ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಿ.ಮುರಳಿಕೃಷ್ಣ, ‘ಆರ್ಥಿಕ ಹಿನ್ನಡೆ, ಕೋವಿಡ್ ಸಾಂಕ್ರಾಮಿಕದಿಂದ ನೆಲ ಕಚ್ಚಿರುವ ಕಿರು, ಸಣ್ಣ ಮತ್ತು ಮಧ್ಯಮ ವಲಯದ ಕೈಗಾರಿಕೆಗಳಿಗೆ ಕಚ್ಚಾ ವಸ್ತುಗಳ ಬೆಲೆ ಏರಿಕೆ ದೊಡ್ಡ ಹೊಡೆತ ನೀಡಿದೆ. ಇದನ್ನು ವಿರೋಧಿಸಿ ಅಖಿಲ ಭಾರತ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು, ರಾಜ್ಯದ ಎಲ್ಲಾ ಉದ್ಯಮಗಳನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲು ಕರೆ ನೀಡಿದ್ದೇವೆ. ದೇಶದ ಆರ್ಥಿಕ ಭದ್ರತೆಗೆ, ಉದ್ಯೋಗ ಮತ್ತು ಜೀವನಕ್ಕೆ ಆಧಾರವಾಗಿರುವ ಈ ಉದ್ಯಮ ವಲಯವನ್ನು ರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.