ಜೈಪುರ: ರಾಜ್ಯದಲ್ಲಿ ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ದರ ಹೆಚ್ಚಳವನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ರಾಜಸ್ಥಾನ ಪೆಟ್ರೋಲಿಯಂ ವಿತರಕರ ಒಕ್ಕೂಟವು ಶನಿವಾರ ಮುಷ್ಕರ ನಡೆಸಿದರು.
ಮುಷ್ಕರದಿಂದಾಗಿ ರಾಜ್ಯದಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಪೆಟ್ರೋಲ್ ಬಂಕ್ಗಳು ಮುಚ್ಚಿದ್ದವು. ಇದರಿಂದ ಜನರು ತೊಂದರೆ ಎದುರಿಸುವಂತಾಯಿತು. ಸರ್ಕಾರಿ ಸ್ವಾಮ್ಯದ ಕಂಪನಿಗಳ ಒಡೆತನದ ಮತ್ತು ಕಂಪನಿಗಳು ನಡೆಸುವ ಪೆಟ್ರೋಲ್ ಬಂಕ್ಗಳು ಮಾತ್ರವೇ ತೆರೆದಿದ್ದವು.
ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ವ್ಯಾಟ್ ಹೆಚ್ಚಿಸಿದ್ದು ಹೆಚ್ಚುವರಿ ವರಮಾನ ಸಂಗ್ರಹಿಸಿದೆ. ನೆರೆಯ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಇಂಧನ ದರಗಳು ಕಡಿಮೆ ಇರುವುದರಿಂದ ಮಾರಾಟದ ಪ್ರಮಾಣವು ಶೇ 34ರಷ್ಟು ಇಳಿಕೆ ಆಗಿದೆ ಎಂದು ಒಕ್ಕೂಟದ ಅಧ್ಯಕ್ಷ ಸುನೀತ್ ಬಗಾಯ್ ತಿಳಿಸಿದ್ದಾರೆ.
ಸರ್ಕಾರಕ್ಕೆ ಈಗಾಗಲೇ ನಮ್ಮ ಬೇಡಿಕೆ ಸಲ್ಲಿಸಿದ್ದೇವೆ. ಸರ್ಕಾರದಿಂದ ಸಕಾರಾತ್ಮಕ ನಿರ್ಧಾರ ಹೊರಬೀಳದೇ ಇದ್ದರೆ ಏಪ್ರಿಲ್ 25ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.petrol