<p><strong>ನವೆದಹಲಿ/ಮುಂಬೈ:</strong> ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಸಶಸ್ತ್ರ ಪಡೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ದೇಶದ ವಾಯುಯಾನದಲ್ಲಿ ಭಾರಿ ವ್ಯತ್ಯಯ ಕಂಡುಬಂದಿದೆ. </p><p>200ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದ್ದು, ಶ್ರೀನಗರ ಸೇರಿದಂತೆ 18 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. </p><p>ಏರ್ ಇಂಡಿಯಾ, ಇಂಡಿಗೊ, ಸ್ಪೈಸ್ಜೆಟ್, ಏರ್ ಇಂಡಿಯಾ ಎಕ್ಸ್ಪ್ರೆಸ್, ಆಕಾಶ್ ಏರ್ ಮತ್ತು ಕೆಲವು ವಿದೇಶಿ ವಿಮಾನಯಾನ ಸಂಸ್ಥೆಗಳ ಹಾರಾಟ ರದ್ದುಗೊಂಡಿವೆ. </p><p>ಈ ಪೈಕಿ ಇಂಡಿಗೊ 160 ವಿಮಾನಗಳ ಸೇವೆಯನ್ನು ರದ್ದುಗೊಳಿಸಿದೆ. </p><p>ಮೂಲಗಳ ಪ್ರಕಾರ ದೇಶದ ಉತ್ತರ ಹಾಗೂ ಪಶ್ಚಿಮ ಭಾಗಗಳಲ್ಲಿ ಕನಿಷ್ಠ 18 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ವಿಮಾನ ನಿಲ್ದಾಣಗಳಲ್ಲಿ ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್ಕೋಟ್, ಚಂಡೀಗಢ, ಜೋಧ್ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್ನಗರ ಸೇರಿವೆ. </p><p>ಏತನ್ಮಧ್ಯೆ ದಾಳಿ ಬೆನ್ನಲ್ಲೇ ಶ್ರೀನಗರದ ವಿಮಾನ ನಿಲ್ದಾಣ ಸಂಪೂರ್ಣ ನಿಯಂತ್ರಣವನ್ನು ಸೇನೆ ಪಡೆದುಕೊಂಡಿದೆ. </p><p>ರಾಷ್ಟ್ರ ರಾಜಧಾನಿ ದೆಹಲಿ ವಿಮಾನ ನಿಲ್ದಾಣದಿಂದಲೂ ವಿಮಾನಗಳ ಹಾರಾಟದಲ್ಲೂ ವ್ಯತ್ಯಯ ಉಂಟಾಗಿದ್ದು, ಕನಿಷ್ಠ 35 ವಿಮಾನಗಳನ್ನು ರದ್ದುಗೊಳಿಸಲಾಗಿದೆ. </p><p>ಪಹಲ್ಗಾಮ್ನಲ್ಲಿ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆ ಉಗ್ರರ ಒಂಬತ್ತು ನೆಲೆಗಳನ್ನು ಗುರಿಯಾಗಿಸಿ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ನಡೆಸಿದೆ. s</p>.Operation Sindoor: ರಾತ್ರಿಯಿಡಿ ಸೇನಾ ಕಾರ್ಯಾಚರಣೆ ಗಮನಿಸಿದ ಪ್ರಧಾನಿ ಮೋದಿ.Operation Sindoor | ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದ IAF .Operation Sindoor | ಪಾಕ್ ಮೇಲಿನ ದಾಳಿಗೆ ‘ಜೈ ಹಿಂದ್’ ಎಂದ ಭಾರತೀಯರು.Operation Sindoor |ಉಗ್ರರ ಶಿಬಿರಗಳ ಮೇಲಿನ ದಾಳಿಯ ದೃಶ್ಯ ಹಂಚಿಕೊಂಡ ಭದ್ರತಾ ಪಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವೆದಹಲಿ/ಮುಂಬೈ:</strong> ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಸಶಸ್ತ್ರ ಪಡೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ದೇಶದ ವಾಯುಯಾನದಲ್ಲಿ ಭಾರಿ ವ್ಯತ್ಯಯ ಕಂಡುಬಂದಿದೆ. </p><p>200ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದ್ದು, ಶ್ರೀನಗರ ಸೇರಿದಂತೆ 18 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. </p><p>ಏರ್ ಇಂಡಿಯಾ, ಇಂಡಿಗೊ, ಸ್ಪೈಸ್ಜೆಟ್, ಏರ್ ಇಂಡಿಯಾ ಎಕ್ಸ್ಪ್ರೆಸ್, ಆಕಾಶ್ ಏರ್ ಮತ್ತು ಕೆಲವು ವಿದೇಶಿ ವಿಮಾನಯಾನ ಸಂಸ್ಥೆಗಳ ಹಾರಾಟ ರದ್ದುಗೊಂಡಿವೆ. </p><p>ಈ ಪೈಕಿ ಇಂಡಿಗೊ 160 ವಿಮಾನಗಳ ಸೇವೆಯನ್ನು ರದ್ದುಗೊಳಿಸಿದೆ. </p><p>ಮೂಲಗಳ ಪ್ರಕಾರ ದೇಶದ ಉತ್ತರ ಹಾಗೂ ಪಶ್ಚಿಮ ಭಾಗಗಳಲ್ಲಿ ಕನಿಷ್ಠ 18 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ವಿಮಾನ ನಿಲ್ದಾಣಗಳಲ್ಲಿ ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್ಕೋಟ್, ಚಂಡೀಗಢ, ಜೋಧ್ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್ನಗರ ಸೇರಿವೆ. </p><p>ಏತನ್ಮಧ್ಯೆ ದಾಳಿ ಬೆನ್ನಲ್ಲೇ ಶ್ರೀನಗರದ ವಿಮಾನ ನಿಲ್ದಾಣ ಸಂಪೂರ್ಣ ನಿಯಂತ್ರಣವನ್ನು ಸೇನೆ ಪಡೆದುಕೊಂಡಿದೆ. </p><p>ರಾಷ್ಟ್ರ ರಾಜಧಾನಿ ದೆಹಲಿ ವಿಮಾನ ನಿಲ್ದಾಣದಿಂದಲೂ ವಿಮಾನಗಳ ಹಾರಾಟದಲ್ಲೂ ವ್ಯತ್ಯಯ ಉಂಟಾಗಿದ್ದು, ಕನಿಷ್ಠ 35 ವಿಮಾನಗಳನ್ನು ರದ್ದುಗೊಳಿಸಲಾಗಿದೆ. </p><p>ಪಹಲ್ಗಾಮ್ನಲ್ಲಿ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆ ಉಗ್ರರ ಒಂಬತ್ತು ನೆಲೆಗಳನ್ನು ಗುರಿಯಾಗಿಸಿ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ನಡೆಸಿದೆ. s</p>.Operation Sindoor: ರಾತ್ರಿಯಿಡಿ ಸೇನಾ ಕಾರ್ಯಾಚರಣೆ ಗಮನಿಸಿದ ಪ್ರಧಾನಿ ಮೋದಿ.Operation Sindoor | ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದ IAF .Operation Sindoor | ಪಾಕ್ ಮೇಲಿನ ದಾಳಿಗೆ ‘ಜೈ ಹಿಂದ್’ ಎಂದ ಭಾರತೀಯರು.Operation Sindoor |ಉಗ್ರರ ಶಿಬಿರಗಳ ಮೇಲಿನ ದಾಳಿಯ ದೃಶ್ಯ ಹಂಚಿಕೊಂಡ ಭದ್ರತಾ ಪಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>