ಕೊಚ್ಚಿ–ಮಂಗಳೂರು ಅನಿಲ ಕೊಳವೆಮಾರ್ಗ: 5ರಂದು ಪ್ರಧಾನಿ ಉದ್ಘಾಟನೆ

ನವದೆಹಲಿ: ‘ಕೊಚ್ಚಿ–ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇದೇ 5ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಯುವ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಲಿದ್ದಾರೆ’ ಎಂದು ಗೇಲ್ ಇಂಡಿಯಾದ ಅಧ್ಯಕ್ಷ ಮನೋಜ್ ಜೈನ್ ಅವರು ಶನಿವಾರ ಮಾಹಿತಿ ನೀಡಿದರು.
ಕರ್ನಾಟಕ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದು ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಕೇರಳದ ಕೊಚ್ಚಿಯಿಂದ ದಕ್ಷಿಣ ಕನ್ನಡದ ಮಂಗಳೂರಿನವರೆಗೆ ಸಂರ್ಪಕ ಕಲ್ಪಿಸುವ 450 ಕಿ.ಮೀ. ಉದ್ದದ ಗ್ಯಾಸ್ ಪೈಪ್ಲೈನ್ ಯೋಜನೆ ಇದಾಗಿದೆ. ಕೇರಳದ ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೊಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಮಾರ್ಗವಾಗಿ ಮಂಗಳೂರಿನವರೆಗೆ ಅನಿಲ ಪೂರೈಕೆಯಾಗಲಿದೆ’ ಎಂದು ವಿವರಿಸಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.