<p><strong>ನವದೆಹಲಿ: </strong>ದೇಶದಲ್ಲಿ ಹಣಕಾಸು ಹರಿವು ಹೆಚ್ಚಿಸಲುಮತ್ತು<strong></strong>ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಆರ್ಬಿಐ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಗವರ್ನರ್ ಶಕ್ತಿಕಾಂತದಾಸ್ ಬುಧವಾರ ಹೇಳಿದ್ದಾರೆ.</p>.<p>ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತೀಯ ಆರ್ಥಿಕತೆಯು ಶೇಕಡಾ 23.9 ರಷ್ಟು ಇಳಿಕೆ ಕಂಡಿದೆ.</p>.<p>ಕೈಗಾರಿಕಾ ಸಂಸ್ಥೆ ಎಫ್ಐಸಿಸಿಐ ಆಯೋಜಿಸಿದ್ದ ವರ್ಚುವಲ್ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ದಾಸ್, ಸರ್ಕಾರ ಬಿಡುಗಡೆ ಮಾಡಿದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ದರವುಕೋವಿಡ್-19 ಎಂಬ ವಿನಾಶದ ಪ್ರತಿಬಿಂಬವಾಗಿದೆ.</p>.<p>ಆದಾಗ್ಯೂ, ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ಹೇಳಿದ ಅವರು ಕೆಲವು ಕ್ಷೇತ್ರಗಳಲ್ಲಿ ಜೂನ್ ಮತ್ತು ಜುಲೈನಲ್ಲಿನ ಬೆಳವಣಿಗೆ ಸಮತೋಲನ ಸಾಧಿಸಿಕೊಂಡಿವೆ. ಈ ಎಲ್ಲಾ ಸೂಚನೆಗಳ ಪ್ರಕಾರ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದರೂ ಆರ್ಥಿಕತೆ ಕ್ರಮೇಣ ಚೇತರಿಕೆ ಆಗುವ ಸಾಧ್ಯತೆ ಇದೆ ಎಂದಿದ್ದಾರೆ.</p>.<p>ಸರ್ಕಾರದ ಅಂಕಿಅಂಶಗಳ ಪ್ರಕಾರ, ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಶೇಕಡಾ 23.9 ರಷ್ಟು ಕುಸಿದಿದ್ದು, ಕೊರೊನಾವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಮಾರ್ಚ್ ಅಂತ್ಯದ ವೇಳೆಗೆ ಸರ್ಕಾರ ವಿಧಿಸಿರುವ ಕಟ್ಟುನಿಟ್ಟಾದ ಲಾಕ್ಡೌನ್ ಇದಕ್ಕೆ ಕಾರಣವಾಗಿದೆ.</p>.<p>ಕೊರೊನಾ ರೋಗ ಮತ್ತು ಲಾಕ್ಡೌನ್ ಉದ್ಯಮದ ಮೇಲೆ ಪರಿಣಾಮ ಬೀರಿರುವುದರಿಂದ ಲಿಕ್ವಿಡಿಟಿ ಸೌಲಭ್ಯ ಮತ್ತು ವ್ಯವಹಾರಗಳಿಗೆ ಹಣ ಲಭ್ಯಲಾಗುವಂತೆ ಮಾಡುವ ಉಪಕ್ರಮಗಳ ಬಗ್ಗೆ ಶಕ್ತಿಕಾಂತ್ ದಾಸ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.</p>.<p>ಕೋವಿಡ್ -19 ನಿಂದ ಉಂಟಾಗಿರುವ ಬಿಕ್ಕಟ್ಟಿನಿಂದ ಹೊರಬರಲು ಉದ್ಯಮ ಮತ್ತು ವ್ಯವಹಾರಗಳಿಗೆ ಸಹಾಯ ಮಾಡಲು ಆರ್ಬಿಐ ಸಿದ್ಧವಾಗಿದೆ. ಇದಕ್ಕೆ ಅಗತ್ಯವಿರುವ ಯಾವುದೇ ಕ್ರಮಗಳನ್ನು ಆರ್ಬಿಐ ತೆಗೆದುಕೊಳ್ಳುತ್ತದೆ ಎಂದು ಗವರ್ನರ್ ಭರವಸೆ ನೀಡಿದ್ದಾರೆ.</p>.