<p><strong>ನವದೆಹಲಿ:</strong> ಬ್ಯಾಂಕ್ಗಳ ಆಡಳಿತ ಸುಧಾರಣೆ ಹಾಗೂ ಠೇವಣಿದಾರರ ಹಿತರಕ್ಷಣೆಗೆ ಸಂಬಂಧಿಸಿದಂತೆ ಮಂಡಿಸಿದ್ದ ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆ 2024ಕ್ಕೆ ರಾಜ್ಯಸಭೆಯು, ಬುಧವಾರ ಧ್ವನಿಮತದ ಮೂಲಕ ಒಪ್ಪಿಗೆ ನೀಡಿದೆ.</p>.<p>ಹಳೆಯ ಕಾಯ್ದೆಯಡಿ ಬ್ಯಾಂಕ್ ಖಾತೆಗೆ ಒಬ್ಬರ ನಾಮಿನಿಗೆ ಅವಕಾಶವಿದೆ. ಇನ್ನು ಮುಂದೆ ಏಕಕಾಲದಲ್ಲಿ ಠೇವಣಿದಾರರು ನಾಲ್ವರನ್ನು ನಾಮಿನಿಯಾಗಿ ಸೇರ್ಪಡೆಗೊಳಿಸಲು ಈ ಮಸೂದೆಯು ಅವಕಾಶ ಕಲ್ಪಿಸಿದೆ. ಕಳೆದ ವರ್ಷದ ಡಿಸೆಂಬರ್ನಲ್ಲಿ ಲೋಕಸಭೆಯು ಈ ಮಸೂದೆಗೆ ಅನುಮೋದನೆ ನೀಡಿತ್ತು.</p>.<p>ಹಳೆಯ ಕಾಯ್ದೆಯಡಿ ಕಂಪನಿಗಳ ನಿರ್ದೇಶಕರ ಆಸ್ತಿ ಮೌಲ್ಯದ ಮಿತಿ ನಿಗದಿಪಡಿಸಲಾಗಿದೆ. ಮಸೂದೆಯಲ್ಲಿ ಈ ಮಿತಿ ಹೆಚ್ಚಳದ ಜೊತೆಗೆ ‘ಸಬ್ಸ್ಟಾನ್ಷಿಯಲ್ ಇಂಟರೆಸ್ಟ್’ ಬಗ್ಗೆ ಮರುವ್ಯಾಖ್ಯಾನ ಮಾಡಲಾಗಿದೆ.</p>.<p>ಕಂಪನಿಯ ನಿರ್ದೇಶಕರು ₹5 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಆಸ್ತಿ ಹೊಂದಿದ್ದರೆ ಅದನ್ನು ‘ಸಬ್ಸ್ಟಾನ್ಷಿಯಲ್ ಇಂಟರೆಸ್ಟ್’ ಎಂದು ನಿರ್ಧರಿಸಲಾಗುತ್ತದೆ. ಅಂತಹವರಿಗೆ ಸಾಲ ನೀಡಲು ಆಡಳಿತ ಮಂಡಳಿಯ ಅನುಮೋದನೆ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿತ್ತು. ಮಸೂದೆಯಲ್ಲಿ ನಿರ್ದೇಶಕರ ಆಸ್ತಿಯ ಮಿತಿಯನ್ನು ₹2 ಕೋಟಿಗೆ ಹೆಚ್ಚಿಸಲಾಗಿದೆ. ಇಷ್ಟು ಮೊತ್ತದ ಷೇರುಗಳ ಒಡೆತನ ಅಥವಾ ಮಾಲೀಕತ್ವವನ್ನು ಹೊಂದಬಹುದಾಗಿದೆ. </p>.<div><blockquote>ಜಾರಿ ನಿರ್ದೇಶನಾಲಯವು ಬ್ಯಾಂಕ್ ವಂಚನೆಗೆ ಸಂಬಂಧಿಸಿದ 112 ಪ್ರಕರಣಗಳ ತನಿಖೆ ನಡೆಸುತ್ತಿದೆ. ಉದ್ದೇಶಪೂರ್ವಕ ಸುಸ್ತಿದಾರರ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರ ಬದ್ಧವಿದೆ</blockquote><span class="attribution">ನಿರ್ಮಲಾ ಸೀತಾರಾಮನ್ ಕೇಂದ್ರ ಹಣಕಾಸು ಸಚಿವೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬ್ಯಾಂಕ್ಗಳ ಆಡಳಿತ ಸುಧಾರಣೆ ಹಾಗೂ ಠೇವಣಿದಾರರ ಹಿತರಕ್ಷಣೆಗೆ ಸಂಬಂಧಿಸಿದಂತೆ ಮಂಡಿಸಿದ್ದ ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆ 2024ಕ್ಕೆ ರಾಜ್ಯಸಭೆಯು, ಬುಧವಾರ ಧ್ವನಿಮತದ ಮೂಲಕ ಒಪ್ಪಿಗೆ ನೀಡಿದೆ.</p>.<p>ಹಳೆಯ ಕಾಯ್ದೆಯಡಿ ಬ್ಯಾಂಕ್ ಖಾತೆಗೆ ಒಬ್ಬರ ನಾಮಿನಿಗೆ ಅವಕಾಶವಿದೆ. ಇನ್ನು ಮುಂದೆ ಏಕಕಾಲದಲ್ಲಿ ಠೇವಣಿದಾರರು ನಾಲ್ವರನ್ನು ನಾಮಿನಿಯಾಗಿ ಸೇರ್ಪಡೆಗೊಳಿಸಲು ಈ ಮಸೂದೆಯು ಅವಕಾಶ ಕಲ್ಪಿಸಿದೆ. ಕಳೆದ ವರ್ಷದ ಡಿಸೆಂಬರ್ನಲ್ಲಿ ಲೋಕಸಭೆಯು ಈ ಮಸೂದೆಗೆ ಅನುಮೋದನೆ ನೀಡಿತ್ತು.</p>.<p>ಹಳೆಯ ಕಾಯ್ದೆಯಡಿ ಕಂಪನಿಗಳ ನಿರ್ದೇಶಕರ ಆಸ್ತಿ ಮೌಲ್ಯದ ಮಿತಿ ನಿಗದಿಪಡಿಸಲಾಗಿದೆ. ಮಸೂದೆಯಲ್ಲಿ ಈ ಮಿತಿ ಹೆಚ್ಚಳದ ಜೊತೆಗೆ ‘ಸಬ್ಸ್ಟಾನ್ಷಿಯಲ್ ಇಂಟರೆಸ್ಟ್’ ಬಗ್ಗೆ ಮರುವ್ಯಾಖ್ಯಾನ ಮಾಡಲಾಗಿದೆ.</p>.<p>ಕಂಪನಿಯ ನಿರ್ದೇಶಕರು ₹5 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಆಸ್ತಿ ಹೊಂದಿದ್ದರೆ ಅದನ್ನು ‘ಸಬ್ಸ್ಟಾನ್ಷಿಯಲ್ ಇಂಟರೆಸ್ಟ್’ ಎಂದು ನಿರ್ಧರಿಸಲಾಗುತ್ತದೆ. ಅಂತಹವರಿಗೆ ಸಾಲ ನೀಡಲು ಆಡಳಿತ ಮಂಡಳಿಯ ಅನುಮೋದನೆ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿತ್ತು. ಮಸೂದೆಯಲ್ಲಿ ನಿರ್ದೇಶಕರ ಆಸ್ತಿಯ ಮಿತಿಯನ್ನು ₹2 ಕೋಟಿಗೆ ಹೆಚ್ಚಿಸಲಾಗಿದೆ. ಇಷ್ಟು ಮೊತ್ತದ ಷೇರುಗಳ ಒಡೆತನ ಅಥವಾ ಮಾಲೀಕತ್ವವನ್ನು ಹೊಂದಬಹುದಾಗಿದೆ. </p>.<div><blockquote>ಜಾರಿ ನಿರ್ದೇಶನಾಲಯವು ಬ್ಯಾಂಕ್ ವಂಚನೆಗೆ ಸಂಬಂಧಿಸಿದ 112 ಪ್ರಕರಣಗಳ ತನಿಖೆ ನಡೆಸುತ್ತಿದೆ. ಉದ್ದೇಶಪೂರ್ವಕ ಸುಸ್ತಿದಾರರ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರ ಬದ್ಧವಿದೆ</blockquote><span class="attribution">ನಿರ್ಮಲಾ ಸೀತಾರಾಮನ್ ಕೇಂದ್ರ ಹಣಕಾಸು ಸಚಿವೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>