<p><strong>ಮುಂಬೈ</strong>: ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಲಾಭ ಗಳಿಕೆಗಾಗಿ ದೇಶದ ಈಕ್ವಿಟಿ ಷೇರುಗಳ ಮಾರಾಟಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.</p>.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಭಾರತೀಯ ಮಾರುಕಟ್ಟೆ, ಭಾರತದ ಆರ್ಥಿಕತೆಯು ಹೂಡಿಕೆದಾರರಿಗೆ ಉತ್ತಮ ಆದಾಯ ನೀಡುತ್ತಿವೆ ಎಂದು ಹೇಳಿದರು.</p>.<p>ಕಳೆದ ವರ್ಷ ಅಕ್ಟೋಬರ್ನಿಂದ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹1.56 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಈ ಪೈಕಿ 2025ರ ಆರಂಭದಿಂದ ಇಲ್ಲಿಯವರೆಗೆ ಸುಮಾರು ₹1 ಲಕ್ಷ ಕೋಟಿ ಷೇರು ಮಾರಲಾಗಿದೆ. ಇದು ಷೇರು ಸೂಚ್ಯಂಕಗಳ ಇಳಿಕೆಗೆ ಮತ್ತು ಹೂಡಿಕೆದಾರರ ಸಂಪತ್ತು ಕರಗಲು ಕಾರಣವಾಗಿದೆ ಎಂದರು.</p>.<p>ಸರ್ಕಾರ ಮತ್ತು ಆರ್ಬಿಐ ದರ ನಿಯಂತ್ರಣ ಮಾಡುವ ಮೂಲಕ ಹಣದುಬ್ಬರ ಇಳಿಕೆಗೆ ಕ್ರಮ ಕೈಗೊಂಡಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಕೇಂದ್ರ ಹಣಕಾಸು ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಮಾತನಾಡಿ, ಜಾಗತಿಕ ಅನಿಶ್ಚಿತ ಸ್ಥಿತಿಯಿಂದಾಗಿ ಹೂಡಿಕೆದಾರರು ತಮ್ಮ ದೇಶದಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಈ ಬದಲಾವಣೆ ತಾತ್ಕಾಲಿಕ ಆಗಿರಬಹುದು. ಮುಂದಿನ ದಿನಗಳಲ್ಲಿ ಚೇತರಿಕೆ ಕಾಣಲಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಲಾಭ ಗಳಿಕೆಗಾಗಿ ದೇಶದ ಈಕ್ವಿಟಿ ಷೇರುಗಳ ಮಾರಾಟಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.</p>.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಭಾರತೀಯ ಮಾರುಕಟ್ಟೆ, ಭಾರತದ ಆರ್ಥಿಕತೆಯು ಹೂಡಿಕೆದಾರರಿಗೆ ಉತ್ತಮ ಆದಾಯ ನೀಡುತ್ತಿವೆ ಎಂದು ಹೇಳಿದರು.</p>.<p>ಕಳೆದ ವರ್ಷ ಅಕ್ಟೋಬರ್ನಿಂದ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹1.56 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಈ ಪೈಕಿ 2025ರ ಆರಂಭದಿಂದ ಇಲ್ಲಿಯವರೆಗೆ ಸುಮಾರು ₹1 ಲಕ್ಷ ಕೋಟಿ ಷೇರು ಮಾರಲಾಗಿದೆ. ಇದು ಷೇರು ಸೂಚ್ಯಂಕಗಳ ಇಳಿಕೆಗೆ ಮತ್ತು ಹೂಡಿಕೆದಾರರ ಸಂಪತ್ತು ಕರಗಲು ಕಾರಣವಾಗಿದೆ ಎಂದರು.</p>.<p>ಸರ್ಕಾರ ಮತ್ತು ಆರ್ಬಿಐ ದರ ನಿಯಂತ್ರಣ ಮಾಡುವ ಮೂಲಕ ಹಣದುಬ್ಬರ ಇಳಿಕೆಗೆ ಕ್ರಮ ಕೈಗೊಂಡಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಕೇಂದ್ರ ಹಣಕಾಸು ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಮಾತನಾಡಿ, ಜಾಗತಿಕ ಅನಿಶ್ಚಿತ ಸ್ಥಿತಿಯಿಂದಾಗಿ ಹೂಡಿಕೆದಾರರು ತಮ್ಮ ದೇಶದಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಈ ಬದಲಾವಣೆ ತಾತ್ಕಾಲಿಕ ಆಗಿರಬಹುದು. ಮುಂದಿನ ದಿನಗಳಲ್ಲಿ ಚೇತರಿಕೆ ಕಾಣಲಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>