ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ್ಡಿ ದರ ಕಡಿತ: ತ್ವರಿತ ವರ್ಗಾವಣೆ -ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ನಿರೀಕ್ಷೆ

Last Updated 8 ಜುಲೈ 2019, 19:45 IST
ಅಕ್ಷರ ಗಾತ್ರ

ನವದೆಹಲಿ: ಅಲ್ಪಾವಧಿ ಬಡ್ಡಿ ದರ ಕಡಿತದ ಪ್ರಯೋಜನವನ್ನು ವಾಣಿಜ್ಯ ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ತ್ವರಿತವಾಗಿ ವರ್ಗಾವಣೆ ಮಾಡಲಿವೆ ಎಂಬುದು ತಮ್ಮ ನಿರೀಕ್ಷೆಯಾಗಿದೆ ಭಾರತೀಯ ರಿಸರ್ವ್‌ ಬ್ಯಾಂಕ್‌ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್‌ಬಿಐ, ಬ್ಯಾಂಕ್‌ಗಳಿಗೆ ನೀಡುವ ಸಾಲದ ಬಡ್ಡಿ ದರವನ್ನು (ರೆಪೊ) ಇದುವರೆಗೆ ಮೂರು ಬಾರಿ ಕಡಿತ ಮಾಡಿದೆ.

ಕಡಿತದ ಒಟ್ಟಾರೆ ಪ್ರಮಾಣವು ಶೇ 0.75ರಷ್ಟಿದೆ. ಇದರಿಂದ ಗೃಹ, ವಾಹನ ಖರೀದಿ ಮತ್ತು ವೈಯಕ್ತಿಕ ಸಾಲಗಳು ಅಗ್ಗವಾಗಬೇಕಿತ್ತು. ಆದರೆ, ಬ್ಯಾಂಕ್‌ಗಳು ಮಾತ್ರ ಇದರ ಪೂರ್ಣ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸಲು ಹಿಂದೇಟು ಹಾಕುತ್ತಿವೆ.

ಜೂನ್‌ ತಿಂಗಳ ಮುಂಚಿನ ಶೇ 0.50ರಷ್ಟು ದರ ಕಡಿತದ ಶೇ 0.21ರಷ್ಟನ್ನು ಮಾತ್ರ ಗ್ರಾಹಕರಿಗೆ ವರ್ಗಾಯಿಸಿವೆ.

‘ಬ್ಯಾಂಕ್‌ಗಳು ಈ ಹಿಂದೆ ದರ ಕಡಿತದ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸಲು 6 ತಿಂಗಳ ಕಾಲಾವಕಾಶ ತೆಗೆದುಕೊಳ್ಳುತ್ತಿದ್ದವು. ಈಗ ಅದಕ್ಕಿಂತ ಕಡಿಮೆ ಅವಧಿ ಅಂದರೆ 2 ರಿಂದ 3 ತಿಂಗಳು ತೆಗೆದುಕೊಳ್ಳುತ್ತಿವೆ. ಇದೊಂದು ಸಕಾರಾತ್ಮಕ ಬೆಳವಣಿಗೆಯಾಗಿದೆ’ ಎಂದು ದಾಸ್‌ ಹೇಳಿದ್ದಾರೆ.

ಬಜೆಟ್‌ ಮಂಡನೆ ನಂತರ ಸಾಂಪ್ರದಾಯಿಕವಾಗಿ ನಡೆಯುವ ಹಣಕಾಸು ಸಚಿವರ ಜತೆಗಿನ ಭೇಟಿ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT