<p><strong>ನವದೆಹಲಿ:</strong> ದೇಶದಲ್ಲಿ ಬ್ಯಾಂಕ್ನ ವಹಿವಾಟು ವಿಸ್ತರಣೆಯ ಭಾಗವಾಗಿ ಸರ್ಕಾರಿ ಸ್ವಾಮ್ಯದ ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೊಸದಾಗಿ 100 ಶಾಖೆಗಳು ಮತ್ತು 100 ಎಟಿಎಂಗಳನ್ನು ತೆರೆಯಲು ನಿರ್ಧರಿಸಿದೆ.</p>.<p>ಹೊಸ ಶಾಖೆ ಆರಂಭಿಸುವುದರಿಂದ ಬ್ಯಾಂಕ್ನ ಒಟ್ಟು ಶಾಖೆಗಳ ಸಂಖ್ಯೆ 1,665ಕ್ಕೆ ಮುಟ್ಟಲಿದೆ. ಒಟ್ಟು ಎಟಿಎಂ ಸಂಖ್ಯೆ 1,135ಕ್ಕೆ ತಲುಪಲಿದೆ ಎಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಸ್ವರೂಪ್ ಕುಮಾರ್ ಸಹಾ ತಿಳಿಸಿದ್ದಾರೆ.</p>.<p>ಗ್ರಾಮೀಣ ಆರ್ಥಿಕತೆಯ ಪರಿವರ್ತನೆಯಲ್ಲಿ ವ್ಯಾಪಾರ ಕರೆಸ್ಪಾಂಡೆಂಟ್ಗಳ ಪಾತ್ರ ಹೆಚ್ಚಿದೆ. ಈ ಸೇವೆಯ ವಿಸ್ತರಣೆಗೆ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ.</p>.<p>₹2 ಸಾವಿರ ಕೋಟಿ ಸಂಗ್ರಹ: ವಹಿವಾಟು ಬೆಳವಣಿಗೆಗಾಗಿ ಅರ್ಹ ಸಾಂಸ್ಥಿಕ ಹೂಡಿಕೆದಾರರ (ಕ್ಯೂಐಪಿ) ಮೂಲಕ ಪ್ರಸಕ್ತ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ₹2 ಸಾವಿರ ಕೋಟಿ ಸಂಗ್ರಹಿಸಲು ಬ್ಯಾಂಕ್ ತೀರ್ಮಾನಿಸಿದೆ. ಇದಕ್ಕೆ ಆಡಳಿತ ಮಂಡಳಿಯು ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.</p>.<p>ಮಾರುಕಟ್ಟೆಯ ಸ್ಥಿತಿ ಆಧರಿಸಿ ಮೂರನೇ ತ್ರೈಮಾಸಿಕದ ವೇಳೆಗೆ ಬಂಡವಾಳ ಸಂಗ್ರಹಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.</p>.<p>ಮಾರ್ಚ್ ಅಂತ್ಯಕ್ಕೆ ಬ್ಯಾಂಕ್ಗಳ ಸುರಕ್ಷತೆಯ ಮಾನದಂಡವಾದ ಬಂಡವಾಳ ಪರ್ಯಾಪ್ತತಾ ಅನುಪಾತ (ಸಿಆರ್ಎಆರ್) ಶೇ 17.10ರಷ್ಟಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಬ್ಯಾಂಕ್ನ ವಹಿವಾಟು ವಿಸ್ತರಣೆಯ ಭಾಗವಾಗಿ ಸರ್ಕಾರಿ ಸ್ವಾಮ್ಯದ ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೊಸದಾಗಿ 100 ಶಾಖೆಗಳು ಮತ್ತು 100 ಎಟಿಎಂಗಳನ್ನು ತೆರೆಯಲು ನಿರ್ಧರಿಸಿದೆ.</p>.<p>ಹೊಸ ಶಾಖೆ ಆರಂಭಿಸುವುದರಿಂದ ಬ್ಯಾಂಕ್ನ ಒಟ್ಟು ಶಾಖೆಗಳ ಸಂಖ್ಯೆ 1,665ಕ್ಕೆ ಮುಟ್ಟಲಿದೆ. ಒಟ್ಟು ಎಟಿಎಂ ಸಂಖ್ಯೆ 1,135ಕ್ಕೆ ತಲುಪಲಿದೆ ಎಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಸ್ವರೂಪ್ ಕುಮಾರ್ ಸಹಾ ತಿಳಿಸಿದ್ದಾರೆ.</p>.<p>ಗ್ರಾಮೀಣ ಆರ್ಥಿಕತೆಯ ಪರಿವರ್ತನೆಯಲ್ಲಿ ವ್ಯಾಪಾರ ಕರೆಸ್ಪಾಂಡೆಂಟ್ಗಳ ಪಾತ್ರ ಹೆಚ್ಚಿದೆ. ಈ ಸೇವೆಯ ವಿಸ್ತರಣೆಗೆ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ.</p>.<p>₹2 ಸಾವಿರ ಕೋಟಿ ಸಂಗ್ರಹ: ವಹಿವಾಟು ಬೆಳವಣಿಗೆಗಾಗಿ ಅರ್ಹ ಸಾಂಸ್ಥಿಕ ಹೂಡಿಕೆದಾರರ (ಕ್ಯೂಐಪಿ) ಮೂಲಕ ಪ್ರಸಕ್ತ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ₹2 ಸಾವಿರ ಕೋಟಿ ಸಂಗ್ರಹಿಸಲು ಬ್ಯಾಂಕ್ ತೀರ್ಮಾನಿಸಿದೆ. ಇದಕ್ಕೆ ಆಡಳಿತ ಮಂಡಳಿಯು ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.</p>.<p>ಮಾರುಕಟ್ಟೆಯ ಸ್ಥಿತಿ ಆಧರಿಸಿ ಮೂರನೇ ತ್ರೈಮಾಸಿಕದ ವೇಳೆಗೆ ಬಂಡವಾಳ ಸಂಗ್ರಹಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.</p>.<p>ಮಾರ್ಚ್ ಅಂತ್ಯಕ್ಕೆ ಬ್ಯಾಂಕ್ಗಳ ಸುರಕ್ಷತೆಯ ಮಾನದಂಡವಾದ ಬಂಡವಾಳ ಪರ್ಯಾಪ್ತತಾ ಅನುಪಾತ (ಸಿಆರ್ಎಆರ್) ಶೇ 17.10ರಷ್ಟಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>