<p><strong>ಬೆಂಗಳೂರು:</strong> ‘ಬೆಂಗಳೂರಿನ ಪ್ರಮುಖ ತಂತ್ರಜ್ಞಾನ ಪಾರ್ಕ್ಗಳಲ್ಲಿ ಡಿಜಿಟಲ್ ಶಾಖೆಗಳನ್ನು ತೆರೆಯಲು ಯೋಜಿಸಲಾಗಿದೆ’ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ನ (ಪಿಎನ್ಬಿ) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅಶೋಕ್ ಚಂದ್ರ ಹೇಳಿದ್ದಾರೆ.</p>.<p>ಇದರ ಜೊತೆಗೆ, ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನವೋದ್ಯಮಗಳಿಗೆ ಮೀಸಲಾದ ಶಾಖೆಯನ್ನು ಸ್ಥಾಪಿಸಲಾಗುವುದು. ಈ ಶಾಖೆಯು ಬ್ಯಾಂಕಿಂಗ್ ಸೇವೆಗಳು, ಸಾಲದ ನೆರವು ಮತ್ತು ಹಣಕಾಸಿಗೆ ಸಂಬಂಧಿಸಿದ ಸಲಹೆಗಳನ್ನು ನೀಡಲಿದೆ ಎಂದು ಅವರು ಹೇಳಿರುವುದಾಗಿ ಪ್ರಕಟಣೆ ತಿಳಿಸಿದೆ.</p>.<p>ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ಹೊಸ ಶಾಖೆಗಳನ್ನು ಆರಂಭಿಸುವ ಮೂಲಕ ಬ್ಯಾಂಕ್ನ ವಹಿವಾಟನ್ನು ವಿಸ್ತರಿಸಲಾಗುವುದು ಎಂದಿದ್ದಾರೆ.</p>.<p>ಸೇವಾ ಗುಣಮಟ್ಟಕ್ಕೆ ಬ್ಯಾಂಕ್ ಆದ್ಯತೆ ನೀಡುತ್ತಿದ್ದು, ಕ್ಯೂಆರ್ ಕೋಡ್ ಆಧಾರಿತ ಗ್ರಾಹಕ ಪ್ರತಿಕ್ರಿಯೆ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಗ್ರಾಹಕರು ಶಾಖೆಗಳಲ್ಲಿ ಸಿಗುವ ಸೇವೆಗಳ ಕುರಿತು ನೀಡುವ ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಪ್ರತಿಕ್ರಿಯೆಗಳನ್ನು ಬ್ಯಾಂಕ್ನ ನೌಕರರ ಕಾರ್ಯಕ್ಷಮತೆಯ ಮೌಲ್ಯಮಾಪನದ ಜೊತೆ ಬೆಸೆಯಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.</p>.<p>ಬ್ಯಾಂಕ್ನಲ್ಲಿ ಉಳಿತಾಯ ಖಾತೆ ಹೊಂದಿರುವ ಮಹಿಳೆಯರಿಗೆ ₹10 ಲಕ್ಷ ಮೌಲ್ಯದ ಕ್ಯಾನ್ಸರ್ ವಿಮಾ ರಕ್ಷಣೆ, ಸ್ವ-ಸಹಾಯ ಗುಂಪುಗಳು (ಎಸ್ಎಚ್ಜಿಗಳು) ಮತ್ತು ಮಹಿಳಾ ಉದ್ಯಮಿಗಳಿಗೆ ಆದ್ಯತೆಯ ಮೇರೆಗೆ ಸಾಲ ನೀಡುವುದು ಸೇರಿದಂತೆ ಮಹಿಳಾ ಗ್ರಾಹಕರಿಗೆ ಬ್ಯಾಂಕ್ ವಿವಿಧ ಯೋಜನೆಗಳನ್ನು ಆರಂಭಿಸಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬೆಂಗಳೂರಿನ ಪ್ರಮುಖ ತಂತ್ರಜ್ಞಾನ ಪಾರ್ಕ್ಗಳಲ್ಲಿ ಡಿಜಿಟಲ್ ಶಾಖೆಗಳನ್ನು ತೆರೆಯಲು ಯೋಜಿಸಲಾಗಿದೆ’ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ನ (ಪಿಎನ್ಬಿ) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅಶೋಕ್ ಚಂದ್ರ ಹೇಳಿದ್ದಾರೆ.</p>.<p>ಇದರ ಜೊತೆಗೆ, ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನವೋದ್ಯಮಗಳಿಗೆ ಮೀಸಲಾದ ಶಾಖೆಯನ್ನು ಸ್ಥಾಪಿಸಲಾಗುವುದು. ಈ ಶಾಖೆಯು ಬ್ಯಾಂಕಿಂಗ್ ಸೇವೆಗಳು, ಸಾಲದ ನೆರವು ಮತ್ತು ಹಣಕಾಸಿಗೆ ಸಂಬಂಧಿಸಿದ ಸಲಹೆಗಳನ್ನು ನೀಡಲಿದೆ ಎಂದು ಅವರು ಹೇಳಿರುವುದಾಗಿ ಪ್ರಕಟಣೆ ತಿಳಿಸಿದೆ.</p>.<p>ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ಹೊಸ ಶಾಖೆಗಳನ್ನು ಆರಂಭಿಸುವ ಮೂಲಕ ಬ್ಯಾಂಕ್ನ ವಹಿವಾಟನ್ನು ವಿಸ್ತರಿಸಲಾಗುವುದು ಎಂದಿದ್ದಾರೆ.</p>.<p>ಸೇವಾ ಗುಣಮಟ್ಟಕ್ಕೆ ಬ್ಯಾಂಕ್ ಆದ್ಯತೆ ನೀಡುತ್ತಿದ್ದು, ಕ್ಯೂಆರ್ ಕೋಡ್ ಆಧಾರಿತ ಗ್ರಾಹಕ ಪ್ರತಿಕ್ರಿಯೆ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಗ್ರಾಹಕರು ಶಾಖೆಗಳಲ್ಲಿ ಸಿಗುವ ಸೇವೆಗಳ ಕುರಿತು ನೀಡುವ ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಪ್ರತಿಕ್ರಿಯೆಗಳನ್ನು ಬ್ಯಾಂಕ್ನ ನೌಕರರ ಕಾರ್ಯಕ್ಷಮತೆಯ ಮೌಲ್ಯಮಾಪನದ ಜೊತೆ ಬೆಸೆಯಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.</p>.<p>ಬ್ಯಾಂಕ್ನಲ್ಲಿ ಉಳಿತಾಯ ಖಾತೆ ಹೊಂದಿರುವ ಮಹಿಳೆಯರಿಗೆ ₹10 ಲಕ್ಷ ಮೌಲ್ಯದ ಕ್ಯಾನ್ಸರ್ ವಿಮಾ ರಕ್ಷಣೆ, ಸ್ವ-ಸಹಾಯ ಗುಂಪುಗಳು (ಎಸ್ಎಚ್ಜಿಗಳು) ಮತ್ತು ಮಹಿಳಾ ಉದ್ಯಮಿಗಳಿಗೆ ಆದ್ಯತೆಯ ಮೇರೆಗೆ ಸಾಲ ನೀಡುವುದು ಸೇರಿದಂತೆ ಮಹಿಳಾ ಗ್ರಾಹಕರಿಗೆ ಬ್ಯಾಂಕ್ ವಿವಿಧ ಯೋಜನೆಗಳನ್ನು ಆರಂಭಿಸಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>