<p><strong>ಮುಂಬೈ:</strong> ಕೋವಿಡ್-19 ಭೀತಿಯಿಂದ ಕುಸಿಯುತ್ತಿರುವ ಆರ್ಥಿಕತೆಗೆ ಆಸರೆ ಒದಗಿಸಲು ಭಾರತೀಯರಿಸರ್ವ್ ಬ್ಯಾಂಕ್ ಬುಧವಾರ ಹಲವು ಕ್ರಮಗಳನ್ನು ಪ್ರಕಟಿಸಿದೆ.</p>.<p>ರಫ್ತು ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಉದ್ಯಮಿಗಳಿಗೆ ವಿದೇಶಿ ಗ್ರಾಹಕರಿಗೆ ಸರಬರಾಜು ಮಾಡಿದ ಉತ್ಪನ್ನಗಳಿಗೆ ಹಣ ಪಡೆದುಕೊಳ್ಳಲು ಇದ್ದ ಸಮಯದ ಮಿತಿಯನ್ನು 9 ತಿಂಗಳಿನಿಂದ 15 ತಿಂಗಳಿಗೆವಿಸ್ತರಿಸಲಾಗಿದೆ.</p>.<p>ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಂಗಡ ಸ್ವೀಕಾರ ಮಿತಿಯನ್ನೂ (ವೇಸ್ ಅಂಡ್ ಮೀನ್ಸ್ ಅಡ್ವಾನ್ಸ್)ಆರ್ಬಿಐ ಶೇ 30ರಷ್ಟು ಹೆಚ್ಚಿಸಿದೆ. ಹೊಸ ನಿಯಮ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಸೆಪ್ಟೆಂಬರ್ 30ರವರೆಗೂ ಜಾರಿಯಲ್ಲಿರುತ್ತದೆ.</p>.<p>ಅನೂಹ್ಯ ಸಂದರ್ಭಗಳಲ್ಲಿ ಉಂಟಾಗಬಹುದಾದ ನಷ್ಟಗಳನ್ನು ತುಂಬಿಕೊಳ್ಳಲು ಬ್ಯಾಂಕ್ಗಳು ಮೀಸಲಿಡುವ ಬಂಡವಾಳ ನಿಧಿ ನಿಯಮಗಳನ್ನು ಸಡಿಲಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ.</p>.<p>ಕೋವಿಡ್-19 ಪಿಡುಗಿನಿನಿಂದ ವಿಶ್ವದ ಹಲವು ದೇಶಗಳು ಸಂಕಷ್ಟ ಪರಿಸ್ಥಿತಿ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜುಲೈ 31ರವರೆಗೆ ರಫ್ತು ಮಾಡಿದ ಉತ್ಪನ್ನಗಳಹಣ ಸ್ವೀಕಾರಕ್ಕೆಸಮಯದ ಮಿತಿಯನ್ನು 15 ತಿಂಗಳಿಗೆ ವಿಸ್ತರಿಸಲಾಗಿದೆ.ಇದರಿಂದ ರಫ್ತುದಾರರು ಪಾವತಿ ಒಪ್ಪಂದಗಳನ್ನು ಹೊಸ ರೀತಿಯಲ್ಲಿ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಂತೆ ಆಗಿದೆ ಎಂದು ಆರ್ಬಿಐ ಹೇಳಿದೆ.</p>.<p>ಕೊರೊನಾ ವೈರಸ್ ಸೋಂಕು ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಯಲು ನಿರ್ಬಂಧ ವಿಧಿಸಿರುವ ಕಾರಣ, ರಾಜ್ಯ ಸರ್ಕಾರಗಳ ಆದಾಯದಲ್ಲಿ ಕೊರತೆಯಾಗಬಹುದು. ಈ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ನೀಡುವ ಮುಂಗಡಗಳ ಪ್ರಮಾಣವನ್ನು ಶೇ 30ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದೂ ಸಹ ಆರ್ಥಿಕತೆಯ ಚೇತರಿಕೆಗೆ ಪೂರಕ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕೋವಿಡ್-19 ಭೀತಿಯಿಂದ ಕುಸಿಯುತ್ತಿರುವ ಆರ್ಥಿಕತೆಗೆ ಆಸರೆ ಒದಗಿಸಲು ಭಾರತೀಯರಿಸರ್ವ್ ಬ್ಯಾಂಕ್ ಬುಧವಾರ ಹಲವು ಕ್ರಮಗಳನ್ನು ಪ್ರಕಟಿಸಿದೆ.