ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾರ್ಚ್‌ ಅಂತ್ಯದೊಳಗೆ ಕೇಂದ್ರೋದ್ಯಮಗಳ ಖಾಸಗೀಕರಣ’

Last Updated 11 ಆಗಸ್ಟ್ 2021, 11:10 IST
ಅಕ್ಷರ ಗಾತ್ರ

ನವದೆಹಲಿ: ‘ಕೋವಿಡ್‌–19 ಸಾಂಕ್ರಾಮಿಕದಿಂದಾಗಿ ಹಿನ್ನಡೆ ಅನುಭವಿಸಿದ್ದ ಕೇಂದ್ರೋದ್ಯಮಗಳ ಷೇರುವಿಕ್ರಯ ಪ್ರಕ್ರಿಯೆ ಮತ್ತೆ ಚುರುಕು ಪಡೆದುಕೊಂಡಿದ್ದು, ಮಾರ್ಚ್‌ ಅಂತ್ಯದೊಳಗಾಗಿ ಪೂರ್ಣಗೊಳ್ಳಲಿದೆ’ ಎಂದು ಹೂಡಿಕೆ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆಯ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್‌ ಕಾಂತ್‌ ಪಾಂಡೆ ಹೇಳಿದ್ದಾರೆ.

ಭಾರತೀಯ ವಾಣಿಜ್ಯೋದ್ಯಮ ಮಹಾಂಸಘವು (ಸಿಐಐ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಏರ್‌ ಇಂಡಿಯಾ, ಬಿಪಿಸಿಎಲ್‌, ಶಿಪ್ಪಿಂಗ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ, ಪವನ್‌ ಹನ್ಸ್‌, ಬಿಇಎಂಎಲ್‌ ಮತ್ತು ನೀಲಾಚಲ್‌ ಇಸ್ಪತ್‌ ನಿಗಮ ಲಿಮಿಟೆಡ್‌ನ ಖಾಸಗೀಕರಣವು ಈ ವರ್ಷವೇ ಪೂರ್ಣಗೊಳ್ಳದೆ. ಮಾಲೀಕತ್ವ ಮತ್ತು ನಿಯಂತ್ರಣದ ಬದಲಾವಣೆಯು ಷೇರು ಮಾರುಕಟ್ಟೆಯಲ್ಲಿ ಈ ಕಂಪನಿಗಳ ಮೌಲ್ಯವನ್ನು ಇನ್ನಷ್ಟು ಹೆಚ್ಚಿಸಲಿದೆ’ ಎಂದು ಅವರು ತಿಳಿಸಿದ್ದಾರೆ. ‘ಈ ಕಂಪನಿಗಳ ಖರೀದಿಗೆ ಹಲವರು ಆಸಕ್ತಿ ತೋರಿಸಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು 2021–22ರಲ್ಲಿ ಷೇರುವಿಕ್ರಯದ ಮೂಲಕ ಒಟ್ಟಾರೆ ₹ 1.75 ಲಕ್ಷ ಕೋಟಿ ಸಂಗ್ರಹಿಸುವ ಗುರಿಯನ್ನು ಇಟ್ಟುಕೊಂಡಿದೆ. ಇದರಲ್ಲಿ ಎಲ್‌ಐಸಿಯ ಐಪಿಒ ಬಹಳ ಮುಖ್ಯವಾಗಿದೆ.

ಇಲ್ಲಿಯವರೆಗೆ ಆಕ್ಸಿಸ್‌ ಬ್ಯಾಂಕ್‌, ಎನ್‌ಎಂಡಿಸಿ ಮತ್ತು ಹೌಸಿಂಗ್‌ ಆ್ಯಂಡ್‌ ಅರ್ಬನ್‌ ಡೆವಲಪ್‌ಮೆಂಟ್ ಕಾರ್ಪೊರೇಷನ್‌ನಲ್ಲಿನ ಷೇರುಗಳನ್ನು ಮಾರಾಟ ಮಾಡುವ ಮೂಲಕ ₹ 8,368 ಕೋಟಿ ಸಂಗ್ರಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT