<p><strong>ನವದೆಹಲಿ:</strong> ನೇರ ತೆರಿಗೆ ಪಾವತಿಗೆ ಸಂಬಂಧಿಸಿದ ವಿವಾದಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಒದಗಿಸುವ ‘ನೇರ ತೆರಿಗೆ ವಿವಾದ್ ಸೆ ವಿಶ್ವಾಸ–2020’ ಮಸೂದೆಗೆ ಸಂಸತ್ತು ಶುಕ್ರವಾರ ಅಂಗೀಕಾರ ನೀಡಿದೆ.</p>.<p>ತೆರಿಗೆಗೆ ಸಂಬಂಧಿಸಿದ ವಿವಾದಗಳಿಗೆ ಪರಿಹಾರ ಕಂಡುಕೊಳ್ಳಲು ಇದು ಅವಕಾಶ ಒದಗಿಸುತ್ತದೆ. ಮಸೂದೆಗೆ ಸಂಬಂಧಿಸಿದಂತೆ ಎಲ್ಲ ಭಾಷೆಗಳಲ್ಲಿ ಲಭ್ಯ ಇರುವ ಸಂಪೂರ್ಣ ವಿವರಗಳನ್ನು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಕಳಿಸಿಕೊಡಲಿದೆ.</p>.<p>ನೇರ ತೆರಿಗೆ ಪಾವತಿ ಕುರಿತ 4.83 ಲಕ್ಷ ಪ್ರಕರಣಗಳು ಹೈಕೋರ್ಟ್, ಸುಪ್ರೀಂಕೋರ್ಟ್, ಸಾಲ ವಸೂಲಾತಿ ನ್ಯಾಯಮಂಡಳಿ ಸೇರಿದಂತೆ ವಿವಿಧ ಮೇಲ್ಮನವಿ ಪ್ರಾಧಿಕಾರಗಳಲ್ಲಿ ವಿಚಾರಣೆ ಹಂತದಲ್ಲಿ ಇವೆ. ಈ ಪ್ರಕರಣಗಳ ಒಟ್ಟಾರೆ ಮೊತ್ತ ₹ 9.32 ಲಕ್ಷ ಕೋಟಿಗಳಷ್ಟಿದೆ.</p>.<p>ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸುವವರು ವಿವಾದದಲ್ಲಿ ಇರುವ ಒಟ್ಟಾರೆ ತೆರಿಗೆ ಮೊತ್ತವನ್ನು ಇದೇ 31ರ ಒಳಗೆ ಪಾವತಿಸಿದರೆ ಅವರ ಪಾಲಿನ ಬಡ್ಡಿ ಮತ್ತು ದಂಡದ ಮೊತ್ತವನ್ನು ಸಂಪೂರ್ಣವಾಗಿ ಮನ್ನಾ ಮಾಡುವ ಸೌಲಭ್ಯ ಇದರಲ್ಲಿ ಇದೆ.</p>.<p>ಈ ಯೋಜನೆ ಜೂನ್ 30ರವರೆಗೆ ಜಾರಿಯಲ್ಲಿ ಇರಲಿದೆ. ತೆರಿಗೆ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇದು ಸುವರ್ಣಾವಕಾಶ ಕಲ್ಪಿಸಿದೆ ಎಂದು ಆದಾಯ ತೆರಿಗೆ ಇಲಾಖೆಯು ಪ್ರಚಾರ ಮಾಡುತ್ತಿದೆ.</p>.<p><strong>ಇದನ್ನೂ ಓದಿ:</strong><a href="www.prajavani.net/business/commerce-news/finance-minister-nirmala-sitharam-introduces-direct-tax-vivad-se-vishwas-bill-in-lok-sabha-703145.html" target="_blank">ತೆರಿಗೆ ಪ್ರಕರಣಗಳ ಇತ್ಯರ್ಥಕ್ಕೆ 'ವಿವಾದ್ ಸೇ ವಿಶ್ವಾಸ್'; ಲೋಕಸಭೆಯಲ್ಲಿ ಮಂಡನೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೇರ ತೆರಿಗೆ ಪಾವತಿಗೆ ಸಂಬಂಧಿಸಿದ ವಿವಾದಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಒದಗಿಸುವ ‘ನೇರ ತೆರಿಗೆ ವಿವಾದ್ ಸೆ ವಿಶ್ವಾಸ–2020’ ಮಸೂದೆಗೆ ಸಂಸತ್ತು ಶುಕ್ರವಾರ ಅಂಗೀಕಾರ ನೀಡಿದೆ.