ಮಂಗಳೂರು: ಕರ್ಣಾಟಕ ಬ್ಯಾಂಕಿನ ಸ್ವತಂತ್ರ ನಿರ್ದೇಶಕ ಪ್ರದೀಪ್ ಕುಮಾರ್ ಪಂಜ ಅವರನ್ನು ಬ್ಯಾಂಕಿನ ಅರೆಕಾಲಿಕ ಅಧ್ಯಕ್ಷರನ್ನಾಗಿ ನವೆಂಬರ್ 14ರಿಂದ ಅನ್ವಯವಾಗುವಂತೆ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದ್ದು, ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ ಅನುಮೋದಿಸಿದೆ.
ಬ್ಯಾಂಕಿನ ಈಗಿನ ಅಧ್ಯಕ್ಷ ಪಿ. ಜಯರಾಮ ಭಟ್ ಅವರ ಅಧಿಕಾರ ಅವಧಿ ನವೆಂಬರ್ 13ಕ್ಕೆ ಮುಗಿಯಲಿದೆ. ಪ್ರದೀಪ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಪಂಜದವರಾಗಿದ್ದು, 2020ರ ಆಗಸ್ಟ್ 19ರಿಂದ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.