<p>ಅದೇ ವೇಳೆ ಕೋವಿಡ್ 19 ರೋಗವು ಜಾಗತಿಕ ಮಟ್ಟದಲ್ಲಿ ಸೃಷ್ಟಿಸಿದ ಹೊಸ ಅವಕಾಶಗಳ ಲಾಭಪಡೆದುಕೊಳ್ಳುವಂತೆ ಅವರು ಉದ್ಯಮಿಗಳಿಗೆ ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದಲ್ಲಿ ಹಣಕಾಸು ಹರಿವು ಹೆಚ್ಚಿಸಲುಮತ್ತು<strong></strong>ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಆರ್ಬಿಐ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಗವರ್ನರ್ ಶಕ್ತಿಕಾಂತದಾಸ್ ಬುಧವಾರ ಹೇಳಿದ್ದಾರೆ.</p>.<p>ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತೀಯ ಆರ್ಥಿಕತೆಯು ಶೇಕಡಾ 23.9 ರಷ್ಟು ಇಳಿಕೆ ಕಂಡಿದೆ.</p>.<p>ಕೈಗಾರಿಕಾ ಸಂಸ್ಥೆ ಎಫ್ಐಸಿಸಿಐ ಆಯೋಜಿಸಿದ್ದ ವರ್ಚುವಲ್ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ದಾಸ್, ಸರ್ಕಾರ ಬಿಡುಗಡೆ ಮಾಡಿದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ದರವುಕೋವಿಡ್-19 ಎಂಬ ವಿನಾಶದ ಪ್ರತಿಬಿಂಬವಾಗಿದೆ.</p>.<p>ಆದಾಗ್ಯೂ, ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ಹೇಳಿದ ಅವರು ಕೆಲವು ಕ್ಷೇತ್ರಗಳಲ್ಲಿ ಜೂನ್ ಮತ್ತು ಜುಲೈನಲ್ಲಿನ ಬೆಳವಣಿಗೆ ಸಮತೋಲನ ಸಾಧಿಸಿಕೊಂಡಿವೆ. ಈ ಎಲ್ಲಾ ಸೂಚನೆಗಳ ಪ್ರಕಾರ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದರೂ ಆರ್ಥಿಕತೆ ಕ್ರಮೇಣ ಚೇತರಿಕೆ ಆಗುವ ಸಾಧ್ಯತೆ ಇದೆ ಎಂದಿದ್ದಾರೆ.</p>.<p>ಸರ್ಕಾರದ ಅಂಕಿಅಂಶಗಳ ಪ್ರಕಾರ, ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಶೇಕಡಾ 23.9 ರಷ್ಟು ಕುಸಿದಿದ್ದು, ಕೊರೊನಾವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಮಾರ್ಚ್ ಅಂತ್ಯದ ವೇಳೆಗೆ ಸರ್ಕಾರ ವಿಧಿಸಿರುವ ಕಟ್ಟುನಿಟ್ಟಾದ ಲಾಕ್ಡೌನ್ ಇದಕ್ಕೆ ಕಾರಣವಾಗಿದೆ.</p>.<p>ಕೊರೊನಾ ರೋಗ ಮತ್ತು ಲಾಕ್ಡೌನ್ ಉದ್ಯಮದ ಮೇಲೆ ಪರಿಣಾಮ ಬೀರಿರುವುದರಿಂದ ಲಿಕ್ವಿಡಿಟಿ ಸೌಲಭ್ಯ ಮತ್ತು ವ್ಯವಹಾರಗಳಿಗೆ ಹಣ ಲಭ್ಯಲಾಗುವಂತೆ ಮಾಡುವ ಉಪಕ್ರಮಗಳ ಬಗ್ಗೆ ಶಕ್ತಿಕಾಂತ್ ದಾಸ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.</p>.<p>ಕೋವಿಡ್ -19 ನಿಂದ ಉಂಟಾಗಿರುವ ಬಿಕ್ಕಟ್ಟಿನಿಂದ ಹೊರಬರಲು ಉದ್ಯಮ ಮತ್ತು ವ್ಯವಹಾರಗಳಿಗೆ ಸಹಾಯ ಮಾಡಲು ಆರ್ಬಿಐ ಸಿದ್ಧವಾಗಿದೆ. ಇದಕ್ಕೆ ಅಗತ್ಯವಿರುವ ಯಾವುದೇ ಕ್ರಮಗಳನ್ನು ಆರ್ಬಿಐ ತೆಗೆದುಕೊಳ್ಳುತ್ತದೆ ಎಂದು ಗವರ್ನರ್ ಭರವಸೆ ನೀಡಿದ್ದಾರೆ.</p>.<p>ಅದೇ ವೇಳೆ ಕೋವಿಡ್ 19 ರೋಗವು ಜಾಗತಿಕ ಮಟ್ಟದಲ್ಲಿ ಸೃಷ್ಟಿಸಿದ ಹೊಸ ಅವಕಾಶಗಳ ಲಾಭಪಡೆದುಕೊಳ್ಳುವಂತೆ ಅವರು ಉದ್ಯಮಿಗಳಿಗೆ ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>