<p><strong>ಮುಂಬೈ</strong>: ಪೆಟ್ರೋಲ್ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ತಂದರೆ, ಅದರ ದರವು ಲೀಟರಿಗೆ ₹ 75ಕ್ಕೆ ಇಳಿಯಲಿದೆ. ಜಿಎಸ್ಟಿ ವ್ಯಾಪ್ತಿಗೆ ಡೀಸೆಲ್ ಅನ್ನೂ ತಂದರೆ, ಅದರ ದರವು ಲೀಟರಿಗೆ ₹ 68ಕ್ಕೆ ಇಳಿಕೆ ಆಗಲಿದೆ.</p>.<p>‘ಆದರೆ ಹೀಗೆ ಮಾಡುವುದಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆ ಇದೆ. ಇದರಿಂದಾಗಿ ಜಾಗತಿಕವಾಗಿ ತೈಲೋತ್ಪನ್ನಗಳ ದರವು ಗರಿಷ್ಠ ಮಟ್ಟದಲ್ಲಿ ಇರುವ ರಾಷ್ಟ್ರಗಳ ಸಾಲಿನಲ್ಲಿ ಭಾರತವೂ ಒಂದಾಗಿದೆ’ ಎಂದು ಎಸ್ಬಿಐ ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.</p>.<p>ಪೆಟ್ರೋಲ್ ಮತ್ತು ಡೀಸೆಲ್ಅನ್ನು ಜಿಎಸ್ಟಿ ವ್ಯಾಪ್ತಿಗೆ ತರುವುದರಿಂದ ಕೇಂದ್ರ ಮತ್ತು ರಾಜ್ಯಗಳಿಗೆ ಆಗುವ ವರಮಾನ ನಷ್ಟವು ₹ 1 ಲಕ್ಷ ಕೋಟಿ ಮಾತ್ರ ಎಂದು ಅವರು ಅಂದಾಜಿಸಿದ್ದಾರೆ. ಜಿಎಸ್ಟಿ ವ್ಯವಸ್ಥೆಗೆ ಬಂದರೆ ಪೆಟ್ರೋಲ್ ಬಳಕೆಯು ಶೇ 10ರಷ್ಟು, ಡೀಸೆಲ್ ಬಳಕೆಯು ಶೇ 15ರಷ್ಟು ಹೆಚ್ಚಾಗುತ್ತದೆ ಎಂದು ಊಹಿಸಿ ವರಮಾನ ನಷ್ಟದ ಮೊತ್ತವನ್ನು ಲೆಕ್ಕ ಹಾಕಲಾಗಿದೆ.</p>.<p>ಕಚ್ಚಾ ತೈಲ ದರವು ಒಂದು ಬ್ಯಾರಲ್ಗೆ 60 ಅಮೆರಿಕನ್ ಡಾಲರ್ ಮತ್ತು ಡಾಲರ್–ರೂಪಾಯಿ ವಿನಿಮಯ ದರ ₹ 73 ಆಗಿರುತ್ತದೆ,ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಜಿಎಸ್ಟಿ ವ್ಯವಸ್ಥೆಯಲ್ಲಿ ಶೇ 28ರಷ್ಟು ತೆರಿಗೆ ವಿಧಸಲಾಗುತ್ತದೆ ಎಂದು ಭಾವಿಸಿ ಅವರು ಬೆಲೆಯ ಲೆಕ್ಕಾಚಾರ ಮಾಡಿದ್ದಾರೆ.</p>.<p>ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸುಂಕ ಮತ್ತು ತೆರಿಗೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ವರಮಾನದ ಪ್ರಮುಖ ಮೂಲ. ಈ ಕಾರಣಕ್ಕಾಗಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ಕೇಂದ್ರ ಮತ್ತು ರಾಜ್ಯಗಳಿಗೆ ಇಷ್ಟವಿಲ್ಲ ಎಂದು ಅರ್ಥಶಾಸ್ತ್ರಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p><strong>ಪೆಟ್ರೋಲ್–ಡೀಸೆಲ್ನಿಂದ ರಾಜ್ಯಕ್ಕೆ ₹12,342 ಕೋಟಿ ತೆರಿಗೆ</strong></p>.