ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲೆಲ್ಲಿ ಹೆಚ್ಚು ತೆಂಗು ಬೆಳೆಯಲಾಗುತ್ತದೋ ಅಲ್ಲಿ ತಾಳೆ ಮರಗಳನ್ನು ಬೆಳೆಸಲು ಅನುಕೂಲಕರ ವಾತಾವರಣ ಇರುತ್ತದೆ. ರೈತ ಉತ್ಪಾದಕ ಸಂಘ (ಎಫ್ಪಿಒ)ಗಳನ್ನು ನೋಂದಣಿ ಮಾಡಿಕೊಂಡವರಿಗೆ ಸಂಸ್ಕರಣಾ ಘಟಕ, ಕಚೇರಿ ಸ್ಥಾಪಿಸಲು ₹18ರಿಂದ ₹ 20 ಲಕ್ಷ ಸಾಲ ಸೌಲಭ್ಯ ನೀಡಲಾಗುವುದು. ಉಕ್ರೇನ್ನಲ್ಲಿ ಯುದ್ಧ ನಡೆಯುತ್ತಿರುವುದರಿಂದ ಅಲ್ಲಿಂದ ಬರಬೇಕಿದ್ದ ಎಣ್ಣೆ ಪದಾರ್ಥಗಳು ಬರುತ್ತಿಲ್ಲ. ಖಾದ್ಯ ತೈಲ ಉತ್ಪಾದನೆಯಲ್ಲಿ ಆತ್ಮ ನಿರ್ಭರ (ಸ್ವಾವಲಂಬನೆ)ವಾಗಲು ಎಣ್ಣೆ ಬೀಜಗಳ ಕಿಟ್ ನೀಡಲಾಗುತ್ತಿದೆ' ಎಂದರು.