<p>ಬೆಂಗಳೂರು: ಡಿಸೆಂಬರ್ ತಿಂಗಳಲ್ಲಿ ದೇಶದ ಚಿಲ್ಲರೆ ಹಣದುಬ್ಬರ ದರದಲ್ಲಿ ಹೆಚ್ಚಿನ ಕುಸಿತ ಆಗಿರುವ ಸಾಧ್ಯತೆ ಇದೆ ಎಂಬುದನ್ನು ರಾಯಿಟರ್ಸ್ ಸುದ್ದಿಸಂಸ್ಥೆ ನಡೆಸಿದ ಸಮೀಕ್ಷೆಯು ಕಂಡುಕೊಂಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನಿಗದಿ ಮಾಡಿಕೊಂಡಿರುವ ಹಿತಕರ ಮಟ್ಟಕ್ಕೆ ಹಣದುಬ್ಬರ ತಗ್ಗಿರುವ ಸಾಧ್ಯತೆಯೂ ಇದೆ ಎಂದು ಅದು ಹೇಳಿದೆ.</p>.<p>ತರಕಾರಿ ಮತ್ತು ಆಹಾರ ಉತ್ಪನ್ನಗಳ ಬೆಲೆಯಲ್ಲಿ ಗಮನಾರ್ಹ ಇಳಿಕೆ ಆಗಿರುವುದರಿಂದಾಗಿ ಚಿಲ್ಲರೆ ಹಣದುಬ್ಬರ ಪ್ರಮಾಣ ಕಡಿಮೆ ಆಗಿರಬಹುದು ಎಂದು ಸಮೀಕ್ಷೆ ಅಂದಾಜಿಸಿದೆ.</p>.<p>ಜನವರಿ 5ರಿಂದ 7ರ ನಡುವಿನ ಅವಧಿಯಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದೆ. ಒಟ್ಟು 45 ಜನ ಅರ್ಥಶಾಸ್ತ್ರಜ್ಞರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಅವರು ಹೇಳಿರುವ ಪ್ರಕಾರ ಡಿಸೆಂಬರ್ ತಿಂಗಳಲ್ಲಿ ದೇಶದಲ್ಲಿ ಚಿಲ್ಲರೆ ಹಣದುಬ್ಬರ ದರವು ಶೇಕಡ 5.28ರಷ್ಟಕ್ಕೆ ತಗ್ಗಿದೆ. ಹಣದುಬ್ಬರ ಪ್ರಮಾಣವು ನವೆಂಬರ್ ತಿಂಗಳಲ್ಲಿ ಶೇಕಡ 6.93ರಷ್ಟು ಇತ್ತು.</p>.<p>‘ಆಹಾರ ಉತ್ಪನ್ನಗಳ ಹಣದುಬ್ಬರ, ಅದರಲ್ಲೂ ಮುಖ್ಯವಾಗಿ ತರಕಾರಿಗಳ ಹಣದುಬ್ಬರ ಪ್ರಮಾಣ, ತಗ್ಗುತ್ತಿದೆ. ಇದಕ್ಕೆ ಒಂದು ಪ್ರಮುಖ ಕಾರಣ ಪೂರೈಕೆ ವ್ಯವಸ್ಥೆಯಲ್ಲಿನ ಸಮಸ್ಯೆಗಳು ಪರಿಹಾರ ಕಾಣುತ್ತಿರುವುದು’ ಎಂದು ಎಕ್ಸಿಸ್ ಕ್ಯಾಪಿಟಲ್ನ ಮುಖ್ಯ ಅರ್ಥಶಾಸ್ತ್ರಜ್ಞ ಪೃಥ್ವಿರಾಜ್ ಶ್ರೀನಿವಾಸ್ ಹೇಳಿದ್ದಾರೆ. ಹಣದುಬ್ಬರದ ಪ್ರಮಾಣವನ್ನು ಶೇ 2ರಿಂದ ಶೇ 6ರ ನಡುವೆ ನಿಯಂತ್ರಿಸುವುದು ಆರ್ಬಿಐನ ಗುರಿ. ಆದರೆ, 2020ರ ಏಪ್ರಿಲ್ನಿಂದ ಈಚೆಗೆ ಹಣದುಬ್ಬರ ಪ್ರಮಾಣವು ಶೇ 6ಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇದೆ.</p>.