<p><strong>ನವದೆಹಲಿ:</strong> ಉದ್ಯೋಗ ಅವಕಾಶಗಳನ್ನು, ಕೈಗಾರಿಕೆಗಳ ಉತ್ಪಾದಕತೆಯನ್ನು ಹೆಚ್ಚಿಸುವ ಉದ್ದೇಶದ ಸಮಗ್ರ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ‘ಗತಿಶಕ್ತಿ’ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪ್ರಕಟಿಸಿದರು. ಈ ಮಹತ್ವಾಕಾಂಕ್ಷಿ ಯೋಜನೆಯ ಅಡಿಯಲ್ಲಿ ₹ 100 ಲಕ್ಷ ಕೋಟಿ ವೆಚ್ಚ ಮಾಡುವ ಗುರಿ ಇರುವುದಾಗಿ ತಿಳಿಸಿದರು.</p>.<p>‘ಪ್ರಧಾನ ಮಂತ್ರಿ ಗತಿಶಕ್ತಿ ರಾಷ್ಟ್ರೀಯ ಯೋಜನೆಯನ್ನು ದೇಶವು ಶೀಘ್ರದಲ್ಲಿಯೇ ಜಾರಿಗೊಳಿಸಲಿದೆ’ ಎಂದು ಪ್ರಧಾನಿ ಮೋದಿ ಅವರು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಹೇಳಿದರು. ಈ ಯೋಜನೆಯು ಲಕ್ಷಾಂತರ ಯುವಕರಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿಸಲಿದೆ ಎಂದರು.</p>.<p>‘ಗತಿಶಕ್ತಿ’ಯು ಇಡೀ ದೇಶದಲ್ಲಿನ ಮೂಲಸೌಕರ್ಯ ಯೋಜನೆಗಳಿಗೆ ಅಡಿಪಾಯ ಹಾಕುವ ಮಹಾಯೋಜನೆ. ಇದು ಅರ್ಥ ವ್ಯವಸ್ಥೆಗೆ ಸಮಗ್ರ, ಎಲ್ಲವನ್ನೂ ಒಳಗೊಳ್ಳುವ ಪಥವೊಂದನ್ನು ಹಾಕಿಕೊಡುತ್ತದೆ ಎಂದು ಹೇಳಿದರು.</p>.<p>‘ಗತಿಶಕ್ತಿ ಯೋಜನೆಯು ಪ್ರಯಾಣದ ಸಮಯವನ್ನು ತಗ್ಗಿಸುತ್ತದೆ, ಕೈಗಾರಿಕೆಗಳಲ್ಲಿನ ಉತ್ಪಾದಕತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ. ದೇಶದ ತಯಾರಿಕಾ ವಲಯವು ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಸ್ಪರ್ಧಾತ್ಮಕ ಆಗುವಲ್ಲಿ ನೆರವಾಗಲಿದೆ’ ಎಂದು ವಿವರಿಸಿದರು. ಈ ಯೋಜನೆಯು ಭವಿಷ್ಯದಲ್ಲಿ ಆರ್ಥಿಕ ವಲಯಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆಗಳನ್ನು ತೆರೆದಿಡುತ್ತದೆ ಎಂದರು.</p>.<p>ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವಿಶ್ವದರ್ಜೆಯ ಉತ್ಪನ್ನಗಳನ್ನು ಸಿದ್ಧಪಡಿಸಲು ಭಾರತವು ಒಟ್ಟಾಗಿ ಕೆಲಸ ಮಾಡಬೇಕಿದೆ. ಅಭಿವೃದ್ಧಿಯನ್ನು ಇನ್ನಷ್ಟು ಹೆಚ್ಚಿಸಲು ದೇಶವು ತಯಾರಿಕಾ ವಲಯ ಹಾಗೂ ರಫ್ತಿನ ಮೇಲೆ ಗಮನ ನೀಡಬೇಕಿದೆ ಎಂದೂ ಪ್ರತಿಪಾದಿಸಿದರು.</p>.<p><a href="https://www.prajavani.net/india-news/cji-nv-ramana-sad-for-lack-of-good-debate-in-parliament-857989.html" itemprop="url">ಸಂಸತ್ತಿನಲ್ಲಿ ಗುಣಮಟ್ಟದ ಚರ್ಚೆಯ ಕೊರತೆ: ಸುಪ್ರೀಂ ಮುಖ್ಯ ನ್ಯಾಯಮೂರ್ತಿ ವಿಷಾದ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉದ್ಯೋಗ ಅವಕಾಶಗಳನ್ನು, ಕೈಗಾರಿಕೆಗಳ ಉತ್ಪಾದಕತೆಯನ್ನು ಹೆಚ್ಚಿಸುವ ಉದ್ದೇಶದ ಸಮಗ್ರ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ‘ಗತಿಶಕ್ತಿ’ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪ್ರಕಟಿಸಿದರು. ಈ ಮಹತ್ವಾಕಾಂಕ್ಷಿ ಯೋಜನೆಯ ಅಡಿಯಲ್ಲಿ ₹ 100 ಲಕ್ಷ ಕೋಟಿ ವೆಚ್ಚ ಮಾಡುವ ಗುರಿ ಇರುವುದಾಗಿ ತಿಳಿಸಿದರು.</p>.<p>‘ಪ್ರಧಾನ ಮಂತ್ರಿ ಗತಿಶಕ್ತಿ ರಾಷ್ಟ್ರೀಯ ಯೋಜನೆಯನ್ನು ದೇಶವು ಶೀಘ್ರದಲ್ಲಿಯೇ ಜಾರಿಗೊಳಿಸಲಿದೆ’ ಎಂದು ಪ್ರಧಾನಿ ಮೋದಿ ಅವರು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಹೇಳಿದರು. ಈ ಯೋಜನೆಯು ಲಕ್ಷಾಂತರ ಯುವಕರಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿಸಲಿದೆ ಎಂದರು.</p>.<p>‘ಗತಿಶಕ್ತಿ’ಯು ಇಡೀ ದೇಶದಲ್ಲಿನ ಮೂಲಸೌಕರ್ಯ ಯೋಜನೆಗಳಿಗೆ ಅಡಿಪಾಯ ಹಾಕುವ ಮಹಾಯೋಜನೆ. ಇದು ಅರ್ಥ ವ್ಯವಸ್ಥೆಗೆ ಸಮಗ್ರ, ಎಲ್ಲವನ್ನೂ ಒಳಗೊಳ್ಳುವ ಪಥವೊಂದನ್ನು ಹಾಕಿಕೊಡುತ್ತದೆ ಎಂದು ಹೇಳಿದರು.</p>.<p>‘ಗತಿಶಕ್ತಿ ಯೋಜನೆಯು ಪ್ರಯಾಣದ ಸಮಯವನ್ನು ತಗ್ಗಿಸುತ್ತದೆ, ಕೈಗಾರಿಕೆಗಳಲ್ಲಿನ ಉತ್ಪಾದಕತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ. ದೇಶದ ತಯಾರಿಕಾ ವಲಯವು ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಸ್ಪರ್ಧಾತ್ಮಕ ಆಗುವಲ್ಲಿ ನೆರವಾಗಲಿದೆ’ ಎಂದು ವಿವರಿಸಿದರು. ಈ ಯೋಜನೆಯು ಭವಿಷ್ಯದಲ್ಲಿ ಆರ್ಥಿಕ ವಲಯಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆಗಳನ್ನು ತೆರೆದಿಡುತ್ತದೆ ಎಂದರು.</p>.<p>ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವಿಶ್ವದರ್ಜೆಯ ಉತ್ಪನ್ನಗಳನ್ನು ಸಿದ್ಧಪಡಿಸಲು ಭಾರತವು ಒಟ್ಟಾಗಿ ಕೆಲಸ ಮಾಡಬೇಕಿದೆ. ಅಭಿವೃದ್ಧಿಯನ್ನು ಇನ್ನಷ್ಟು ಹೆಚ್ಚಿಸಲು ದೇಶವು ತಯಾರಿಕಾ ವಲಯ ಹಾಗೂ ರಫ್ತಿನ ಮೇಲೆ ಗಮನ ನೀಡಬೇಕಿದೆ ಎಂದೂ ಪ್ರತಿಪಾದಿಸಿದರು.</p>.<p><a href="https://www.prajavani.net/india-news/cji-nv-ramana-sad-for-lack-of-good-debate-in-parliament-857989.html" itemprop="url">ಸಂಸತ್ತಿನಲ್ಲಿ ಗುಣಮಟ್ಟದ ಚರ್ಚೆಯ ಕೊರತೆ: ಸುಪ್ರೀಂ ಮುಖ್ಯ ನ್ಯಾಯಮೂರ್ತಿ ವಿಷಾದ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>