<p><strong>ಬೆಂಗಳೂರು:</strong> ‘ಡೀಸೆಲ್ ಮತ್ತು ಪೆಟ್ರೋಲ್ನಿಂದ ರಾಜ್ಯ ಸರ್ಕಾರಕ್ಕೆ 2020–21ನೇ ಸಾಲಿನಲ್ಲಿ ಜನವರಿ ಅಂತ್ಯಕ್ಕೆ ₹12,432 ಕೋಟಿ ತೆರಿಗೆ ಬಂದಿದೆ’ ಎಂದು ರಾಜ್ಯ ಸರ್ಕಾರ ಹೇಳಿದೆ.</p>.<p>ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ನ ಪ್ರಕಾಶ್ ರಾಠೋಡ್ ಪ್ರಶ್ನೆ ಕೇಳಿದ್ದರು.</p>.<p>‘ದಕ್ಷಿಣದ ರಾಜ್ಯಗಳಿಗೆ ಹೋಲಿಸಿದಾಗ ಕೇರಳ ಬಿಟ್ಟು ಪೆಟ್ರೋಲ್, ಡೀಸೆಲ್ ಬೆಲೆ ನಮ್ಮ ರಾಜ್ಯದಲ್ಲಿಯೇ ಕಡಿಮೆ ಇದೆ. ಆದರೆ, ಈ ಮೂಲದಿಂದ ಕೇಂದ್ರ ಸರ್ಕಾರಕ್ಕೆ ಎಷ್ಟು ತೆರಿಗೆ ಬಂದಿದೆ ಎಂಬ ಮಾಹಿತಿ ಇಲ್ಲ’ ಎಂದು ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p><strong>₹11,355 ಕೋಟಿ ಬಾಕಿ: </strong>‘ಈ ಸಾಲಿನ ಜನವರಿಯವರೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ₹11,355 ಕೋಟಿ ಜಿಎಸ್ಟಿ ಪರಿಹಾರ ಬಾಕಿ ಇದೆ’ ಎಂದು ಸರ್ಕಾರ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಪೆಟ್ರೋಲ್ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ತಂದರೆ, ಅದರ ದರವು ಲೀಟರಿಗೆ ₹ 75ಕ್ಕೆ ಇಳಿಯಲಿದೆ. ಜಿಎಸ್ಟಿ ವ್ಯಾಪ್ತಿಗೆ ಡೀಸೆಲ್ ಅನ್ನೂ ತಂದರೆ, ಅದರ ದರವು ಲೀಟರಿಗೆ ₹ 68ಕ್ಕೆ ಇಳಿಕೆ ಆಗಲಿದೆ.</p>.<p>‘ಆದರೆ ಹೀಗೆ ಮಾಡುವುದಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆ ಇದೆ. ಇದರಿಂದಾಗಿ ಜಾಗತಿಕವಾಗಿ ತೈಲೋತ್ಪನ್ನಗಳ ದರವು ಗರಿಷ್ಠ ಮಟ್ಟದಲ್ಲಿ ಇರುವ ರಾಷ್ಟ್ರಗಳ ಸಾಲಿನಲ್ಲಿ ಭಾರತವೂ ಒಂದಾಗಿದೆ’ ಎಂದು ಎಸ್ಬಿಐ ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.</p>.<p>ಪೆಟ್ರೋಲ್ ಮತ್ತು ಡೀಸೆಲ್ಅನ್ನು ಜಿಎಸ್ಟಿ ವ್ಯಾಪ್ತಿಗೆ ತರುವುದರಿಂದ ಕೇಂದ್ರ ಮತ್ತು ರಾಜ್ಯಗಳಿಗೆ ಆಗುವ ವರಮಾನ ನಷ್ಟವು ₹ 1 ಲಕ್ಷ ಕೋಟಿ ಮಾತ್ರ ಎಂದು ಅವರು ಅಂದಾಜಿಸಿದ್ದಾರೆ. ಜಿಎಸ್ಟಿ ವ್ಯವಸ್ಥೆಗೆ ಬಂದರೆ ಪೆಟ್ರೋಲ್ ಬಳಕೆಯು ಶೇ 10ರಷ್ಟು, ಡೀಸೆಲ್ ಬಳಕೆಯು ಶೇ 15ರಷ್ಟು ಹೆಚ್ಚಾಗುತ್ತದೆ ಎಂದು ಊಹಿಸಿ ವರಮಾನ ನಷ್ಟದ ಮೊತ್ತವನ್ನು ಲೆಕ್ಕ ಹಾಕಲಾಗಿದೆ.