<p><strong>ನವದೆಹಲಿ</strong>: ಬ್ಯಾಂಕ್ಗಳು ಆರ್ಬಿಐನಿಂದ ಹಣಕಾಸಿನ ನಿರ್ಬಂಧಕ್ಕೆ ಒಳಗಾದಲ್ಲಿ, ಆ ಬ್ಯಾಂಕ್ನ ಠೇವಣಿದಾರರಿಗೆ 90 ದಿನಗಳಲ್ಲಿ ₹ 5 ಲಕ್ಷದವರೆಗೆ ವಿಮಾ ಪರಿಹಾರ ಮೊತ್ತ ನೀಡಲು ಅವಕಾಶ ಕಲ್ಪಿಸುವ ‘ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ’ಗೆ (ಡಿಐಸಿಜಿಸಿ ಮಸೂದೆ) ಲೋಕಸಭೆಯು ಸೋಮವಾರ ಅನುಮೋದನೆ ನೀಡಿದೆ.</p>.<p>ವಿರೋಧ ಪಕ್ಷಗಳ ಸದಸ್ಯರು ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಗದ್ದಲ ಎಬ್ಬಿಸಿದ್ದ ಸಂದರ್ಭದಲ್ಲಿ ಈ ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಈ ಮಸೂದೆಯನ್ನು ರಾಜ್ಯಸಭೆಯು ಹಿಂದಿನ ವಾರ ಅನುಮೋದಿಸಿದೆ. ಪಿಎಂಸಿ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್ಗಳಲ್ಲಿ ಠೇವಣಿ ಇರಿಸಿದವರಿಗೆ ಇದರಿಂದ ಪ್ರಯೋಜನ ಆಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.</p>.<p>ಹಣಕಾಸಿನ ಬಿಕ್ಕಟ್ಟಿಗೆ ಸಿಲುಕಿರುವ, ಆರ್ಬಿಐನಿಂದ ನಿರ್ಬಂಧಗಳಿಗೆ ಗುರಿಯಾಗಿರುವ ಒಟ್ಟು 23 ಸಹಕಾರ ಬ್ಯಾಂಕ್ಗಳ ಠೇವಣಿದಾರರಿಗೂ ಇದರಿಂದ ಅನುಕೂಲ ಆಗಲಿದೆ ಎಂದು ನಿರ್ಮಲಾ ಅವರು ಸ್ಪಷ್ಟಪಡಿಸಿದರು. ಆರ್ಬಿಐನ ಅಂಗಸಂಸ್ಥೆ ಆಗಿರುವ ಡಿಐಸಿಜಿಸಿ ಬ್ಯಾಂಕ್ ಠೇವಣಿದಾರರಿಗೆ ವಿಮಾ ಸೌಲಭ್ಯವನ್ನು ನೀಡಲಿದೆ.</p>.<p>ಈಗಿರುವ ನಿಯಮಗಳ ಅನುಸಾರ, ಬ್ಯಾಂಕ್ ನಿರ್ಬಂಧಕ್ಕೆ ಒಳಗಾದ ನಂತರ ಠೇವಣಿದಾರರಿಗೆ ವಿಮಾ ಮೊತ್ತ ಸಿಗಲು 8–10 ವರ್ಷಗಳು ಬೇಕಾಗುವುದೂ ಇದೆ.</p>.<p>ತಿದ್ದುಪಡಿ ಮಸೂದೆಗೆ ಸಂಸತ್ತಿನ ಅನುಮೋದನೆ ದೊರೆತಿರುವ ಕಾರಣ, ಬೆಂಗಳೂರಿನ ಗುರುರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ ಹಣ ಠೇವಣಿ ಇರಿಸಿದ್ದವರಿಗೂ ₹ 5 ಲಕ್ಷದವರೆಗಿನ ವಿಮಾ ಪರಿಹಾರ ಮೊತ್ತದ ಪ್ರಯೋಜನ ಸಿಗಲಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ ಹೇಳಿದ್ದಾರೆ. ಈ ಬ್ಯಾಂಕ್ನ ಅಂದಾಜು 40 ಸಾವಿರ ಠೇವಣಿದಾರರಿಗೆ ಪ್ರಯೋಜನ ಆಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬ್ಯಾಂಕ್ಗಳು