<p><strong>ಮುಂಬೈ</strong>: ಧಾರಾವಿ ಕೊಳೆಗೇರಿ ಪುನರಾಭಿವೃದ್ಧಿ ಬಗ್ಗೆ ಅದಾನಿ ಸಮೂಹಕ್ಕೆ ಮಹಾರಾಷ್ಟ್ರ ರಾಜ್ಯ ಸರ್ಕಾರ ನೀಡಿದ್ದ ಟೆಂಡರ್ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.</p>.<p>ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ಅಮಿತ್ ಬೋರ್ಕರ್ ಅವರಿದ್ದ ವಿಭಾಗೀಯ ನ್ಯಾಯಪೀಠವು, ‘ಟೆಂಡರ್ ನೀಡುವಲ್ಲಿ ನಿರಂಕುಶತೆ, ಅಸಮರ್ಪಕತೆ ಅಥವಾ ವಿಕೃತತೆ ಇರುವುದು ಕಂಡುಬಂದಿಲ್ಲ’ ಎಂದು ಹೇಳಿದೆ.</p>.<p>ಧಾರಾವಿ ಪುನರಾಭಿವೃದ್ಧಿ ಯೋಜನೆಯು ಮಹಾರಾಷ್ಟ್ರದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ವೇಳೆ ರಾಜಕೀಯವಾಗಿ ಬಹುಚರ್ಚಿತ ವಿಷಯವಾಗಿತ್ತು. ಬಿಜೆಪಿ ನೇತೃತ್ವದ ಮಹಾಯುತಿ ಮತ್ತು ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ ಆಘಾಡಿ ಕೂಟಕ್ಕೆ ಪ್ರತಿಷ್ಠೆಯ ವಿಷಯವಾಗಿತ್ತು. </p>.<p>₹5,069 ಕೋಟಿ ಮೊತ್ತದ ಈ ಟೆಂಡರ್ ಅನ್ನು ಸರ್ಕಾರವು ಅದಾನಿ ಸಮೂಹಕ್ಕೆ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. </p>.<p><strong>ಪ್ರಕರಣ ಏನು?:</strong></p>.<p>2018ರಲ್ಲಿ ನಡೆದ ಟೆಂಡರ್ನಲ್ಲಿ ಯುಎಇ ಮೂಲದ ಸೆಕ್ಲಿಂಕ್ ಟೆಕ್ನಾಲಜೀಸ್ ಕಂಪನಿಯು ₹7,200 ಕೋಟಿಗೆ ಬಿಡ್ ಸಲ್ಲಿಸಿ, ಅತಿದೊಡ್ಡ ಬಿಡ್ಡರ್ ಆಗಿತ್ತು.</p>.<p>ಆದರೆ, ಸರ್ಕಾರವು 2022ರಲ್ಲಿ ಈ ಟೆಂಡರ್ ರದ್ದುಪಡಿಸಿ ಹೆಚ್ಚುವರಿ ಷರತ್ತುಗಳೊಂದಿಗೆ ಹೊಸ ಟೆಂಡರ್ ಪ್ರಕಟಿಸಿತ್ತು. ಈ ಟೆಂಡರ್ ಅದಾನಿ ಸಮೂಹದ ಪಾಲಾಗಿತ್ತು.</p>.<p>ಸರ್ಕಾರವು ಅದಾನಿ ಸಮೂಹಕ್ಕೆ ಅನುಕೂಲ ಕಲ್ಪಿಸಲು ತನ್ನ ಸೇರಬೇಕಿದ್ದ ಟೆಂಡರ್ ಅನ್ನು ರದ್ದುಪಡಿಸಿದೆ ಎಂದು ಸೆಕ್ಲಿಂಕ್ ಟೆಕ್ನಾಲಜೀಸ್ ಕಂಪನಿಯು ಹೈಕೋರ್ಟ್ನ ಮೆಟ್ಟಿಲೇರಿತ್ತು.</p>.