<p><strong>ನವದೆಹಲಿ (ಪಿಟಿಐ):</strong> ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪಿಎಸಿಎಸ್) ಪೆಟ್ರೋಲಿಯಂ ಉತ್ಪನ್ನಗಳ ಡೀಲರ್ಶಿಪ್, ನ್ಯಾಯಬೆಲೆ ಅಂಗಡಿ ನಡೆಸುವುದು, ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳನ್ನು ಕಟ್ಟುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸುವ ಪ್ರಸ್ತಾವನೆಯನ್ನು ಕೇಂದ್ರ ಸಿದ್ಧಪಡಿಸಿದೆ.</p>.<p>ಕೇಂದ್ರ ಸಹಕಾರ ಸಚಿವಾಲಯವು ಕರಡು ಉಪನಿಯಮಗಳನ್ನು ಸಿದ್ಧಪಡಿಸಿದೆ. ಈ ಉಪನಿಯಮಗಳಿಗೆ ಜುಲೈ 19ರೊಳಗೆ ಸಲಹೆಗಳನ್ನು ನೀಡುವಂತೆ ಅದು ರಾಜ್ಯ ಸರ್ಕಾರಗಳಿಗೆ ಹಾಗೂ ಇತರ ಪಾಲುದಾರರಿಗೆ ಸೂಚಿಸಿದೆ. ಈಗ ಜಾರಿಯಲ್ಲಿರುವ ನಿಯಮಗಳು ಪಿಎಸಿಎಸ್ಗಳಿಗೆ ತಮ್ಮ ಮೂಲ ವಹಿವಾಟು ಹೊರತುಪಡಿಸಿ ಇತರ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸುವುದಿಲ್ಲ.</p>.<p>ಪಿಎಸಿಎಸ್ಗಳು ‘ಬ್ಯಾಂಕ್ ಮಿತ್ರ’ ಆಗಿ ಕೆಲಸ ಮಾಡಲು, ಶೈತ್ಯಾಗಾರಗಳು ಹಾಗೂ ಗೋದಾಮು ಸೇವೆ ಒದಗಿಸಲು, ನ್ಯಾಯಬೆಲೆ ಅಂಗಡಿ ಆರಂಭಿಸಲು, ಹೈನುಗಾರಿಕೆ, ಮೀನು ಸಾಕಣೆ, ನೀರಾವರಿ, ಪರಿಸರ ಸ್ನೇಹಿ ಇಂಧನ ವಲಯಗಳಲ್ಲಿ ಕೆಲಸ ಮಾಡಲು ಕರಡು ಉಪನಿಯಮಗಳು ಅವಕಾಶ ಕಲ್ಪಿಸುತ್ತವೆ.</p>.<p>ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ, ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿ ಚಟುವಟಿಕೆಗಳಲ್ಲಿ ಸಮುದಾಯ ಆಧಾರಿತ ಸೇವೆಗಳನ್ನು ಒದಗಿಸಲು ಅವಕಾಶ ಕಲ್ಪಿಸುತ್ತವೆ. ಪಿಎಸಿಎಸ್ಗಳು ಮೂಲಸೌಕರ್ಯ ಅಭಿವೃದ್ಧಿ, ಸಮುದಾಯ ಕೇಂದ್ರ ಅಭಿವೃದ್ಧಿ, ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ, ಆಹಾರ ಧಾನ್ಯಗಳ ಖರೀದಿಯಲ್ಲಿ ತೊಡಗಿಸಿಕೊಳ್ಳಬಹುದು.</p>.<p>ಎಲ್ಪಿಜಿ, ಪೆಟ್ರೋಲ್, ಡೀಸೆಲ್, ಪರಿಸರ ಸ್ನೇಹಿ ಇಂಧನ, ಕೃಷಿ ಹಾಗೂ ಮನೆಬಳಕೆ ಉತ್ಪನ್ನಗಳು, ಕೃಷಿ ಯಂತ್ರೋಪಕರಣಗಳ ಡೀಲರ್ಶಿಪ್ ಪಡೆಯಬಹುದು.</p>.