ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ‘ಪ್ರವಾಸಿ ಭಾರತೀಯ ದಿವಸ್ ವಸ್ತುಪ್ರದರ್ಶನ’ವನ್ನು ಉದ್ಘಾಟಿಸಿದರು.
‘ಸ್ವಾತಂತ್ರ್ಯದ ಅಮೃತ ಮಹೋತ್ಸವ – ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅನಿವಾಸಿ ಭಾರತೀಯರ ಕೊಡುಗೆ’ ಎಂಬುದು ಈ ಡಿಜಿಟಲ್ ವಸ್ತುಪ್ರದರ್ಶನದ ಮುಖ್ಯ ಅಂಶ. ಈ ಬಗೆಯ ವಸ್ತುಪ್ರದರ್ಶನ ಆಯೋಜನೆ ಆಗಿರುವುದು ಇದೇ ಮೊದಲು ಎಂದು ಪ್ರಕಟಣೆ ತಿಳಿಸಿದೆ.
ಈ ವಸ್ತುಪ್ರದರ್ಶನದಲ್ಲಿ, ಅನಿವಾಸಿ ಭಾರತೀಯರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆಯನ್ನು ಬಹಳ ಸ್ಪಷ್ಟವಾಗಿ ತೋರಿಸಲಾಗಿದೆ ಎಂದು ಪ್ರಧಾನಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗಯಾನಾ ಅಧ್ಯಕ್ಷ ಡಾ. ಮೊಹಮ್ಮದ್ ಇರ್ಫಾನ್ ಅಲಿ, ಸುರುನಾಮ್ ಅಧ್ಯಕ್ಷ ಚಂದ್ರಿಕಾ ಪ್ರಸಾದ್ ಸಂತೋಖಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.