರೆಗೆ ಪ್ರತಿ ವರ್ಷವೂ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದ್ದೇವೆ. ಈ ಬಾರಿ ಮ್ಯಾರಥಾನ್ 9ನೇ ವರ್ಷದ್ದಾಗಿದೆ ಎಂದರು.</p>.<p>ಬೆಂಗಳೂರು, ಮೈಸೂರು, ದಾವಣಗೆರೆ, ಹುಬ್ಬಳ್ಳಿ, ಮುಂಬೈ, ನವದೆಹಲಿ, ಹೈದರಾಬಾದ್, ಕೋಲ್ಕತ್ತ, ಅಹಮದಾಬಾದ್, ಚೆನ್ನೈ, ಕೊಚ್ಚಿ, ಪುಣೆ, ಕೋಝಿಕ್ಕೋಡ್ ಮತ್ತು ಕೊಯಮತ್ತೂರಿನಲ್ಲಿ ಆಯೋಜಿಸಿರುವ ಮ್ಯಾರಥಾನ್ನಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ‘ಒನ್ ನೇಷನ್, ಒನ್ ಡೇ ಟುಗೆದರ್ ಫಾರ್ ರೇರ್’ ಎಂಬ ಥೀಮ್ನೊಂದಿಗೆ ಈ ಬಾರಿಯ ಮ್ಯಾರಥಾನ್ ನಡೆಯಲಿದೆ ಎಂದು ಪ್ರಸನ್ನ ಹೇಳಿದರು.</p>.<p>ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಭಟ್ ಮಾತನಾಡಿ, ದೇಶದಲ್ಲಿ ಅಂದಾಜು 7 ಕೋಟಿ ಜನರು ಈ ಅತಿ ವಿರಳ ಕಾಯಿಲೆಯಿಂದ ಬಳಲುತ್ತಿದ್ದಾರೆ. ರಾಜ್ಯದಲ್ಲಿ ಈ ಸಂಖ್ಯೆ 30 ಲಕ್ಷವಿದೆ. ಈ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸರ್ಕಾರವು ಒಬ್ಬರಿಗೆ ಚಿಕಿತ್ಸಾ ವೆಚ್ಚವಾಗಿ ₹50 ಲಕ್ಷ ನೀಡುತ್ತದೆ. ಆದರೆ, ಈ ಮೊತ್ತವು ಅವರಿಗೆ ಸಾಕಾಗುವುದಿಲ್ಲ. ಇವರಿಗೆ ಚಿಕಿತ್ಸೆ ನೀಡಲು ಬೇಕಾದ ಔಷಧಗಳು ಸಮರ್ಪಕವಾಗಿಲ್ಲ. ಆದ್ದರಿಂದ ಈ ಜಾಗೃತಿ ಓಟದ ಮೂಲಕ ಸರ್ಕಾರ ಹಾಗೂ ಜನರಲ್ಲಿ ಅರಿವು ಮೂಡಿಸಲಿದ್ದೇವೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ರಿಸರ್ಚ್ ಆ್ಯಂಡ್ ಡೆವಲಪ್ಮೆಂಟ್ ಸೆಲ್ಯೂಷನ್ಸ್ ಇಂಡಿಯಾದ ಉಪಾಧ್ಯಕ್ಷ ಜಿನು ಜೋಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಸೇರಿದಂತೆ ದೇಶದ ಪ್ರಮುಖ 15 ನಗರಗಳಲ್ಲಿ ಫೆಬ್ರುವರಿ 25ರಂದು ಅತಿ ವಿರಳ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಆರ್ಗನೈಸೇಷನ್ ಫಾರ್ ರೇರ್ ಡಿಸೀಸಸ್ ಇಂಡಿಯಾದಿಂದ (ಓಆರ್ಡಿಐ) 7 ಕಿ.ಮೀ ದೂರದಷ್ಟು ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಕುಮಾರ್ ಶಿರೋಲ್ ಹೇಳಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಅಶೋಕ ನಗರದ ಸೇಂಟ್ ಜೋಸೆಫ್ಸ್ ಇಂಡಿಯನ್ ಹೈಸ್ಕೂಲ್ ಮೈದಾನದಿಂದ ಆರಂಭವಾಗಲಿರುವ ಮ್ಯಾರಥಾನ್ಗೆ (ರೇಸ್ಫಾರ್ 7) ನಟ ರಮೇಶ್ ಅರವಿಂದ್ ಅವರು ಬೆಳಿಗ್ಗೆ 7 ಗಂಟೆಗೆ ಚಾಲನೆ ನೀಡಲಿದ್ದಾರೆ. ಈ ಜಾಗೃತಿ ಓಟದಲ್ಲಿ ಭಾಗವಹಿಸುವವರು ರೇಸ್ಫಾರ್ 7 ವೆಬ್ಸೈಟ್ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದರು.