<p><strong>ನವದೆಹಲಿ:</strong> ‘ದ್ವಿದಳ ಧಾನ್ಯ ಮಿಷನ್’ ಮತ್ತು ‘ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆ’ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯಲ್ಲಿ ಚಾಲನೆ ನೀಡಲಿದ್ದಾರೆ.</p>.<p>ಧಾನ್ಯಗಳ ಉತ್ಪಾದನೆಯಲ್ಲಿ ದೇಶವು ಸ್ವಾವಲಂಬನೆ ಸಾಧಿಸುವಂತೆ ಮಾಡುವ ಗುರಿಯನ್ನು ಈ ಯೋಜನೆಗಳು ಹೊಂದಿವೆ.</p>.<p>ಈ ಎರಡು ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟವು ಈಗಾಗಲೇ ಅನುಮೋದನೆ ನೀಡಿದೆ. ಮುಂದಿನ ಹಿಂಗಾರು ಹಂಗಾಮಿನಿಂದ ಈ ಯೋಜನೆ ಅನುಷ್ಠಾನಗೊಳ್ಳಲಿದೆ. 2030-31ರವರೆಗೆ ಜಾರಿಯಲ್ಲಿ ಇರಲಿವೆ.</p>.<p>ಇದೇ ವೇಳೆ ಮೀನುಗಾರಿಕೆ, ಜಾನುವಾರು, ಆಹಾರ ಸಂಸ್ಕರಣೆ ಸೇರಿದಂತೆ ಇತರ ಕ್ಷೇತ್ರಗಳಿಗೆ ಸಂಬಂಧಿಸಿದ ₹3,681 ಕೋಟಿ ಮೌಲ್ಯದ ಯೋಜನೆಗಳನ್ನೂ ಮೋದಿ ಅವರು ಆರಂಭಿಸಲಿದ್ದಾರೆ. ರೈತರೊಂದಿಗೆ ಮೋದಿ ಅವರು ಮಾತುಕತೆ ನಡೆಸಲಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ‘ಗೋಧಿ ಮತ್ತು ಅಕ್ಕಿ ಉತ್ಪಾದನೆಯಲ್ಲಿ ದೇಶ ಸ್ವಾವಲಂಬನೆ ಸಾಧಿಸಿದೆ. ಧಾನ್ಯಗಳು, ಎಣ್ಣೆಕಾಳುಗಳು ವಿಷಯದಲ್ಲಿಯೂ ಸ್ವಾವಲಂಬನೆ ಸಾಧಿಸಬೇಕಿದೆ’ ಎಂದು ಹೇಳಿದ್ದಾರೆ.</p>.<p>ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆ ಸಾಧಿಸುವ ಯೋಜನೆಗೆ ಮೋದಿ ಅವರು ಚಾಲನೆ ನೀಡಲಿದ್ದಾರೆ. ಪ್ರಸ್ತುತ ದ್ವಿದಳ ಧಾನ್ಯಗಳ ಉತ್ಪಾದನೆ 252.38 ಲಕ್ಷ ಟನ್ ಇದೆ. 2030–31ರ ಬೆಳೆ ವರ್ಷದ ವೇಳೆಗೆ ಇದನ್ನು 350 ಲಕ್ಷ ಟನ್ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು. </p>.<p>ಈ ಯೋಜನೆಗೆ ₹11,440 ಕೋಟಿ ವೆಚ್ಚ ಮಾಡಲಾಗುವುದು. ಹೆಚ್ಚು ಇಳುವರಿ ನೀಡುವ ಮತ್ತು ರೋಗಗಳನ್ನು ತಾಳಿಕೊಂಡು ಹೆಚ್ಚಿನ ಉತ್ಪಾದನೆ ನೀಡುವ ವಿವಿಧ ಮಾದರಿಯ ಬೀಜಗಳನ್ನು ರೈತರಿಗೆ ನೀಡಲಾಗುವುದು ಎಂದರು.</p>.