<p><strong>ಕೋಲ್ಕತ್ತ</strong>: ಇತರೆ ರಾಜ್ಯಗಳಿಗೆ ಆಲೂಗೆಡ್ಡೆ ಮಾರಾಟ ಮಾಡದಂತೆ ಪಶ್ಚಿಮ ಬಂಗಾಳ ಸರ್ಕಾರವು ನಿರ್ಬಂಧ ಹೇರಿದೆ. ಇದನ್ನು ವಾಪಸ್ ಪಡೆಯದಿದ್ದರೆ ಮಂಗಳವಾರದಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಬೆಳೆಗಾರರು ಎಚ್ಚರಿಕೆ ನೀಡಿದ್ದಾರೆ.</p>.<p>ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ ಆಲೂಗೆಡ್ಡೆ ಧಾರಣೆಯು ₹35ರಿಂದ ₹40 ಇದೆ. ಬೆಲೆ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರವು ನೆರೆಯ ರಾಜ್ಯಗಳಿಗೆ ಮಾರಾಟ ಮಾಡದಂತೆ ನಿರ್ಬಂಧ ವಿಧಿಸಿದೆ. </p>.<p>ಸರ್ಕಾರದ ಈ ನಿರ್ಣಯದಿಂದಾಗಿ ಅಂತರರಾಜ್ಯದ ಗಡಿ ಭಾಗಗಳಲ್ಲಿ ಪೊಲೀಸರು ಆಲೂಗೆಡ್ಡೆ ಸಾಗಣೆ ಮೇಲೆ ನಿಗಾ ಇಟ್ಟಿದ್ದಾರೆ. ಹಾಗಾಗಿ, ನೂರಾರು ಸರಕು ಸಾಗಣೆ ಲಾರಿಗಳು ಗಡಿ ಭಾಗದಲ್ಲಿ ಸಾಲುಗಟ್ಟಿ ನಿಂತಿವೆ. </p>.<p>ಬೆಲೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕೋಲ್ಕತ್ತದಲ್ಲಿ ಆಲೂಗೆಡ್ಡೆ ಸಗಟು ದರ ಕೆ.ಜಿಗೆ ₹27 ಇದೆ. ಹಾಗಿದ್ದರೂ ಚಿಲ್ಲರೆ ದರವು ₹35ರಿಂದ ₹40ಕ್ಕೆ ಮುಟ್ಟಿರುವುದು ಹೇಗೆ ಸಾಧ್ಯ ಎಂದು ಸಗಟು ವ್ಯಾಪಾರಿಗಳು ಪ್ರಶ್ನಿಸಿದ್ದಾರೆ.</p>.<p>‘ಸರ್ಕಾರದ ನಿರ್ಬಂಧದಿಂದಾಗಿ ವ್ಯಾಪಾರಕ್ಕೆ ಪೆಟ್ಟು ಬಿದ್ದಿದೆ. ಕೂಡಲೇ ಆದೇಶವನ್ನು ಹಿಂದಕ್ಕೆ ಪಡೆಯಬೇಕು’ ಎಂದು ಆಲೂಗೆಡ್ಡೆ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಲಾಲು ಮುಖರ್ಜಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಇತರೆ ರಾಜ್ಯಗಳಿಗೆ ಆಲೂಗೆಡ್ಡೆ ಮಾರಾಟ ಮಾಡದಂತೆ ಪಶ್ಚಿಮ ಬಂಗಾಳ ಸರ್ಕಾರವು ನಿರ್ಬಂಧ ಹೇರಿದೆ. ಇದನ್ನು ವಾಪಸ್ ಪಡೆಯದಿದ್ದರೆ ಮಂಗಳವಾರದಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಬೆಳೆಗಾರರು ಎಚ್ಚರಿಕೆ ನೀಡಿದ್ದಾರೆ.</p>.<p>ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ ಆಲೂಗೆಡ್ಡೆ ಧಾರಣೆಯು ₹35ರಿಂದ ₹40 ಇದೆ. ಬೆಲೆ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರವು ನೆರೆಯ ರಾಜ್ಯಗಳಿಗೆ ಮಾರಾಟ ಮಾಡದಂತೆ ನಿರ್ಬಂಧ ವಿಧಿಸಿದೆ. </p>.<p>ಸರ್ಕಾರದ ಈ ನಿರ್ಣಯದಿಂದಾಗಿ ಅಂತರರಾಜ್ಯದ ಗಡಿ ಭಾಗಗಳಲ್ಲಿ ಪೊಲೀಸರು ಆಲೂಗೆಡ್ಡೆ ಸಾಗಣೆ ಮೇಲೆ ನಿಗಾ ಇಟ್ಟಿದ್ದಾರೆ. ಹಾಗಾಗಿ, ನೂರಾರು ಸರಕು ಸಾಗಣೆ ಲಾರಿಗಳು ಗಡಿ ಭಾಗದಲ್ಲಿ ಸಾಲುಗಟ್ಟಿ ನಿಂತಿವೆ. </p>.<p>ಬೆಲೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕೋಲ್ಕತ್ತದಲ್ಲಿ ಆಲೂಗೆಡ್ಡೆ ಸಗಟು ದರ ಕೆ.ಜಿಗೆ ₹27 ಇದೆ. ಹಾಗಿದ್ದರೂ ಚಿಲ್ಲರೆ ದರವು ₹35ರಿಂದ ₹40ಕ್ಕೆ ಮುಟ್ಟಿರುವುದು ಹೇಗೆ ಸಾಧ್ಯ ಎಂದು ಸಗಟು ವ್ಯಾಪಾರಿಗಳು ಪ್ರಶ್ನಿಸಿದ್ದಾರೆ.</p>.<p>‘ಸರ್ಕಾರದ ನಿರ್ಬಂಧದಿಂದಾಗಿ ವ್ಯಾಪಾರಕ್ಕೆ ಪೆಟ್ಟು ಬಿದ್ದಿದೆ. ಕೂಡಲೇ ಆದೇಶವನ್ನು ಹಿಂದಕ್ಕೆ ಪಡೆಯಬೇಕು’ ಎಂದು ಆಲೂಗೆಡ್ಡೆ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಲಾಲು ಮುಖರ್ಜಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>