</p>.<p>ದೇಶದಲ್ಲಿರುವ ಅತಿ ವಿರಳವಾದ ಕಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಈ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಚಿಕಿತ್ಸಾ ಸೌಲಭ್ಯ ಲಭ್ಯವಾಗುವಂತೆ ಮಾಡುವುದು ಈ ಕಾರ್ಯಕ್ರಮ ಉದ್ದೇಶವಾಗಿದೆ ಎಂದು ಹೇಳಿದರು.</p>.<p>2016ರಲ್ಲಿ ಸಂಸ್ಥೆಯನ್ನು ಸ್ಥಾಪಿಸಲಾಯಿತು. ಅಲ್ಲಿಂದ ಇಲ್ಲಿಯವರೆಗೆ ಪ್ರತಿ ವರ್ಷವೂ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದ್ದೇವೆ. ಈ ಬಾರಿ ಮ್ಯಾರಥಾನ್ 9ನೇ ವರ್ಷದ್ದಾಗಿದೆ ಎಂದರು.</p>.<p>ಬೆಂಗಳೂರು, ಮೈಸೂರು, ದಾವಣಗೆರೆ, ಹುಬ್ಬಳ್ಳಿ, ಮುಂಬೈ, ನವದೆಹಲಿ, ಹೈದರಾಬಾದ್, ಕೋಲ್ಕತ್ತ, ಅಹಮದಾಬಾದ್, ಚೆನ್ನೈ, ಕೊಚ್ಚಿ, ಪುಣೆ, ಕೋಝಿಕ್ಕೋಡ್ ಮತ್ತು ಕೊಯಮತ್ತೂರಿನಲ್ಲಿ ಆಯೋಜಿಸಿರುವ ಮ್ಯಾರಥಾನ್ನಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ‘ಒನ್ ನೇಷನ್, ಒನ್ ಡೇ ಟುಗೆದರ್ ಫಾರ್ ರೇರ್’ ಎಂಬ ಥೀಮ್ನೊಂದಿಗೆ ಈ ಬಾರಿಯ ಮ್ಯಾರಥಾನ್ ನಡೆಯಲಿದೆ ಎಂದು ಪ್ರಸನ್ನ ಹೇಳಿದರು.</p>.<p>ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಭಟ್ ಮಾತನಾಡಿ, ದೇಶದಲ್ಲಿ ಅಂದಾಜು 7 ಕೋಟಿ ಜನರು ಈ ಅತಿ ವಿರಳ ಕಾಯಿಲೆಯಿಂದ ಬಳಲುತ್ತಿದ್ದಾರೆ. ರಾಜ್ಯದಲ್ಲಿ ಈ ಸಂಖ್ಯೆ 30 ಲಕ್ಷವಿದೆ. ಈ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸರ್ಕಾರವು ಒಬ್ಬರಿಗೆ ಚಿಕಿತ್ಸಾ ವೆಚ್ಚವಾಗಿ ₹50 ಲಕ್ಷ ನೀಡುತ್ತದೆ. ಆದರೆ, ಈ ಮೊತ್ತವು ಅವರಿಗೆ ಸಾಕಾಗುವುದಿಲ್ಲ. ಇವರಿಗೆ ಚಿಕಿತ್ಸೆ ನೀಡಲು ಬೇಕಾದ ಔಷಧಗಳು ಸಮರ್ಪಕವಾಗಿಲ್ಲ. ಆದ್ದರಿಂದ ಈ ಜಾಗೃತಿ ಓಟದ ಮೂಲಕ ಸರ್ಕಾರ ಹಾಗೂ ಜನರಲ್ಲಿ ಅರಿವು ಮೂಡಿಸಲಿದ್ದೇವೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ರಿಸರ್ಚ್ ಆ್ಯಂಡ್ ಡೆವಲಪ್ಮೆಂಟ್ ಸೆಲ್ಯೂಷನ್ಸ್ ಇಂಡಿಯಾದ ಉಪಾಧ್ಯಕ್ಷ ಜಿನು ಜೋಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>