<p><strong>ನವದೆಹಲಿ</strong>: ಸರ್ಕಾರಿ ಸ್ವಾಮ್ಯದ ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ ಅರ್ಹ ಸಾಂಸ್ಥಿಕ ಹೂಡಿಕೆ (ಕ್ಯೂಐಪಿ) ಮೂಲಕ ₹2,000 ಕೋಟಿ ಸಂಗ್ರಹಕ್ಕೆ ಮುಂದಾಗಿದೆ. </p>.<p>‘ಈಗಾಗಲೇ, ಬಂಡವಾಳ ಸಂಗ್ರಹಿಸಲು ಆಡಳಿತ ಮಂಡಳಿಯು ಒಪ್ಪಿಗೆ ನೀಡಿದೆ. ಮಾರುಕಟ್ಟೆಯ ಸ್ಥಿತಿಗತಿ ಆಧರಿಸಿ ಎರಡನೇ ಅಥವಾ ಮೂರನೇ ತ್ರೈಮಾಸಿಕದೊಳಗೆ ಈ ಮೊತ್ತವನ್ನು ಸಂಗ್ರಹಿಸಲಾಗುವುದು’ ಎಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸ್ವರೂಪ್ ಕುಮಾರ್ ಸಹಾ ತಿಳಿಸಿದ್ದಾರೆ.</p>.<p>ಈ ಮೊತ್ತವು ಬ್ಯಾಂಕ್ ಅನಿರೀಕ್ಷಿತ ನಷ್ಟಕ್ಕೆ ತುತ್ತಾದಾಗ ಎದುರಿಸಲು ಹೊಂದಿರುವ ಸಮರ್ಪಕ ಬಂಡವಾಳ ಅನುಪಾತಕ್ಕೆ (ಸಿಎಆರ್) ನೆರವಾಗಲಿದೆ. ಮಾರ್ಚ್ ಅಂತ್ಯಕ್ಕೆ ಬ್ಯಾಂಕ್ನ ಸಿಎಆರ್ ಪ್ರಮಾಣವು ಶೇ 17.10ರಷ್ಟಿದೆ ಎಂದು ತಿಳಿಸಿದ್ದಾರೆ. </p>.<p>ಪ್ರಸಕ್ತ ಹಣಕಾಸು ವರ್ಷದಲ್ಲಿ ಬ್ಯಾಂಕ್ನ ಸಾಲ ನೀಡಿಕೆಯು ಶೇ 12ರಿಂದ 14ರಷ್ಟು ಏರಿಕೆಯಾಗಲಿದೆ. ರಿಟೇಲ್, ಕೃಷಿ, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್ಎಂಇ) ಸಾಲ ನೀಡಿಕೆಯಲ್ಲಿ ಶೇ 15ರಿಂದ ಶೇ 18ರಷ್ಟು ಹೆಚ್ಚಳವಾಗಲಿದೆ ಎಂದು ಹೇಳಿದ್ದಾರೆ.</p>.<p>ಕೇಂದ್ರ ಸರ್ಕಾರವು ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ನ ಶೇ 98.25ರಷ್ಟು ಷೇರುಗಳ ಮೇಲೆ ಒಡೆತನ ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸರ್ಕಾರಿ ಸ್ವಾಮ್ಯದ ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ ಅರ್ಹ ಸಾಂಸ್ಥಿಕ ಹೂಡಿಕೆ (ಕ್ಯೂಐಪಿ) ಮೂಲಕ ₹2,000 ಕೋಟಿ ಸಂಗ್ರಹಕ್ಕೆ ಮುಂದಾಗಿದೆ. </p>.<p>‘ಈಗಾಗಲೇ, ಬಂಡವಾಳ ಸಂಗ್ರಹಿಸಲು ಆಡಳಿತ ಮಂಡಳಿಯು ಒಪ್ಪಿಗೆ ನೀಡಿದೆ. ಮಾರುಕಟ್ಟೆಯ ಸ್ಥಿತಿಗತಿ ಆಧರಿಸಿ ಎರಡನೇ ಅಥವಾ ಮೂರನೇ ತ್ರೈಮಾಸಿಕದೊಳಗೆ ಈ ಮೊತ್ತವನ್ನು ಸಂಗ್ರಹಿಸಲಾಗುವುದು’ ಎಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸ್ವರೂಪ್ ಕುಮಾರ್ ಸಹಾ ತಿಳಿಸಿದ್ದಾರೆ.</p>.<p>ಈ ಮೊತ್ತವು ಬ್ಯಾಂಕ್ ಅನಿರೀಕ್ಷಿತ ನಷ್ಟಕ್ಕೆ ತುತ್ತಾದಾಗ ಎದುರಿಸಲು ಹೊಂದಿರುವ ಸಮರ್ಪಕ ಬಂಡವಾಳ ಅನುಪಾತಕ್ಕೆ (ಸಿಎಆರ್) ನೆರವಾಗಲಿದೆ. ಮಾರ್ಚ್ ಅಂತ್ಯಕ್ಕೆ ಬ್ಯಾಂಕ್ನ ಸಿಎಆರ್ ಪ್ರಮಾಣವು ಶೇ 17.10ರಷ್ಟಿದೆ ಎಂದು ತಿಳಿಸಿದ್ದಾರೆ. </p>.<p>ಪ್ರಸಕ್ತ ಹಣಕಾಸು ವರ್ಷದಲ್ಲಿ ಬ್ಯಾಂಕ್ನ ಸಾಲ ನೀಡಿಕೆಯು ಶೇ 12ರಿಂದ 14ರಷ್ಟು ಏರಿಕೆಯಾಗಲಿದೆ. ರಿಟೇಲ್, ಕೃಷಿ, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್ಎಂಇ) ಸಾಲ ನೀಡಿಕೆಯಲ್ಲಿ ಶೇ 15ರಿಂದ ಶೇ 18ರಷ್ಟು ಹೆಚ್ಚಳವಾಗಲಿದೆ ಎಂದು ಹೇಳಿದ್ದಾರೆ.</p>.<p>ಕೇಂದ್ರ ಸರ್ಕಾರವು ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ನ ಶೇ 98.25ರಷ್ಟು ಷೇರುಗಳ ಮೇಲೆ ಒಡೆತನ ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>