<p><strong>ನವದೆಹಲಿ</strong>: ತುರ್ತು ಸಾಲ ಖಾತರಿ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳು (ಪಿಎಸ್ಬಿ) ಕಿರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್ಎಂಇ) ₹16,032 ಕೋಟಿ ಸಾಲ ವಿತರಿಸಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.</p>.<p>‘ಕೋವಿಡ್–19’ನಿಂದಸಂಕಷ್ಟಕ್ಕೆ ಸಿಲುಕಿರುವ ಉದ್ಯಮಗಳಿಗೆ ನೆರವಾಗಲುಶೇ 100ರಷ್ಟು ಸಾಲ ಖಾತರಿ ಯೋಜನೆಯಡಿ ಬ್ಯಾಂಕ್ಗಳು ಒಟ್ಟಾರೆಯಾಗಿ ₹ 32,050 ಕೋಟಿ ಮಂಜೂರು ಮಾಡಿವೆ.</p>.<p>ಆತ್ನನಿರ್ಭರ ಭಾರತ ಅಭಿಯಾನ ಪ್ಯಾಕೇಜ್ನಲ್ಲಿ ₹ 20.97 ಲಕ್ಷ ಕೋಟಿ ಮೊತ್ತದ ಆರ್ಥಿಕ ಕೊಡುಗೆಯನ್ನು ಸರ್ಕಾರ ಘೋಷಿಸಿದೆ. ಇದರ ಭಾಗವಾಗಿ ಬ್ಯಾಂಕ್ಗಳು ಸಾಲ ವಿತರಣೆ ಮಾಡಲು ಆರಂಭಿಸಿವೆ.</p>.<p>ಹಣಕಾಸು ಸಂಸ್ಥೆಗಳ ಸಾಲ ನೀಡಿಕೆ ಸಾಮರ್ಥ್ಯ ವೃದ್ಧಿಸಲು ಹಾಗೂ ಎಂಎಸ್ಎಂಇಗಳ ಚೇತರಿಕೆಗೆ ಅಗತ್ಯ ನೆರವು ನೀಡಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.</p>.<p><strong>ಎಸ್ಬಿಐ</strong></p>.<p>ಈ ಯೋಜನೆಯಡಿ 1.5 ಲಕ್ಷ ಎಂಎಸ್ಎಂಇಗಳಿಗೆ ₹ 15 ಸಾವಿರ ಕೋಟಿ ಮಂಜೂರು ಮಾಡಿದ್ದು, ಇದುವರೆಗೆ ₹ 8,700 ಕೋಟಿ ವಿತರಿಸಲಾಗಿದೆ ಎಂದುಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಎಂಎಸ್ಎಂಇಗಳಿಗೆ ತುರ್ತು ಸಾಲ ಸೌಲಭ್ಯವಲ್ಲದೆ, ದುಡಿಯುವ ಬಂಡವಾಳದ ಮಿತಿಯ ಮರು ಪರಿಶೀಲನೆ ಹಾಗೂ ಮುಂಗಡದಲ್ಲಿ ಮರುಹೊಂದಾಣಿಕೆ ಸೌಲಭ್ಯಗಳನ್ನೂ ಪರಿಗಣಿಸಲಾಗುತ್ತಿದೆ ಎಂದು ತಿಳಿಸಿದೆ.</p>.<p>ಎಂಎಸ್ಎಂಇಗಳನ್ನು ತಲುಪಲು ಬ್ಯಾಂಕ್ನ ವೃತ್ತ ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಲಭ್ಯವಿರುವ ಹಣಕಾಸು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತುರ್ತು ಸಾಲ ಖಾತರಿ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳು (ಪಿಎಸ್ಬಿ) ಕಿರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್ಎಂಇ) ₹16,032 ಕೋಟಿ ಸಾಲ ವಿತರಿಸಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.</p>.<p>‘ಕೋವಿಡ್–19’ನಿಂದಸಂಕಷ್ಟಕ್ಕೆ ಸಿಲುಕಿರುವ ಉದ್ಯಮಗಳಿಗೆ ನೆರವಾಗಲುಶೇ 100ರಷ್ಟು ಸಾಲ ಖಾತರಿ ಯೋಜನೆಯಡಿ ಬ್ಯಾಂಕ್ಗಳು ಒಟ್ಟಾರೆಯಾಗಿ ₹ 32,050 ಕೋಟಿ ಮಂಜೂರು ಮಾಡಿವೆ.</p>.<p>ಆತ್ನನಿರ್ಭರ ಭಾರತ ಅಭಿಯಾನ ಪ್ಯಾಕೇಜ್ನಲ್ಲಿ ₹ 20.97 ಲಕ್ಷ ಕೋಟಿ ಮೊತ್ತದ ಆರ್ಥಿಕ ಕೊಡುಗೆಯನ್ನು ಸರ್ಕಾರ ಘೋಷಿಸಿದೆ. ಇದರ ಭಾಗವಾಗಿ ಬ್ಯಾಂಕ್ಗಳು ಸಾಲ ವಿತರಣೆ ಮಾಡಲು ಆರಂಭಿಸಿವೆ.</p>.<p>ಹಣಕಾಸು ಸಂಸ್ಥೆಗಳ ಸಾಲ ನೀಡಿಕೆ ಸಾಮರ್ಥ್ಯ ವೃದ್ಧಿಸಲು ಹಾಗೂ ಎಂಎಸ್ಎಂಇಗಳ ಚೇತರಿಕೆಗೆ ಅಗತ್ಯ ನೆರವು ನೀಡಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.</p>.<p><strong>ಎಸ್ಬಿಐ</strong></p>.<p>ಈ ಯೋಜನೆಯಡಿ 1.5 ಲಕ್ಷ ಎಂಎಸ್ಎಂಇಗಳಿಗೆ ₹ 15 ಸಾವಿರ ಕೋಟಿ ಮಂಜೂರು ಮಾಡಿದ್ದು, ಇದುವರೆಗೆ ₹ 8,700 ಕೋಟಿ ವಿತರಿಸಲಾಗಿದೆ ಎಂದುಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಎಂಎಸ್ಎಂಇಗಳಿಗೆ ತುರ್ತು ಸಾಲ ಸೌಲಭ್ಯವಲ್ಲದೆ, ದುಡಿಯುವ ಬಂಡವಾಳದ ಮಿತಿಯ ಮರು ಪರಿಶೀಲನೆ ಹಾಗೂ ಮುಂಗಡದಲ್ಲಿ ಮರುಹೊಂದಾಣಿಕೆ ಸೌಲಭ್ಯಗಳನ್ನೂ ಪರಿಗಣಿಸಲಾಗುತ್ತಿದೆ ಎಂದು ತಿಳಿಸಿದೆ.</p>.<p>ಎಂಎಸ್ಎಂಇಗಳನ್ನು ತಲುಪಲು ಬ್ಯಾಂಕ್ನ ವೃತ್ತ ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಲಭ್ಯವಿರುವ ಹಣಕಾಸು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>