<p><strong>ಇಸ್ಲಾಮಾಬಾದ್</strong>: ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ವ್ಯಾಪಾರವು ಮತ್ತೆ ಆರಂಭವಾಗುವ ನಿರೀಕ್ಷೆ ವ್ಯಕ್ತವಾಗುತ್ತಿದೆ. ಪಾಕಿಸ್ತಾನವು ಭೂಮಾರ್ಗದ ಮೂಲಕ ಭಾರತದಿಂದ ಹತ್ತಿಯನ್ನು ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.</p>.<p>ವಾಣಿಜ್ಯ ವಿಷಯದಲ್ಲಿ ಪ್ರಧಾನಿಯ ಸಲಹೆಗಾರ ಸಚಿವ ಅಬ್ದುಲ್ ರಜಾಕ್ ದಾವೂದ್ ಅವರು ಹತ್ತಿ ಮತ್ತು ನೂಲನ್ನುಭಾರತದಿಂದ ಮುಂದಿನ ವಾರದಿಂದ ಆಮದು ಮಾಡಿಕೊಳ್ಳಬೇಕೇ ಬೇಡವೇ ಎನ್ನುವ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ‘ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.</p>.<p>ದೇಶದಲ್ಲಿ ಹತ್ತಿಯ ಕೊರತೆ ಉಂಟಾಗಿರುವುದನ್ನು ಪ್ರಧಾನಿ ಇಮ್ರಾನ್ ಖಾನ್ ಅವರ ಗಮನಕ್ಕೆ ಈಗಾಗಲೇ ತರಲಾಗಿದೆ. ಆಮದು ಮಾಡಿಕೊಳ್ಳುವ ಕುರಿತು ನಿರ್ಧಾರ ತೆಗೆದುಕೊಂಡ ಬಳಿಕ ಔಪಚಾರಿಕ ಆದೇಶವನ್ನು ಸಂಸತ್ನ ಆರ್ಥಿಕ ಸಮನ್ವಯ ಸಮಿತಿಯ ಮುಂದೆ ಇರಿಸಲಾಗುವುದು ಎಂದು ಮೂಲಗಳು ಹೇಳಿವೆ.</p>.<p>ಮೂಲಗಳ ಪ್ರಕಾರ, ಆಮದು ಮಾಡಿಕೊಳ್ಳುವ ಕುರಿತು ಆಂತರಿಕ ಚರ್ಚೆಗಳು ಈಗಾಗಲೇ ಪ್ರಾರಂಭವಾಗಿವೆ. ಆದರೆ ಪ್ರಧಾನಿಯ ಒಪ್ಪಿಗೆ ದೊರೆತ ನಂತರವಷ್ಟೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಭಾರತದಿಂದ ಆಮದು ತೀರಾ ಅಗ್ಗವಾಗಲಿದ್ದು, ಮೂರರಿಂದ ನಾಲ್ಕು ದಿನಗಳಲ್ಲಿ ಪಾಕಿಸ್ತಾನ ತಲುಪಲಿದೆ.</p>.<p>ಆದರೆ, ಭಾರತದಿಂದ ಆಮದು ಮಾಡಿಕೊಳ್ಳದಂತೆ ಆಲ್ ಪಾಕಿಸ್ತಾನ್ ಟೆಕ್ಸ್ಟೈಲ್ ಮಿಲ್ಸ್ ಅಸೋಸಿಯೇಷನ್ (ಎಪಿಟಿಎಂಎ) ಅಲ್ಲಿನ ಸರ್ಕಾರಕ್ಕೆ ಒತ್ತಡ ತರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ವ್ಯಾಪಾರವು ಮತ್ತೆ ಆರಂಭವಾಗುವ ನಿರೀಕ್ಷೆ ವ್ಯಕ್ತವಾಗುತ್ತಿದೆ. ಪಾಕಿಸ್ತಾನವು ಭೂಮಾರ್ಗದ ಮೂಲಕ ಭಾರತದಿಂದ ಹತ್ತಿಯನ್ನು ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.</p>.<p>ವಾಣಿಜ್ಯ ವಿಷಯದಲ್ಲಿ ಪ್ರಧಾನಿಯ ಸಲಹೆಗಾರ ಸಚಿವ ಅಬ್ದುಲ್ ರಜಾಕ್ ದಾವೂದ್ ಅವರು ಹತ್ತಿ ಮತ್ತು ನೂಲನ್ನುಭಾರತದಿಂದ ಮುಂದಿನ ವಾರದಿಂದ ಆಮದು ಮಾಡಿಕೊಳ್ಳಬೇಕೇ ಬೇಡವೇ ಎನ್ನುವ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ‘ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.</p>.<p>ದೇಶದಲ್ಲಿ ಹತ್ತಿಯ ಕೊರತೆ ಉಂಟಾಗಿರುವುದನ್ನು ಪ್ರಧಾನಿ ಇಮ್ರಾನ್ ಖಾನ್ ಅವರ ಗಮನಕ್ಕೆ ಈಗಾಗಲೇ ತರಲಾಗಿದೆ. ಆಮದು ಮಾಡಿಕೊಳ್ಳುವ ಕುರಿತು ನಿರ್ಧಾರ ತೆಗೆದುಕೊಂಡ ಬಳಿಕ ಔಪಚಾರಿಕ ಆದೇಶವನ್ನು ಸಂಸತ್ನ ಆರ್ಥಿಕ ಸಮನ್ವಯ ಸಮಿತಿಯ ಮುಂದೆ ಇರಿಸಲಾಗುವುದು ಎಂದು ಮೂಲಗಳು ಹೇಳಿವೆ.</p>.<p>ಮೂಲಗಳ ಪ್ರಕಾರ, ಆಮದು ಮಾಡಿಕೊಳ್ಳುವ ಕುರಿತು ಆಂತರಿಕ ಚರ್ಚೆಗಳು ಈಗಾಗಲೇ ಪ್ರಾರಂಭವಾಗಿವೆ. ಆದರೆ ಪ್ರಧಾನಿಯ ಒಪ್ಪಿಗೆ ದೊರೆತ ನಂತರವಷ್ಟೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಭಾರತದಿಂದ ಆಮದು ತೀರಾ ಅಗ್ಗವಾಗಲಿದ್ದು, ಮೂರರಿಂದ ನಾಲ್ಕು ದಿನಗಳಲ್ಲಿ ಪಾಕಿಸ್ತಾನ ತಲುಪಲಿದೆ.</p>.<p>ಆದರೆ, ಭಾರತದಿಂದ ಆಮದು ಮಾಡಿಕೊಳ್ಳದಂತೆ ಆಲ್ ಪಾಕಿಸ್ತಾನ್ ಟೆಕ್ಸ್ಟೈಲ್ ಮಿಲ್ಸ್ ಅಸೋಸಿಯೇಷನ್ (ಎಪಿಟಿಎಂಎ) ಅಲ್ಲಿನ ಸರ್ಕಾರಕ್ಕೆ ಒತ್ತಡ ತರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>