</p>.<p>ಕಚ್ಚಾ ತೈಲ ದರವು ಒಂದು ಬ್ಯಾರಲ್ಗೆ 60 ಅಮೆರಿಕನ್ ಡಾಲರ್ ಮತ್ತು ಡಾಲರ್–ರೂಪಾಯಿ ವಿನಿಮಯ ದರ ₹ 73 ಆಗಿರುತ್ತದೆ,ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಜಿಎಸ್ಟಿ ವ್ಯವಸ್ಥೆಯಲ್ಲಿ ಶೇ 28ರಷ್ಟು ತೆರಿಗೆ ವಿಧಸಲಾಗುತ್ತದೆ ಎಂದು ಭಾವಿಸಿ ಅವರು ಬೆಲೆಯ ಲೆಕ್ಕಾಚಾರ ಮಾಡಿದ್ದಾರೆ.</p>.<p>ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸುಂಕ ಮತ್ತು ತೆರಿಗೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ವರಮಾನದ ಪ್ರಮುಖ ಮೂಲ. ಈ ಕಾರಣಕ್ಕಾಗಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ಕೇಂದ್ರ ಮತ್ತು ರಾಜ್ಯಗಳಿಗೆ ಇಷ್ಟವಿಲ್ಲ ಎಂದು ಅರ್ಥಶಾಸ್ತ್ರಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p><strong>ಪೆಟ್ರೋಲ್–ಡೀಸೆಲ್ನಿಂದ ರಾಜ್ಯಕ್ಕೆ ₹12,342 ಕೋಟಿ ತೆರಿಗೆ</strong></p>.<p><strong>ಬೆಂಗಳೂರು:</strong> ‘ಡೀಸೆಲ್ ಮತ್ತು ಪೆಟ್ರೋಲ್ನಿಂದ ರಾಜ್ಯ ಸರ್ಕಾರಕ್ಕೆ 2020–21ನೇ ಸಾಲಿನಲ್ಲಿ ಜನವರಿ ಅಂತ್ಯಕ್ಕೆ ₹12,432 ಕೋಟಿ ತೆರಿಗೆ ಬಂದಿದೆ’ ಎಂದು ರಾಜ್ಯ ಸರ್ಕಾರ ಹೇಳಿದೆ.</p>.<p>ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ನ ಪ್ರಕಾಶ್ ರಾಠೋಡ್ ಪ್ರಶ್ನೆ ಕೇಳಿದ್ದರು.</p>.<p>‘ದಕ್ಷಿಣದ ರಾಜ್ಯಗಳಿಗೆ ಹೋಲಿಸಿದಾಗ ಕೇರಳ ಬಿಟ್ಟು ಪೆಟ್ರೋಲ್, ಡೀಸೆಲ್ ಬೆಲೆ ನಮ್ಮ ರಾಜ್ಯದಲ್ಲಿಯೇ ಕಡಿಮೆ ಇದೆ. ಆದರೆ, ಈ ಮೂಲದಿಂದ ಕೇಂದ್ರ ಸರ್ಕಾರಕ್ಕೆ ಎಷ್ಟು ತೆರಿಗೆ ಬಂದಿದೆ ಎಂಬ ಮಾಹಿತಿ ಇಲ್ಲ’ ಎಂದು ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p><strong>₹11,355 ಕೋಟಿ ಬಾಕಿ: </strong>‘ಈ ಸಾಲಿನ ಜನವರಿಯವರೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ₹11,355 ಕೋಟಿ ಜಿಎಸ್ಟಿ ಪರಿಹಾರ ಬಾಕಿ ಇದೆ’ ಎಂದು ಸರ್ಕಾರ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>