</p>.<p>ರಫ್ತು ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಉದ್ಯಮಿಗಳಿಗೆ ವಿದೇಶಿ ಗ್ರಾಹಕರಿಗೆ ಸರಬರಾಜು ಮಾಡಿದ ಉತ್ಪನ್ನಗಳಿಗೆ ಹಣ ಪಡೆದುಕೊಳ್ಳಲು ಇದ್ದ ಸಮಯದ ಮಿತಿಯನ್ನು 9 ತಿಂಗಳಿನಿಂದ 15 ತಿಂಗಳಿಗೆವಿಸ್ತರಿಸಲಾಗಿದೆ.</p>.<p>ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಂಗಡ ಸ್ವೀಕಾರ ಮಿತಿಯನ್ನೂ (ವೇಸ್ ಅಂಡ್ ಮೀನ್ಸ್ ಅಡ್ವಾನ್ಸ್)ಆರ್ಬಿಐ ಶೇ 30ರಷ್ಟು ಹೆಚ್ಚಿಸಿದೆ. ಹೊಸ ನಿಯಮ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಸೆಪ್ಟೆಂಬರ್ 30ರವರೆಗೂ ಜಾರಿಯಲ್ಲಿರುತ್ತದೆ.</p>.<p>ಅನೂಹ್ಯ ಸಂದರ್ಭಗಳಲ್ಲಿ ಉಂಟಾಗಬಹುದಾದ ನಷ್ಟಗಳನ್ನು ತುಂಬಿಕೊಳ್ಳಲು ಬ್ಯಾಂಕ್ಗಳು ಮೀಸಲಿಡುವ ಬಂಡವಾಳ ನಿಧಿ ನಿಯಮಗಳನ್ನು ಸಡಿಲಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ.</p>.<p>ಕೋವಿಡ್-19 ಪಿಡುಗಿನಿನಿಂದ ವಿಶ್ವದ ಹಲವು ದೇಶಗಳು ಸಂಕಷ್ಟ ಪರಿಸ್ಥಿತಿ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜುಲೈ 31ರವರೆಗೆ ರಫ್ತು ಮಾಡಿದ ಉತ್ಪನ್ನಗಳಹಣ ಸ್ವೀಕಾರಕ್ಕೆಸಮಯದ ಮಿತಿಯನ್ನು 15 ತಿಂಗಳಿಗೆ ವಿಸ್ತರಿಸಲಾಗಿದೆ.ಇದರಿಂದ ರಫ್ತುದಾರರು ಪಾವತಿ ಒಪ್ಪಂದಗಳನ್ನು ಹೊಸ ರೀತಿಯಲ್ಲಿ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಂತೆ ಆಗಿದೆ ಎಂದು ಆರ್ಬಿಐ ಹೇಳಿದೆ.</p>.<p>ಕೊರೊನಾ ವೈರಸ್ ಸೋಂಕು ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಯಲು ನಿರ್ಬಂಧ ವಿಧಿಸಿರುವ ಕಾರಣ, ರಾಜ್ಯ ಸರ್ಕಾರಗಳ ಆದಾಯದಲ್ಲಿ ಕೊರತೆಯಾಗಬಹುದು. ಈ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ನೀಡುವ ಮುಂಗಡಗಳ ಪ್ರಮಾಣವನ್ನು ಶೇ 30ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದೂ ಸಹ ಆರ್ಥಿಕತೆಯ ಚೇತರಿಕೆಗೆ ಪೂರಕ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>