<p>ಮುಂಬೈನ ಹೃದಯ ಭಾಗದಲ್ಲಿರುವ ಈ ಕೊಳೆಗೇರಿ ಪ್ರದೇಶವು 259 ಹೆಕ್ಟೇರ್ ಪ್ರದೇಶದಲ್ಲಿ ವಿಸ್ತರಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಧಾರಾವಿ ಕೊಳೆಗೇರಿ ಪುನರಾಭಿವೃದ್ಧಿ ಬಗ್ಗೆ ಅದಾನಿ ಸಮೂಹಕ್ಕೆ ಮಹಾರಾಷ್ಟ್ರ ರಾಜ್ಯ ಸರ್ಕಾರ ನೀಡಿದ್ದ ಟೆಂಡರ್ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.</p>.<p>ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ಅಮಿತ್ ಬೋರ್ಕರ್ ಅವರಿದ್ದ ವಿಭಾಗೀಯ ನ್ಯಾಯಪೀಠವು, ‘ಟೆಂಡರ್ ನೀಡುವಲ್ಲಿ ನಿರಂಕುಶತೆ, ಅಸಮರ್ಪಕತೆ ಅಥವಾ ವಿಕೃತತೆ ಇರುವುದು ಕಂಡುಬಂದಿಲ್ಲ’ ಎಂದು ಹೇಳಿದೆ.</p>.<p>ಧಾರಾವಿ ಪುನರಾಭಿವೃದ್ಧಿ ಯೋಜನೆಯು ಮಹಾರಾಷ್ಟ್ರದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ವೇಳೆ ರಾಜಕೀಯವಾಗಿ ಬಹುಚರ್ಚಿತ ವಿಷಯವಾಗಿತ್ತು. ಬಿಜೆಪಿ ನೇತೃತ್ವದ ಮಹಾಯುತಿ ಮತ್ತು ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ ಆಘಾಡಿ ಕೂಟಕ್ಕೆ ಪ್ರತಿಷ್ಠೆಯ ವಿಷಯವಾಗಿತ್ತು. </p>.<p>₹5,069 ಕೋಟಿ ಮೊತ್ತದ ಈ ಟೆಂಡರ್ ಅನ್ನು ಸರ್ಕಾರವು ಅದಾನಿ ಸಮೂಹಕ್ಕೆ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. </p>.<p><strong>ಪ್ರಕರಣ ಏನು?:</strong></p>.<p>2018ರಲ್ಲಿ ನಡೆದ ಟೆಂಡರ್ನಲ್ಲಿ ಯುಎಇ ಮೂಲದ ಸೆಕ್ಲಿಂಕ್ ಟೆಕ್ನಾಲಜೀಸ್ ಕಂಪನಿಯು ₹7,200 ಕೋಟಿಗೆ ಬಿಡ್ ಸಲ್ಲಿಸಿ, ಅತಿದೊಡ್ಡ ಬಿಡ್ಡರ್ ಆಗಿತ್ತು.</p>.<p>ಆದರೆ, ಸರ್ಕಾರವು 2022ರಲ್ಲಿ ಈ ಟೆಂಡರ್ ರದ್ದುಪಡಿಸಿ ಹೆಚ್ಚುವರಿ ಷರತ್ತುಗಳೊಂದಿಗೆ ಹೊಸ ಟೆಂಡರ್ ಪ್ರಕಟಿಸಿತ್ತು. ಈ ಟೆಂಡರ್ ಅದಾನಿ ಸಮೂಹದ ಪಾಲಾಗಿತ್ತು.</p>.<p>ಸರ್ಕಾರವು ಅದಾನಿ ಸಮೂಹಕ್ಕೆ ಅನುಕೂಲ ಕಲ್ಪಿಸಲು ತನ್ನ ಸೇರಬೇಕಿದ್ದ ಟೆಂಡರ್ ಅನ್ನು ರದ್ದುಪಡಿಸಿದೆ ಎಂದು ಸೆಕ್ಲಿಂಕ್ ಟೆಕ್ನಾಲಜೀಸ್ ಕಂಪನಿಯು ಹೈಕೋರ್ಟ್ನ ಮೆಟ್ಟಿಲೇರಿತ್ತು.</p>.<p>ಮುಂಬೈನ ಹೃದಯ ಭಾಗದಲ್ಲಿರುವ ಈ ಕೊಳೆಗೇರಿ ಪ್ರದೇಶವು 259 ಹೆಕ್ಟೇರ್ ಪ್ರದೇಶದಲ್ಲಿ ವಿಸ್ತರಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>