ನವದೆಹಲಿ:ದೇಶದ ಆರ್ಥಿಕ ವೃದ್ಧಿ ದರ ಇಳಿಮುಖವಾಗಿದೆ, ಆರ್ಥಿಕತೆಗೆ ಚೇತರಿಕೆ ನೀಡಲು ಹಲವು ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ 2020–21ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯೂ ಆಗಲಿದೆ. ಅದಕ್ಕೂ ಮುನ್ನ ಸಲಹೆಗಳನ್ನು ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಕೇಳಿದ್ದಾರೆ.