ಆರ್ಬಿಐನಿಂದ ಹಣಕಾಸಿನ ನಿರ್ಬಂಧಕ್ಕೆ ಒಳಗಾದಲ್ಲಿ, ಆ ಬ್ಯಾಂಕ್ನ ಠೇವಣಿದಾರರಿಗೆ 90 ದಿನಗಳಲ್ಲಿ ₹ 5 ಲಕ್ಷದವರೆಗೆ ವಿಮಾ ಪರಿಹಾರ ಮೊತ್ತ ನೀಡಲು ಅವಕಾಶ ಕಲ್ಪಿಸುವ ‘ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ’ಗೆ (ಡಿಐಸಿಜಿಸಿ ಮಸೂದೆ) ಲೋಕಸಭೆಯು ಸೋಮವಾರ ಅನುಮೋದನೆ ನೀಡಿದೆ.</p>.<p>ವಿರೋಧ ಪಕ್ಷಗಳ ಸದಸ್ಯರು ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಗದ್ದಲ ಎಬ್ಬಿಸಿದ್ದ ಸಂದರ್ಭದಲ್ಲಿ ಈ ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಈ ಮಸೂದೆಯನ್ನು ರಾಜ್ಯಸಭೆಯು ಹಿಂದಿನ ವಾರ ಅನುಮೋದಿಸಿದೆ. ಪಿಎಂಸಿ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್ಗಳಲ್ಲಿ ಠೇವಣಿ ಇರಿಸಿದವರಿಗೆ ಇದರಿಂದ ಪ್ರಯೋಜನ ಆಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.</p>.<p>ಹಣಕಾಸಿನ ಬಿಕ್ಕಟ್ಟಿಗೆ ಸಿಲುಕಿರುವ, ಆರ್ಬಿಐನಿಂದ ನಿರ್ಬಂಧಗಳಿಗೆ ಗುರಿಯಾಗಿರುವ ಒಟ್ಟು 23 ಸಹಕಾರ ಬ್ಯಾಂಕ್ಗಳ ಠೇವಣಿದಾರರಿಗೂ ಇದರಿಂದ ಅನುಕೂಲ ಆಗಲಿದೆ ಎಂದು ನಿರ್ಮಲಾ ಅವರು ಸ್ಪಷ್ಟಪಡಿಸಿದರು. ಆರ್ಬಿಐನ ಅಂಗಸಂಸ್ಥೆ ಆಗಿರುವ ಡಿಐಸಿಜಿಸಿ ಬ್ಯಾಂಕ್ ಠೇವಣಿದಾರರಿಗೆ ವಿಮಾ ಸೌಲಭ್ಯವನ್ನು ನೀಡಲಿದೆ.</p>.<p>ಈಗಿರುವ ನಿಯಮಗಳ ಅನುಸಾರ, ಬ್ಯಾಂಕ್ ನಿರ್ಬಂಧಕ್ಕೆ ಒಳಗಾದ ನಂತರ ಠೇವಣಿದಾರರಿಗೆ ವಿಮಾ ಮೊತ್ತ ಸಿಗಲು 8–10 ವರ್ಷಗಳು ಬೇಕಾಗುವುದೂ ಇದೆ.</p>.<p>ತಿದ್ದುಪಡಿ ಮಸೂದೆಗೆ ಸಂಸತ್ತಿನ ಅನುಮೋದನೆ ದೊರೆತಿರುವ ಕಾರಣ, ಬೆಂಗಳೂರಿನ ಗುರುರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ ಹಣ ಠೇವಣಿ ಇರಿಸಿದ್ದವರಿಗೂ ₹ 5 ಲಕ್ಷದವರೆಗಿನ ವಿಮಾ ಪರಿಹಾರ ಮೊತ್ತದ ಪ್ರಯೋಜನ ಸಿಗಲಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ ಹೇಳಿದ್ದಾರೆ. ಈ ಬ್ಯಾಂಕ್ನ ಅಂದಾಜು 40 ಸಾವಿರ ಠೇವಣಿದಾರರಿಗೆ ಪ್ರಯೋಜನ ಆಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>