‘ಹವಾಮಾನ ಚೆನ್ನಾಗಿಲ್ಲದಿರುವುದು ಹಾಗೂ ನೆಟೆ ರೋಗದ ಕಾರಣದಿಂದಾಗಿ ಕಲಬುರಗಿ ಭಾಗದಲ್ಲಿ ಬೆಳೆ ಕಡಿಮೆ ಆಗುವ ಸಾಧ್ಯತೆ ಇದೆ. ತೊಗರಿ ಬೇಳೆಯನ್ನು ಆಮದು ಮಾಡಿಕೊಂಡು, ಉತ್ಪಾದನೆಯಲ್ಲಿ ಆಗುವ ಕೊರತೆಯನ್ನು ತುಂಬಿಕೊಳ್ಳುವ ಯೋಚನೆ ಇದೆ’ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.