* ನಾಲ್ಕು ಕಾರ್ಮಿಕ ಸಂಹಿತೆಗಳು ಹೊಸ ಆರ್ಥಿಕ ವರ್ಷದಿಂದ ಜಾರಿಗೆ ಬರಬೇಕಿತ್ತು. ಆದರೆ, ಅವು ಸದ್ಯಕ್ಕೆ ಜಾರಿಗೆ ಬರುವುದಿಲ್ಲ. ಈ ಸಂಹಿತೆಗಳಿಗೆ ಸಂಬಂಧಿಸಿದಂತೆ ಅಗತ್ಯ ನಿಯಮಾವಳಿಗಳನ್ನು ರಾಜ್ಯ ಸರ್ಕಾರಗಳು ಅಂತಿಮಗೊಳಿಸದೆ ಇರುವ ಕಾರಣ, ಸಂಹಿತೆಗಳನ್ನು ಜಾರಿಗೊಳಿಸದಿರುವ ತೀರ್ಮಾನಕ್ಕೆ ಬರಲಾಗಿದೆ. ಇದರ ಪರಿಣಾಮವಾಗಿ, ನೌಕರರಿಗೆ ಎಲ್ಲ ಕಡಿತಗಳ ನಂತರ ಕೈಗೆ ಸಿಗುವ ವೇತನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ, ಉದ್ಯೋಗ ನೀಡಿದ ಕಂಪನಿಗಳು ನೌಕರರ ಭವಿಷ್ಯ ನಿಧಿ (ಪಿ.ಎಫ್) ಖಾತೆಗಳಿಗೆ ಹೆಚ್ಚುವರಿ ಕೊಡುಗೆ ನೀಡುವ ಅಗತ್ಯ ಸದ್ಯಕ್ಕೆ ಇಲ್ಲ.