<p>‘ಪ್ರಧಾನ ಮಂತ್ರಿ ಧನ ಧಾನ್ಯ ಯೋಜನೆ’ಗೆ ₹24 ಸಾವಿರ ಕೋಟಿ ವ್ಯಯಿಸಲಾಗುವುದು. ಕಡಿಮೆ ಕೃಷಿ ಚಟುವಟಿಕೆ ಇರುವ ಆಯ್ದ 100 ಜಿಲ್ಲೆಗಳಲ್ಲಿ ಈ ಯೋಜನೆಯಡಿ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ದ್ವಿದಳ ಧಾನ್ಯ ಮಿಷನ್’ ಮತ್ತು ‘ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆ’ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯಲ್ಲಿ ಚಾಲನೆ ನೀಡಲಿದ್ದಾರೆ.</p>.<p>ಧಾನ್ಯಗಳ ಉತ್ಪಾದನೆಯಲ್ಲಿ ದೇಶವು ಸ್ವಾವಲಂಬನೆ ಸಾಧಿಸುವಂತೆ ಮಾಡುವ ಗುರಿಯನ್ನು ಈ ಯೋಜನೆಗಳು ಹೊಂದಿವೆ.</p>.<p>ಈ ಎರಡು ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟವು ಈಗಾಗಲೇ ಅನುಮೋದನೆ ನೀಡಿದೆ. ಮುಂದಿನ ಹಿಂಗಾರು ಹಂಗಾಮಿನಿಂದ ಈ ಯೋಜನೆ ಅನುಷ್ಠಾನಗೊಳ್ಳಲಿದೆ. 2030-31ರವರೆಗೆ ಜಾರಿಯಲ್ಲಿ ಇರಲಿವೆ.</p>.<p>ಇದೇ ವೇಳೆ ಮೀನುಗಾರಿಕೆ, ಜಾನುವಾರು, ಆಹಾರ ಸಂಸ್ಕರಣೆ ಸೇರಿದಂತೆ ಇತರ ಕ್ಷೇತ್ರಗಳಿಗೆ ಸಂಬಂಧಿಸಿದ ₹3,681 ಕೋಟಿ ಮೌಲ್ಯದ ಯೋಜನೆಗಳನ್ನೂ ಮೋದಿ ಅವರು ಆರಂಭಿಸಲಿದ್ದಾರೆ. ರೈತರೊಂದಿಗೆ ಮೋದಿ ಅವರು ಮಾತುಕತೆ ನಡೆಸಲಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ‘ಗೋಧಿ ಮತ್ತು ಅಕ್ಕಿ ಉತ್ಪಾದನೆಯಲ್ಲಿ ದೇಶ ಸ್ವಾವಲಂಬನೆ ಸಾಧಿಸಿದೆ. ಧಾನ್ಯಗಳು, ಎಣ್ಣೆಕಾಳುಗಳು ವಿಷಯದಲ್ಲಿಯೂ ಸ್ವಾವಲಂಬನೆ ಸಾಧಿಸಬೇಕಿದೆ’ ಎಂದು ಹೇಳಿದ್ದಾರೆ.</p>.<p>ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆ ಸಾಧಿಸುವ ಯೋಜನೆಗೆ ಮೋದಿ ಅವರು ಚಾಲನೆ ನೀಡಲಿದ್ದಾರೆ. ಪ್ರಸ್ತುತ ದ್ವಿದಳ ಧಾನ್ಯಗಳ ಉತ್ಪಾದನೆ 252.38 ಲಕ್ಷ ಟನ್ ಇದೆ. 2030–31ರ ಬೆಳೆ ವರ್ಷದ ವೇಳೆಗೆ ಇದನ್ನು 350 ಲಕ್ಷ ಟನ್ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು. </p>.<p>ಈ ಯೋಜನೆಗೆ ₹11,440 ಕೋಟಿ ವೆಚ್ಚ ಮಾಡಲಾಗುವುದು. ಹೆಚ್ಚು ಇಳುವರಿ ನೀಡುವ ಮತ್ತು ರೋಗಗಳನ್ನು ತಾಳಿಕೊಂಡು ಹೆಚ್ಚಿನ ಉತ್ಪಾದನೆ ನೀಡುವ ವಿವಿಧ ಮಾದರಿಯ ಬೀಜಗಳನ್ನು ರೈತರಿಗೆ ನೀಡಲಾಗುವುದು ಎಂದರು.</p>.<p>‘ಪ್ರಧಾನ ಮಂತ್ರಿ ಧನ ಧಾನ್ಯ ಯೋಜನೆ’ಗೆ ₹24 ಸಾವಿರ ಕೋಟಿ ವ್ಯಯಿಸಲಾಗುವುದು. ಕಡಿಮೆ ಕೃಷಿ ಚಟುವಟಿಕೆ ಇರುವ ಆಯ್ದ 100 ಜಿಲ್ಲೆಗಳಲ್ಲಿ ಈ ಯೋಜನೆಯಡಿ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>