<p class="title">ನವದೆಹಲಿ/ಮುಂಬೈ: ಸರ್ಕಾರಿ ಸ್ವಾಮ್ಯದ ನಾಲ್ಕು ಬ್ಯಾಂಕ್ಗಳಲ್ಲಿ ಸರ್ಕಾರ ಹೊಂದಿರುವ ಷೇರುಗಳ ಪ್ರಮಾಣವನ್ನು ಕಡಿಮೆ ಮಾಡುವ ಪ್ರಕ್ರಿಯೆಗೆ ಈ ಹಣಕಾಸು ವರ್ಷ ಕೊನೆಗೊಳ್ಳುವ ಮೊದಲು ವೇಗ ನೀಡುವಂತೆ ಪ್ರಧಾನ ಮಂತ್ರಿಯವರ ಕಾರ್ಯಾಲಯವು ಅಧಿಕಾರಿಗಳಿಗೆ ಸೂಚನೆ ನೀಡಿದೆ.</p>.<p class="bodytext">ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ, ಯುಕೋ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್ಗಳಲ್ಲಿ ತನ್ನ ಪಾಲನ್ನು ಕಡಿಮೆ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬ್ಯಾಂಕುಗಳ ಖಾಸಗೀಕರಣ ಪ್ರಕ್ರಿಯೆಗೆ ವೇಗ ನೀಡುವಂತೆ ಸೂಚಿಸಿ ಪ್ರಧಾನ ಮಂತ್ರಿಯವರ ಕಾರ್ಯಾಲಯವು, ಕೇಂದ್ರ ಹಣಕಾಸು ಸಚಿವಾಲಯಕ್ಕೆ ಪತ್ರ ಬರೆದಿದೆ.</p>.<p class="bodytext">‘ಈ ಬ್ಯಾಂಕುಗಳ ಖಾಸಗೀಕರಣ ಪ್ರಕ್ರಿಯೆಯು ಶುರುವಾಗಿದೆ’ ಎಂದು ಮೂಲವೊಂದು ತಿಳಿಸಿದೆ. ಈ ವಿಚಾರವಾಗಿ ಬ್ಯಾಂಕುಗಳು ಹಾಗೂ ಪ್ರಧಾನ ಮಂತ್ರಿಯವರ ಕಾರ್ಯಾಲಯದಿಂದ ಪ್ರತಿಕ್ರಿಯೆ ಕೋರಿದಾಗ, ತಕ್ಷಣಕ್ಕೆ ಯಾವುದೇ ಉತ್ತರ ದೊರೆತಿಲ್ಲ. ಹಣಕಾಸು ಸಚಿವಾಲಯವು ಪ್ರತಿಕ್ರಿಯಿಸಲು ನಿರಾಕರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ನವದೆಹಲಿ/ಮುಂಬೈ: ಸರ್ಕಾರಿ ಸ್ವಾಮ್ಯದ ನಾಲ್ಕು ಬ್ಯಾಂಕ್ಗಳಲ್ಲಿ ಸರ್ಕಾರ ಹೊಂದಿರುವ ಷೇರುಗಳ ಪ್ರಮಾಣವನ್ನು ಕಡಿಮೆ ಮಾಡುವ ಪ್ರಕ್ರಿಯೆಗೆ ಈ ಹಣಕಾಸು ವರ್ಷ ಕೊನೆಗೊಳ್ಳುವ ಮೊದಲು ವೇಗ ನೀಡುವಂತೆ ಪ್ರಧಾನ ಮಂತ್ರಿಯವರ ಕಾರ್ಯಾಲಯವು ಅಧಿಕಾರಿಗಳಿಗೆ ಸೂಚನೆ ನೀಡಿದೆ.</p>.<p class="bodytext">ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ, ಯುಕೋ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್ಗಳಲ್ಲಿ ತನ್ನ ಪಾಲನ್ನು ಕಡಿಮೆ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬ್ಯಾಂಕುಗಳ ಖಾಸಗೀಕರಣ ಪ್ರಕ್ರಿಯೆಗೆ ವೇಗ ನೀಡುವಂತೆ ಸೂಚಿಸಿ ಪ್ರಧಾನ ಮಂತ್ರಿಯವರ ಕಾರ್ಯಾಲಯವು, ಕೇಂದ್ರ ಹಣಕಾಸು ಸಚಿವಾಲಯಕ್ಕೆ ಪತ್ರ ಬರೆದಿದೆ.</p>.<p class="bodytext">‘ಈ ಬ್ಯಾಂಕುಗಳ ಖಾಸಗೀಕರಣ ಪ್ರಕ್ರಿಯೆಯು ಶುರುವಾಗಿದೆ’ ಎಂದು ಮೂಲವೊಂದು ತಿಳಿಸಿದೆ. ಈ ವಿಚಾರವಾಗಿ ಬ್ಯಾಂಕುಗಳು ಹಾಗೂ ಪ್ರಧಾನ ಮಂತ್ರಿಯವರ ಕಾರ್ಯಾಲಯದಿಂದ ಪ್ರತಿಕ್ರಿಯೆ ಕೋರಿದಾಗ, ತಕ್ಷಣಕ್ಕೆ ಯಾವುದೇ ಉತ್ತರ ದೊರೆತಿಲ್ಲ. ಹಣಕಾಸು ಸಚಿವಾಲಯವು ಪ್ರತಿಕ್ರಿಯಿಸಲು ನಿರಾಕರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>