<p><strong>ನವದೆಹಲಿ: </strong>2024–25ರೊಳಗೆ ಭಾರತವು 5 ಲಕ್ಷ ಕೋಟಿ ಡಾಲರ್ ಮೌಲ್ಯದ ಅರ್ಥ ವ್ಯವಸ್ಥೆಯಾಗಿ ಬೆಳೆಯುವ ಸಾಧ್ಯತೆ ತೀರಾ ಕಡಿಮೆ ಎಂದು ಮೆಸ್ಯಾಚುಸೆಟ್ಸ್ ವಿಶ್ವವಿದ್ಯಾಲಯದ ಅರ್ಥಶಾಸ್ತ್ರಜ್ಞ ಪ್ರೊ. ವಂಶಿ ವಕುಲಾಭರಣಂ ಹೇಳಿದ್ದಾರೆ. ಕೋವಿಡ್–19ರಿಂದಾಗಿ ಉಂಟಾದ ಹಿಂಜರಿತ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.</p>.<p>‘ಈಗ ದೇಶದ ಅರ್ಥ ವ್ಯವಸ್ಥೆಯ ಗಾತ್ರವು 3 ಲಕ್ಷ ಕೋಟಿ ಡಾಲರ್ಗಿಂತ ಕಡಿಮೆ ಇದೆ. ಇದು ನಾಲ್ಕು ವರ್ಷಗಳಲ್ಲಿ 5 ಲಕ್ಷ ಕೋಟಿ ಡಾಲರ್ ಮೌಲ್ಯದ್ದಾಗಿ ಬೆಳೆಯಬೇಕು ಎಂದಾದರೆ ಪ್ರತಿ ವರ್ಷ ಶೇಕಡ 13ಕ್ಕಿಂತ ಹೆಚ್ಚಿನ ಪ್ರಮಾಣದ ಏರಿಕೆ ದಾಖಲಿಸಬೇಕು’ ಎಂದು ಅವರು ಹೇಳಿದ್ದಾರೆ. ಎಲ್ಲವೂ ನಿರೀಕ್ಷೆಯಂತೆ ನಡೆದರೂ ಈ ಪ್ರಮಾಣದ ಬೆಳವಣಿಗೆ ಸಾಧಿಸಲು ಆಗಲಿಕ್ಕಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ಹಣದುಬ್ಬರ ಪ್ರಮಾಣದ ಹೆಚ್ಚಳದಿಂದ ಬಡವರನ್ನು ರಕ್ಷಿಸಬೇಕು. ಅಲ್ಪಾವಧಿಯಲ್ಲಿ ಬಡವರಿಗೆ ತೊಂದರೆ ಆಗದಂತೆ ಸರ್ಕಾರವು ಕ್ರಮ ಕೈಗೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ.</p>.<p><a href="https://www.prajavani.net/district/chitradurga/b-sriramulu-urges-to-stop-disrespecting-jawaharlal-nehru-and-atal-bihari-vajpayee-858027.html" itemprop="url">ನೆಹರೂ, ವಾಜಪೇಯಿ ಅವಹೇಳನ ನಿಲ್ಲಿಸಿ: ಬಿ.ಶ್ರೀರಾಮುಲು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>2024–25ರೊಳಗೆ ಭಾರತವು 5 ಲಕ್ಷ ಕೋಟಿ ಡಾಲರ್ ಮೌಲ್ಯದ ಅರ್ಥ ವ್ಯವಸ್ಥೆಯಾಗಿ ಬೆಳೆಯುವ ಸಾಧ್ಯತೆ ತೀರಾ ಕಡಿಮೆ ಎಂದು ಮೆಸ್ಯಾಚುಸೆಟ್ಸ್ ವಿಶ್ವವಿದ್ಯಾಲಯದ ಅರ್ಥಶಾಸ್ತ್ರಜ್ಞ ಪ್ರೊ. ವಂಶಿ ವಕುಲಾಭರಣಂ ಹೇಳಿದ್ದಾರೆ. ಕೋವಿಡ್–19ರಿಂದಾಗಿ ಉಂಟಾದ ಹಿಂಜರಿತ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.</p>.<p>‘ಈಗ ದೇಶದ ಅರ್ಥ ವ್ಯವಸ್ಥೆಯ ಗಾತ್ರವು 3 ಲಕ್ಷ ಕೋಟಿ ಡಾಲರ್ಗಿಂತ ಕಡಿಮೆ ಇದೆ. ಇದು ನಾಲ್ಕು ವರ್ಷಗಳಲ್ಲಿ 5 ಲಕ್ಷ ಕೋಟಿ ಡಾಲರ್ ಮೌಲ್ಯದ್ದಾಗಿ ಬೆಳೆಯಬೇಕು ಎಂದಾದರೆ ಪ್ರತಿ ವರ್ಷ ಶೇಕಡ 13ಕ್ಕಿಂತ ಹೆಚ್ಚಿನ ಪ್ರಮಾಣದ ಏರಿಕೆ ದಾಖಲಿಸಬೇಕು’ ಎಂದು ಅವರು ಹೇಳಿದ್ದಾರೆ. ಎಲ್ಲವೂ ನಿರೀಕ್ಷೆಯಂತೆ ನಡೆದರೂ ಈ ಪ್ರಮಾಣದ ಬೆಳವಣಿಗೆ ಸಾಧಿಸಲು ಆಗಲಿಕ್ಕಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ಹಣದುಬ್ಬರ ಪ್ರಮಾಣದ ಹೆಚ್ಚಳದಿಂದ ಬಡವರನ್ನು ರಕ್ಷಿಸಬೇಕು. ಅಲ್ಪಾವಧಿಯಲ್ಲಿ ಬಡವರಿಗೆ ತೊಂದರೆ ಆಗದಂತೆ ಸರ್ಕಾರವು ಕ್ರಮ ಕೈಗೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ.</p>.<p><a href="https://www.prajavani.net/district/chitradurga/b-sriramulu-urges-to-stop-disrespecting-jawaharlal-nehru-and-atal-bihari-vajpayee-858027.html" itemprop="url">ನೆಹರೂ, ವಾಜಪೇಯಿ ಅವಹೇಳನ ನಿಲ್ಲಿಸಿ: ಬಿ.ಶ್ರೀರಾಮುಲು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>