ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕಿತ್ತೂರು ಅವರು ನಾಮಪತ್ರ ವಾಪಸ್ ಪಡೆದಿದ್ದರಿಂದ, ತನ್ನನ್ನು ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಪರಿಗಣಿಸಬೇಕು ಎಂದು ಗುರುರಾಜ ಹುಣಸಿಮರದ ಚುನಾವಣಾ ಧಿಕಾರಿಯನ್ನು ಕೋರಿಕೊಂಡರು. ಆಗ ಅಲ್ಲಿಗೆ ಬಂದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ, ಪಾಲಿಕೆ ಸದಸ್ಯರಾದ ಶಿವು ಹಿರೇಮಠ, ಸಂಜಯ ಕಪಟ್ಕರ್ ಇತರರು ಹುಣಸಿಮರದ ಮನವಿಯ ಪುರಸ್ಕರಿಸಬಾರದು ಎಂದು ಪಟ್ಟು ಹಿಡಿದರು.