ರಾಜ್ಯಗಳ ನಗರಾಭಿವೃದ್ಧಿ ಸಚಿವರ ಜೊತೆ ನಡೆದ ಸಂವಾದದ ಸಂದರ್ಭದಲ್ಲಿ ಪುರಿ ಅವರು ಈ ಆ್ಯಪ್ಗೆ ಚಾಲನೆ ನೀಡಿದರು ಎಂದು ಪ್ರಕಟಣೆ ತಿಳಿಸಿದೆ. ‘ಪಿಎಂ ಸ್ವನಿಧಿ’ ಯೋಜನೆಯ ಫಲಾನುಭವಿಗಳಿಗೆ ಪಿಎಂ ಆವಾಸ್ ಯೋಜನೆ (ನಗರ), ಆಯುಷ್ಮಾನ್ ಭಾರತ, ಉಜ್ವಲ ಯೋಜನೆ, ಜನಧನ ಯೋಜನೆ ಸೇರಿದಂತೆ ಇತರ ಯೋಜನೆಗಳ ಅಡಿ ನೆರವು ವಿಸ್ತರಿಸುವ ಉದ್ದೇಶದಿಂದಅವರ ಸಮಾಜೋಆರ್ಥಿಕ ಮಾಹಿತಿ ಸಂಗ್ರಹಿಸುವ ತೀರ್ಮಾನವನ್ನೂ ಈ ಸಂದರ್ಭದಲ್ಲಿ ಕೈಗೊಳ್ಳಲಾಗಿದೆ.