<p>ಸಮೀಕ್ಷೆಯಲ್ಲಿ ಹೇಳಿದಂತೆಯೇ ಹಣದುಬ್ಬರ ಇಳಿಕೆ ಕಂಡರೆ, 2019ರ ನವೆಂಬರ್ ನಂತರದ ಅತ್ಯಂತ ಕಡಿಮೆ ಹಣದುಬ್ಬರ ಪ್ರಮಾಣ ಇದಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಡಿಸೆಂಬರ್ ತಿಂಗಳಲ್ಲಿ ದೇಶದ ಚಿಲ್ಲರೆ ಹಣದುಬ್ಬರ ದರದಲ್ಲಿ ಹೆಚ್ಚಿನ ಕುಸಿತ ಆಗಿರುವ ಸಾಧ್ಯತೆ ಇದೆ ಎಂಬುದನ್ನು ರಾಯಿಟರ್ಸ್ ಸುದ್ದಿಸಂಸ್ಥೆ ನಡೆಸಿದ ಸಮೀಕ್ಷೆಯು ಕಂಡುಕೊಂಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನಿಗದಿ ಮಾಡಿಕೊಂಡಿರುವ ಹಿತಕರ ಮಟ್ಟಕ್ಕೆ ಹಣದುಬ್ಬರ ತಗ್ಗಿರುವ ಸಾಧ್ಯತೆಯೂ ಇದೆ ಎಂದು ಅದು ಹೇಳಿದೆ.</p>.<p>ತರಕಾರಿ ಮತ್ತು ಆಹಾರ ಉತ್ಪನ್ನಗಳ ಬೆಲೆಯಲ್ಲಿ ಗಮನಾರ್ಹ ಇಳಿಕೆ ಆಗಿರುವುದರಿಂದಾಗಿ ಚಿಲ್ಲರೆ ಹಣದುಬ್ಬರ ಪ್ರಮಾಣ ಕಡಿಮೆ ಆಗಿರಬಹುದು ಎಂದು ಸಮೀಕ್ಷೆ ಅಂದಾಜಿಸಿದೆ.</p>.<p>ಜನವರಿ 5ರಿಂದ 7ರ ನಡುವಿನ ಅವಧಿಯಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದೆ. ಒಟ್ಟು 45 ಜನ ಅರ್ಥಶಾಸ್ತ್ರಜ್ಞರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಅವರು ಹೇಳಿರುವ ಪ್ರಕಾರ ಡಿಸೆಂಬರ್ ತಿಂಗಳಲ್ಲಿ ದೇಶದಲ್ಲಿ ಚಿಲ್ಲರೆ ಹಣದುಬ್ಬರ ದರವು ಶೇಕಡ 5.28ರಷ್ಟಕ್ಕೆ ತಗ್ಗಿದೆ. ಹಣದುಬ್ಬರ ಪ್ರಮಾಣವು ನವೆಂಬರ್ ತಿಂಗಳಲ್ಲಿ ಶೇಕಡ 6.93ರಷ್ಟು ಇತ್ತು.</p>.<p>‘ಆಹಾರ ಉತ್ಪನ್ನಗಳ ಹಣದುಬ್ಬರ, ಅದರಲ್ಲೂ ಮುಖ್ಯವಾಗಿ ತರಕಾರಿಗಳ ಹಣದುಬ್ಬರ ಪ್ರಮಾಣ, ತಗ್ಗುತ್ತಿದೆ. ಇದಕ್ಕೆ ಒಂದು ಪ್ರಮುಖ ಕಾರಣ ಪೂರೈಕೆ ವ್ಯವಸ್ಥೆಯಲ್ಲಿನ ಸಮಸ್ಯೆಗಳು ಪರಿಹಾರ ಕಾಣುತ್ತಿರುವುದು’ ಎಂದು ಎಕ್ಸಿಸ್ ಕ್ಯಾಪಿಟಲ್ನ ಮುಖ್ಯ ಅರ್ಥಶಾಸ್ತ್ರಜ್ಞ ಪೃಥ್ವಿರಾಜ್ ಶ್ರೀನಿವಾಸ್ ಹೇಳಿದ್ದಾರೆ. ಹಣದುಬ್ಬರದ ಪ್ರಮಾಣವನ್ನು ಶೇ 2ರಿಂದ ಶೇ 6ರ ನಡುವೆ ನಿಯಂತ್ರಿಸುವುದು ಆರ್ಬಿಐನ ಗುರಿ. ಆದರೆ, 2020ರ ಏಪ್ರಿಲ್ನಿಂದ ಈಚೆಗೆ ಹಣದುಬ್ಬರ ಪ್ರಮಾಣವು ಶೇ 6ಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇದೆ.</p>.<p>ಸಮೀಕ್ಷೆಯಲ್ಲಿ ಹೇಳಿದಂತೆಯೇ ಹಣದುಬ್ಬರ ಇಳಿಕೆ ಕಂಡರೆ, 2019ರ ನವೆಂಬರ್ ನಂತರದ ಅತ್ಯಂತ ಕಡಿಮೆ ಹಣದುಬ್ಬರ ಪ್ರಮಾಣ ಇದಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>