ಕೃಷ್ಣಕುಮಾರ್ ನಿಧನಕ್ಕೆ ರತನ್ ಟಾಟಾ ಸಂತಾಪ ಸೂಚಿಸಿದ್ದಾರೆ. ನನ್ನ ಸ್ನೇಹಿತ, ಸಹೋದ್ಯೋಗಿ ಅವರ ಅಗಲಿಕೆಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಉದ್ಯಮ ಮತ್ತು ವೈಯಕ್ತಿಕವಾಗಿ ಅವರ ಜೊತೆಗಿನ ಒಡನಾಟವನ್ನು ಸದಾ ಸ್ಮರಿಸುತ್ತೇನೆ. ಅವರು ಟಾಟಾ ಸಮೂಹ ಮತ್ತು ಟಾಟಾ ಟ್ರಸ್ಟ್ನ ನಿಜವಾದ ದಿಗ್ಗಜರಾಗಿದ್ದು, ನಮಗೆಲ್ಲರಿಗೂ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.