<p><strong>ನವದೆಹಲಿ</strong>: ‘ಕೋವಿಡ್–19 ಸಾಂಕ್ರಾಮಿಕದಿಂದಾಗಿ ಹಿನ್ನಡೆ ಅನುಭವಿಸಿದ್ದ ಕೇಂದ್ರೋದ್ಯಮಗಳ ಷೇರುವಿಕ್ರಯ ಪ್ರಕ್ರಿಯೆ ಮತ್ತೆ ಚುರುಕು ಪಡೆದುಕೊಂಡಿದ್ದು, ಮಾರ್ಚ್ ಅಂತ್ಯದೊಳಗಾಗಿ ಪೂರ್ಣಗೊಳ್ಳಲಿದೆ’ ಎಂದು ಹೂಡಿಕೆ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆಯ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್ ಕಾಂತ್ ಪಾಂಡೆ ಹೇಳಿದ್ದಾರೆ.</p>.<p>ಭಾರತೀಯ ವಾಣಿಜ್ಯೋದ್ಯಮ ಮಹಾಂಸಘವು (ಸಿಐಐ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಏರ್ ಇಂಡಿಯಾ, ಬಿಪಿಸಿಎಲ್, ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಪವನ್ ಹನ್ಸ್, ಬಿಇಎಂಎಲ್ ಮತ್ತು ನೀಲಾಚಲ್ ಇಸ್ಪತ್ ನಿಗಮ ಲಿಮಿಟೆಡ್ನ ಖಾಸಗೀಕರಣವು ಈ ವರ್ಷವೇ ಪೂರ್ಣಗೊಳ್ಳದೆ. ಮಾಲೀಕತ್ವ ಮತ್ತು ನಿಯಂತ್ರಣದ ಬದಲಾವಣೆಯು ಷೇರು ಮಾರುಕಟ್ಟೆಯಲ್ಲಿ ಈ ಕಂಪನಿಗಳ ಮೌಲ್ಯವನ್ನು ಇನ್ನಷ್ಟು ಹೆಚ್ಚಿಸಲಿದೆ’ ಎಂದು ಅವರು ತಿಳಿಸಿದ್ದಾರೆ. ‘ಈ ಕಂಪನಿಗಳ ಖರೀದಿಗೆ ಹಲವರು ಆಸಕ್ತಿ ತೋರಿಸಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.</p>.<p>ಕೇಂದ್ರ ಸರ್ಕಾರವು 2021–22ರಲ್ಲಿ ಷೇರುವಿಕ್ರಯದ ಮೂಲಕ ಒಟ್ಟಾರೆ ₹ 1.75 ಲಕ್ಷ ಕೋಟಿ ಸಂಗ್ರಹಿಸುವ ಗುರಿಯನ್ನು ಇಟ್ಟುಕೊಂಡಿದೆ. ಇದರಲ್ಲಿ ಎಲ್ಐಸಿಯ ಐಪಿಒ ಬಹಳ ಮುಖ್ಯವಾಗಿದೆ.</p>.<p>ಇಲ್ಲಿಯವರೆಗೆ ಆಕ್ಸಿಸ್ ಬ್ಯಾಂಕ್, ಎನ್ಎಂಡಿಸಿ ಮತ್ತು ಹೌಸಿಂಗ್ ಆ್ಯಂಡ್ ಅರ್ಬನ್ ಡೆವಲಪ್ಮೆಂಟ್ ಕಾರ್ಪೊರೇಷನ್ನಲ್ಲಿನ ಷೇರುಗಳನ್ನು ಮಾರಾಟ ಮಾಡುವ ಮೂಲಕ ₹ 8,368 ಕೋಟಿ ಸಂಗ್ರಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಕೋವಿಡ್–19 ಸಾಂಕ್ರಾಮಿಕದಿಂದಾಗಿ ಹಿನ್ನಡೆ ಅನುಭವಿಸಿದ್ದ ಕೇಂದ್ರೋದ್ಯಮಗಳ ಷೇರುವಿಕ್ರಯ ಪ್ರಕ್ರಿಯೆ ಮತ್ತೆ ಚುರುಕು ಪಡೆದುಕೊಂಡಿದ್ದು, ಮಾರ್ಚ್ ಅಂತ್ಯದೊಳಗಾಗಿ ಪೂರ್ಣಗೊಳ್ಳಲಿದೆ’ ಎಂದು ಹೂಡಿಕೆ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆಯ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್ ಕಾಂತ್ ಪಾಂಡೆ ಹೇಳಿದ್ದಾರೆ.</p>.<p>ಭಾರತೀಯ ವಾಣಿಜ್ಯೋದ್ಯಮ ಮಹಾಂಸಘವು (ಸಿಐಐ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಏರ್ ಇಂಡಿಯಾ, ಬಿಪಿಸಿಎಲ್, ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಪವನ್ ಹನ್ಸ್, ಬಿಇಎಂಎಲ್ ಮತ್ತು ನೀಲಾಚಲ್ ಇಸ್ಪತ್ ನಿಗಮ ಲಿಮಿಟೆಡ್ನ ಖಾಸಗೀಕರಣವು ಈ ವರ್ಷವೇ ಪೂರ್ಣಗೊಳ್ಳದೆ. ಮಾಲೀಕತ್ವ ಮತ್ತು ನಿಯಂತ್ರಣದ ಬದಲಾವಣೆಯು ಷೇರು ಮಾರುಕಟ್ಟೆಯಲ್ಲಿ ಈ ಕಂಪನಿಗಳ ಮೌಲ್ಯವನ್ನು ಇನ್ನಷ್ಟು ಹೆಚ್ಚಿಸಲಿದೆ’ ಎಂದು ಅವರು ತಿಳಿಸಿದ್ದಾರೆ. ‘ಈ ಕಂಪನಿಗಳ ಖರೀದಿಗೆ ಹಲವರು ಆಸಕ್ತಿ ತೋರಿಸಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.</p>.<p>ಕೇಂದ್ರ ಸರ್ಕಾರವು 2021–22ರಲ್ಲಿ ಷೇರುವಿಕ್ರಯದ ಮೂಲಕ ಒಟ್ಟಾರೆ ₹ 1.75 ಲಕ್ಷ ಕೋಟಿ ಸಂಗ್ರಹಿಸುವ ಗುರಿಯನ್ನು ಇಟ್ಟುಕೊಂಡಿದೆ. ಇದರಲ್ಲಿ ಎಲ್ಐಸಿಯ ಐಪಿಒ ಬಹಳ ಮುಖ್ಯವಾಗಿದೆ.</p>.<p>ಇಲ್ಲಿಯವರೆಗೆ ಆಕ್ಸಿಸ್ ಬ್ಯಾಂಕ್, ಎನ್ಎಂಡಿಸಿ ಮತ್ತು ಹೌಸಿಂಗ್ ಆ್ಯಂಡ್ ಅರ್ಬನ್ ಡೆವಲಪ್ಮೆಂಟ್ ಕಾರ್ಪೊರೇಷನ್ನಲ್ಲಿನ ಷೇರುಗಳನ್ನು ಮಾರಾಟ ಮಾಡುವ ಮೂಲಕ ₹ 8,368 ಕೋಟಿ ಸಂಗ್ರಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>