<p>ಕರಡು ಉಪ ನಿಯಮಗಳ ಬಗ್ಗೆ ರಾಜ್ಯ ಸರ್ಕಾರಗಳಿಂದ ಸಲಹೆ ಕೇಳಲಾಗಿದೆ ಎಂದು ಸಹಕಾರ ಸಚಿವ ಅಮಿತ್ ಶಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪಿಎಸಿಎಸ್ಗಳು ರಾಜ್ಯ ಪಟ್ಟಿಯಲ್ಲಿ ಬರುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪಿಎಸಿಎಸ್) ಪೆಟ್ರೋಲಿಯಂ ಉತ್ಪನ್ನಗಳ ಡೀಲರ್ಶಿಪ್, ನ್ಯಾಯಬೆಲೆ ಅಂಗಡಿ ನಡೆಸುವುದು, ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳನ್ನು ಕಟ್ಟುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸುವ ಪ್ರಸ್ತಾವನೆಯನ್ನು ಕೇಂದ್ರ ಸಿದ್ಧಪಡಿಸಿದೆ.</p>.<p>ಕೇಂದ್ರ ಸಹಕಾರ ಸಚಿವಾಲಯವು ಕರಡು ಉಪನಿಯಮಗಳನ್ನು ಸಿದ್ಧಪಡಿಸಿದೆ. ಈ ಉಪನಿಯಮಗಳಿಗೆ ಜುಲೈ 19ರೊಳಗೆ ಸಲಹೆಗಳನ್ನು ನೀಡುವಂತೆ ಅದು ರಾಜ್ಯ ಸರ್ಕಾರಗಳಿಗೆ ಹಾಗೂ ಇತರ ಪಾಲುದಾರರಿಗೆ ಸೂಚಿಸಿದೆ. ಈಗ ಜಾರಿಯಲ್ಲಿರುವ ನಿಯಮಗಳು ಪಿಎಸಿಎಸ್ಗಳಿಗೆ ತಮ್ಮ ಮೂಲ ವಹಿವಾಟು ಹೊರತುಪಡಿಸಿ ಇತರ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸುವುದಿಲ್ಲ.</p>.<p>ಪಿಎಸಿಎಸ್ಗಳು ‘ಬ್ಯಾಂಕ್ ಮಿತ್ರ’ ಆಗಿ ಕೆಲಸ ಮಾಡಲು, ಶೈತ್ಯಾಗಾರಗಳು ಹಾಗೂ ಗೋದಾಮು ಸೇವೆ ಒದಗಿಸಲು, ನ್ಯಾಯಬೆಲೆ ಅಂಗಡಿ ಆರಂಭಿಸಲು, ಹೈನುಗಾರಿಕೆ, ಮೀನು ಸಾಕಣೆ, ನೀರಾವರಿ, ಪರಿಸರ ಸ್ನೇಹಿ ಇಂಧನ ವಲಯಗಳಲ್ಲಿ ಕೆಲಸ ಮಾಡಲು ಕರಡು ಉಪನಿಯಮಗಳು ಅವಕಾಶ ಕಲ್ಪಿಸುತ್ತವೆ.</p>.<p>ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ, ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿ ಚಟುವಟಿಕೆಗಳಲ್ಲಿ ಸಮುದಾಯ ಆಧಾರಿತ ಸೇವೆಗಳನ್ನು ಒದಗಿಸಲು ಅವಕಾಶ ಕಲ್ಪಿಸುತ್ತವೆ. ಪಿಎಸಿಎಸ್ಗಳು ಮೂಲಸೌಕರ್ಯ ಅಭಿವೃದ್ಧಿ, ಸಮುದಾಯ ಕೇಂದ್ರ ಅಭಿವೃದ್ಧಿ, ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ, ಆಹಾರ ಧಾನ್ಯಗಳ ಖರೀದಿಯಲ್ಲಿ ತೊಡಗಿಸಿಕೊಳ್ಳಬಹುದು.</p>.<p>ಎಲ್ಪಿಜಿ, ಪೆಟ್ರೋಲ್, ಡೀಸೆಲ್, ಪರಿಸರ ಸ್ನೇಹಿ ಇಂಧನ, ಕೃಷಿ ಹಾಗೂ ಮನೆಬಳಕೆ ಉತ್ಪನ್ನಗಳು, ಕೃಷಿ ಯಂತ್ರೋಪಕರಣಗಳ ಡೀಲರ್ಶಿಪ್ ಪಡೆಯಬಹುದು.</p>.<p>ಕರಡು ಉಪ ನಿಯಮಗಳ ಬಗ್ಗೆ ರಾಜ್ಯ ಸರ್ಕಾರಗಳಿಂದ ಸಲಹೆ ಕೇಳಲಾಗಿದೆ ಎಂದು ಸಹಕಾರ ಸಚಿವ ಅಮಿತ್ ಶಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪಿಎಸಿಎಸ್ಗಳು ರಾಜ್ಯ ಪಟ್ಟಿಯಲ್ಲಿ ಬರುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>