<p><strong>ನವದೆಹಲಿ</strong>: ದೇಶದಾದ್ಯಂತ 2.5 ಲಕ್ಷ ಗ್ರಾಮ ಪಂಚಾಯಿತಿಗಳ ಸದಸ್ಯರಿಗೆ ‘ಹೂಡಿಕೆ ಶಿಕ್ಷಣ’ ನೀಡುವ ಗುರಿಯೊಂದಿಗೆ, ಪಂಚಾಯತ್ ರಾಜ್ ಸಚಿವಾಲಯವು, ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಸಹಯೋಗದಲ್ಲಿ ರಾಷ್ಟ್ರವ್ಯಾಪಿ ತರಬೇತಿ ಕಾರ್ಯಕ್ರಮವೊಂದನ್ನು ರೂಪಿಸಿದೆ. </p>.<p>ಈ ತರಬೇತಿಯಡಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಮತ್ತು ಪಂಚಾಯತ್ ರಾಜ್ ಬ್ಲಾಕ್ ಮಟ್ಟದ ಸಿಬ್ಬಂದಿಗೆ ಷೇರುಪೇಟೆ ಮತ್ತು ಮ್ಯೂಚುವಲ್ ಫಂಡ್ಗಳಲ್ಲಿ ಬಂಡವಾಳ ತೊಡಗಿಸುವ ಕುರಿತು ತರಬೇತಿ ನೀಡಲು ಉದ್ದೇಶಿಸಲಾಗಿದೆ.</p>.<p>ಇತ್ತೀಚಿನ ವರ್ಷಗಳಲ್ಲಿ ಷೇರುಪೇಟೆಯಲ್ಲಿ ಬಂಡವಾಳ ತೊಡಗಿಸುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಆದರೆ, ಇದರಲ್ಲಿ ಗ್ರಾಮೀಣರ ಸಹಭಾಗಿತ್ವ ಕಡಿಮೆ ಇದೆ. ಗ್ರಾಮೀಣ ಮಟ್ಟದಲ್ಲಿ ಹಣಕಾಸು ಸಾಕ್ಷರತೆ ಹೆಚ್ಚಿಸಿ, ಸುರಕ್ಷಿತ ಹೂಡಿಕೆ ಪ್ರೋತ್ಸಾಹಿಸುವುದರ ಭಾಗವಾಗಿ ಈ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. </p>.<p>ಈಗಾಗಲೇ ಪುಣೆಯಲ್ಲಿ ವಿವಿಧ ಜಿಲ್ಲೆಗಳ 100ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮತ್ತು ಬ್ಲಾಕ್ ಮಟ್ಟದ ಪ್ರತಿನಿಧಿಗಳಿಗೆ ತರಬೇತಿ ನೀಡಲಾಗಿದೆ. ತರಬೇತಿ ಪಡೆದ ಪಂಚಾಯಿತಿ ಅಧ್ಯಕ್ಷರನ್ನು ‘ಹಣಕಾಸು ಸಾಕ್ಷರತೆ ರಾಯಭಾರಿ’ಯಾಗಿ ಪರಿಗಣಿಸಲಾಗುವುದು ಎಂದು ಪಂಚಾಯತ್ ರಾಜ್ ಸಚಿವಾಲಯದ ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಾದ್ಯಂತ 2.5 ಲಕ್ಷ ಗ್ರಾಮ ಪಂಚಾಯಿತಿಗಳ ಸದಸ್ಯರಿಗೆ ‘ಹೂಡಿಕೆ ಶಿಕ್ಷಣ’ ನೀಡುವ ಗುರಿಯೊಂದಿಗೆ, ಪಂಚಾಯತ್ ರಾಜ್ ಸಚಿವಾಲಯವು, ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಸಹಯೋಗದಲ್ಲಿ ರಾಷ್ಟ್ರವ್ಯಾಪಿ ತರಬೇತಿ ಕಾರ್ಯಕ್ರಮವೊಂದನ್ನು ರೂಪಿಸಿದೆ. </p>.<p>ಈ ತರಬೇತಿಯಡಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಮತ್ತು ಪಂಚಾಯತ್ ರಾಜ್ ಬ್ಲಾಕ್ ಮಟ್ಟದ ಸಿಬ್ಬಂದಿಗೆ ಷೇರುಪೇಟೆ ಮತ್ತು ಮ್ಯೂಚುವಲ್ ಫಂಡ್ಗಳಲ್ಲಿ ಬಂಡವಾಳ ತೊಡಗಿಸುವ ಕುರಿತು ತರಬೇತಿ ನೀಡಲು ಉದ್ದೇಶಿಸಲಾಗಿದೆ.</p>.<p>ಇತ್ತೀಚಿನ ವರ್ಷಗಳಲ್ಲಿ ಷೇರುಪೇಟೆಯಲ್ಲಿ ಬಂಡವಾಳ ತೊಡಗಿಸುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಆದರೆ, ಇದರಲ್ಲಿ ಗ್ರಾಮೀಣರ ಸಹಭಾಗಿತ್ವ ಕಡಿಮೆ ಇದೆ. ಗ್ರಾಮೀಣ ಮಟ್ಟದಲ್ಲಿ ಹಣಕಾಸು ಸಾಕ್ಷರತೆ ಹೆಚ್ಚಿಸಿ, ಸುರಕ್ಷಿತ ಹೂಡಿಕೆ ಪ್ರೋತ್ಸಾಹಿಸುವುದರ ಭಾಗವಾಗಿ ಈ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. </p>.<p>ಈಗಾಗಲೇ ಪುಣೆಯಲ್ಲಿ ವಿವಿಧ ಜಿಲ್ಲೆಗಳ 100ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮತ್ತು ಬ್ಲಾಕ್ ಮಟ್ಟದ ಪ್ರತಿನಿಧಿಗಳಿಗೆ ತರಬೇತಿ ನೀಡಲಾಗಿದೆ. ತರಬೇತಿ ಪಡೆದ ಪಂಚಾಯಿತಿ ಅಧ್ಯಕ್ಷರನ್ನು ‘ಹಣಕಾಸು ಸಾಕ್ಷರತೆ ರಾಯಭಾರಿ’ಯಾಗಿ ಪರಿಗಣಿಸಲಾಗುವುದು ಎಂದು ಪಂಚಾಯತ್ ರಾಜ್ ಸಚಿವಾಲಯದ ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>