</p>.<p>ತೆರಿಗೆಗೆ ಸಂಬಂಧಿಸಿದ ವಿವಾದಗಳಿಗೆ ಪರಿಹಾರ ಕಂಡುಕೊಳ್ಳಲು ಇದು ಅವಕಾಶ ಒದಗಿಸುತ್ತದೆ. ಮಸೂದೆಗೆ ಸಂಬಂಧಿಸಿದಂತೆ ಎಲ್ಲ ಭಾಷೆಗಳಲ್ಲಿ ಲಭ್ಯ ಇರುವ ಸಂಪೂರ್ಣ ವಿವರಗಳನ್ನು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಕಳಿಸಿಕೊಡಲಿದೆ.</p>.<p>ನೇರ ತೆರಿಗೆ ಪಾವತಿ ಕುರಿತ 4.83 ಲಕ್ಷ ಪ್ರಕರಣಗಳು ಹೈಕೋರ್ಟ್, ಸುಪ್ರೀಂಕೋರ್ಟ್, ಸಾಲ ವಸೂಲಾತಿ ನ್ಯಾಯಮಂಡಳಿ ಸೇರಿದಂತೆ ವಿವಿಧ ಮೇಲ್ಮನವಿ ಪ್ರಾಧಿಕಾರಗಳಲ್ಲಿ ವಿಚಾರಣೆ ಹಂತದಲ್ಲಿ ಇವೆ. ಈ ಪ್ರಕರಣಗಳ ಒಟ್ಟಾರೆ ಮೊತ್ತ ₹ 9.32 ಲಕ್ಷ ಕೋಟಿಗಳಷ್ಟಿದೆ.</p>.<p>ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸುವವರು ವಿವಾದದಲ್ಲಿ ಇರುವ ಒಟ್ಟಾರೆ ತೆರಿಗೆ ಮೊತ್ತವನ್ನು ಇದೇ 31ರ ಒಳಗೆ ಪಾವತಿಸಿದರೆ ಅವರ ಪಾಲಿನ ಬಡ್ಡಿ ಮತ್ತು ದಂಡದ ಮೊತ್ತವನ್ನು ಸಂಪೂರ್ಣವಾಗಿ ಮನ್ನಾ ಮಾಡುವ ಸೌಲಭ್ಯ ಇದರಲ್ಲಿ ಇದೆ.</p>.<p>ಈ ಯೋಜನೆ ಜೂನ್ 30ರವರೆಗೆ ಜಾರಿಯಲ್ಲಿ ಇರಲಿದೆ. ತೆರಿಗೆ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇದು ಸುವರ್ಣಾವಕಾಶ ಕಲ್ಪಿಸಿದೆ ಎಂದು ಆದಾಯ ತೆರಿಗೆ ಇಲಾಖೆಯು ಪ್ರಚಾರ ಮಾಡುತ್ತಿದೆ.</p>.<p><strong>ಇದನ್ನೂ ಓದಿ:</strong><a href="www.prajavani.net/business/commerce-news/finance-minister-nirmala-sitharam-introduces-direct-tax-vivad-se-vishwas-bill-in-lok-sabha-703145.html" target="_blank">ತೆರಿಗೆ ಪ್ರಕರಣಗಳ ಇತ್ಯರ್ಥಕ್ಕೆ 'ವಿವಾದ್ ಸೇ ವಿಶ್ವಾಸ್'; ಲೋಕಸಭೆಯಲ್ಲಿ ಮಂಡನೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>