ಕಳೆದ ವರ್ಷದ ಡಿಸೆಂಬರ್ನಲ್ಲಿ ರಾಷ್ಟ್ರಪತಿ ಅವರ ಆದೇಶದ ಮೇರೆಗೆ ಕೇಂದ್ರ ಹಣಕಾಸು ಸಚಿವಾಲಯವು ಸೂಚಿಸಿರುವ ನಿಯಮಾವಳಿಗಳ ಬಗ್ಗೆ ಚರ್ಚಿಸಲಾಯಿತು. ಕೇಂದ್ರ ಹಾಗೂ ರಾಜ್ಯಗಳ ನಡುವಿನ ತೆರಿಗೆ ಹಂಚಿಕೆ, ರಾಜ್ಯದಲ್ಲಿ ಸಂಚಿತ ನಿಧಿಯನ್ನು ಹೆಚ್ಚಿಸಿ ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ನೀಡುವ ಶಿಫಾರಸು ಕುರಿತಂತೆ ಚರ್ಚೆ ನಡೆಯಿತು.