<p><strong>ನವದೆಹಲಿ:</strong> ‘ದೇಶದ ಆರ್ಥಿಕ ತಳಹದಿ ಸುಭದ್ರವಾಗಿದ್ದು, ಪುಟಿದೇಳುವ ಸಾಮರ್ಥ್ಯವನ್ನು ಹೊಂದಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>‘ಪ್ರವಾಸ, ನಗರಾಭಿವೃದ್ಧಿ, ಮೂಲಸೌಕರ್ಯ ಮತ್ತು ಕೃಷಿ ಆಧಾರಿತ ಉದ್ಯಮಗಳು ಆರ್ಥಿಕ ಚೇತರಿಕೆ ಮತ್ತು ಉದ್ಯೋಗ ಸೃಷ್ಟಿಸುವ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿವೆ’ ಎಂದಿದ್ದಾರೆ.</p>.<p>ಆರ್ಥಿಕತೆಯು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅವುಗಳನ್ನು ಪರಿಹರಿಸಲು ಇರುವ ಮಾರ್ಗಗಳ ಕುರಿತಾಗಿಮೋದಿ ಅವರು ಕಳೆದ ಕೆಲವು ದಿನಗಳಿಂದ ಉದ್ಯಮಿಗಳು, ಆರ್ಥಿಕ ತಜ್ಞರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.</p>.<p>ಗುರುವಾರ ನೀತಿ ಆಯೋಗದ ಕಚೇರಿಯಲ್ಲಿ ಆರ್ಥಿಕ ತಜ್ಞರು, ಖಾಸಗಿ ಹೂಡಿಕೆದಾರರು, ವಾಣಿಜ್ಯೋದ್ಯಮಿ<br />ಗಳು ಮತ್ತು ಕೃಷಿ ಪರಿಣತರೊಂದಿಗೆ ಸಭೆ ನಡೆಸಿದರು. ದೇಶದ ಆರ್ಥಿಕತೆಯನ್ನು 2024ರೊಳಗೆ ₹ 350 ಲಕ್ಷ ಕೋಟಿಗೆ ತಲುಪಿಸುವ ನಿಟ್ಟಿನಲ್ಲಿ ಗಮನ ಕೇಂದ್ರೀಕರಿಸುವಂತೆ ಕರೆ ನೀಡಿದರು.</p>.<p class="Subhead"><strong>ನಿರ್ಮಲಾ ಗೈರು:</strong> ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಬಜೆಟ್ ಪೂರ್ವ ಸಭೆಯಲ್ಲಿ ಭಾಗವಹಿಸಿದ್ದರು. ಹೀಗಾಗಿ ಅವರ ಅನುಪಸ್ಥಿತಿಯಲ್ಲಿಯೇ ಮೋದಿ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ದೇಶದ ಆರ್ಥಿಕ ತಳಹದಿ ಸುಭದ್ರವಾಗಿದ್ದು, ಪುಟಿದೇಳುವ ಸಾಮರ್ಥ್ಯವನ್ನು ಹೊಂದಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>‘ಪ್ರವಾಸ, ನಗರಾಭಿವೃದ್ಧಿ, ಮೂಲಸೌಕರ್ಯ ಮತ್ತು ಕೃಷಿ ಆಧಾರಿತ ಉದ್ಯಮಗಳು ಆರ್ಥಿಕ ಚೇತರಿಕೆ ಮತ್ತು ಉದ್ಯೋಗ ಸೃಷ್ಟಿಸುವ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿವೆ’ ಎಂದಿದ್ದಾರೆ.</p>.<p>ಆರ್ಥಿಕತೆಯು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅವುಗಳನ್ನು ಪರಿಹರಿಸಲು ಇರುವ ಮಾರ್ಗಗಳ ಕುರಿತಾಗಿಮೋದಿ ಅವರು ಕಳೆದ ಕೆಲವು ದಿನಗಳಿಂದ ಉದ್ಯಮಿಗಳು, ಆರ್ಥಿಕ ತಜ್ಞರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.</p>.<p>ಗುರುವಾರ ನೀತಿ ಆಯೋಗದ ಕಚೇರಿಯಲ್ಲಿ ಆರ್ಥಿಕ ತಜ್ಞರು, ಖಾಸಗಿ ಹೂಡಿಕೆದಾರರು, ವಾಣಿಜ್ಯೋದ್ಯಮಿ<br />ಗಳು ಮತ್ತು ಕೃಷಿ ಪರಿಣತರೊಂದಿಗೆ ಸಭೆ ನಡೆಸಿದರು. ದೇಶದ ಆರ್ಥಿಕತೆಯನ್ನು 2024ರೊಳಗೆ ₹ 350 ಲಕ್ಷ ಕೋಟಿಗೆ ತಲುಪಿಸುವ ನಿಟ್ಟಿನಲ್ಲಿ ಗಮನ ಕೇಂದ್ರೀಕರಿಸುವಂತೆ ಕರೆ ನೀಡಿದರು.</p>.<p class="Subhead"><strong>ನಿರ್ಮಲಾ ಗೈರು:</strong> ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಬಜೆಟ್ ಪೂರ್ವ ಸಭೆಯಲ್ಲಿ ಭಾಗವಹಿಸಿದ್ದರು. ಹೀಗಾಗಿ ಅವರ ಅನುಪಸ್ಥಿತಿಯಲ್ಲಿಯೇ ಮೋದಿ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>