ತಾಲ್ಲೂಕಿನಲ್ಲಿ ಮೊದಲಿನಿಂದಲೂ ಮಳೆಯಾಶ್ರಿತ ಜಮೀನಿನಲ್ಲಿ ಭತ್ತ ಬೆಳೆಯುತ್ತಿದ್ದರು. ಇತ್ತೀಚೆಗೆ ಕೊಳವೆ ಬಾವಿ ಕೊರೆಸಿ ಅಡಿಕೆ, ಬಾಳೆ, ಶುಂಠಿ ಹಾಗೂ ಅನಾನಸ್ ಬೆಳೆದು ಆರ್ಥಿಕ ಸುಧಾರಣೆ ಕಂಡುಕೊಳ್ಳಲು ರೈತರು ಯತ್ನಿಸುತ್ತಿದ್ದಾರೆ. ಆದರೆ, ಯಾವ ಬೆಳೆಗೂ ಸ್ಥಿರ ಬೆಲೆ ಸಿಗುತ್ತಿಲ್ಲ. ಹಾಕಿದ ಬಂಡವಾಳವೂ ಕೈಗೆ ಸಿಗುತ್ತಿಲ್ಲ ಎಂಬುದು ರೈತರ ಅಳಲು.